ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ಪಟ್ಟಣಗೆರೆ ಶೆಡ್​ ಮಾಲೀಕರಿಗೆ ಬಿಬಿಎಂಪಿ ನೋಟಿಸ್; ಕಾರಣ?

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 20, 2024 | 3:05 PM

ಚಿತ್ರದುರ್ಗದ ರೇಣುಕಾ ಸ್ವಾಮಿ(Renuka Swamy) ಎಂಬಾತನನ್ನು ನಟ ದರ್ಶನ್​ ಮತ್ತು ಗ್ಯಾಂಗ್​ ಸೇರಿಕೊಂಡು ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದೆ. ಅದರಂತೆ ಇದೀಗ ಕೊಲೆ ನಡೆದಿದೆ ಎನ್ನುವ ಜಾಗವಾದ ಪಟ್ಟಣಗೆರೆ ಶೆಡ್ (Pattanagere shed) ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ: ಪಟ್ಟಣಗೆರೆ ಶೆಡ್​ ಮಾಲೀಕರಿಗೆ ಬಿಬಿಎಂಪಿ ನೋಟಿಸ್; ಕಾರಣ?
ರೇಣುಕಾ ಸ್ವಾಮಿ ಹತ್ಯೆ ನಡೆದಿದ್ದ ಪಟ್ಟಣಗೆರೆ ಶೆಡ್​ ಮಾಲೀಕರಿಗೆ ಬಿಬಿಎಂಪಿ ನೋಟೀಸ್
Follow us on

ಬೆಂಗಳೂರು, ಜೂ.20: ನಟ ದರ್ಶನ್​ ಮತ್ತು ಗ್ಯಾಂಗ್​ ಸೇರಿಕೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ(Renuka Swamy) ಎಂಬಾತನ ಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯು ಚುರುಕುಗೊಂಡಿದ್ದು, ದಿನದಿಂದ ದಿನಕ್ಕೆ ಹೊಸದೊಂದು ತಿರುವು ಪಡೆಯುತ್ತಿದೆ. ಅದರಂತೆ ಇಂದು(ಜೂ.20) ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ಮಧ್ಯೆ ರೇಣುಕಾಸ್ವಾಮಿಯನ್ನ ಕೊಲೆ ನಡೆಸಲಾಗಿದೆ ಎನ್ನುವ ಜಾಗವಾದ ಪಟ್ಟಣಗೆರೆ ಶೆಡ್(Pattanagere shed) ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.

15 ದಿನಗಳ ಒಳಗಾಗಿ ಕಾರಣ ನೀಡುವಂತೆ ನೋಟೀಸ್

ಪಟ್ಟಣಗೆರೆ ಶೆಡ್ ಮಾಲೀಕ ಕೆ ಜಯಣ್ಣ ಅವರು ನಿಗದಿಯ ಜಾಗಕ್ಕೆ ಪಾಲಿಕೆಗೆ ಆಸ್ತಿ ತೆರಿಗೆಗೆ ಪಾವತಿಸಿಲ್ಲ. ಈ ಹಿನ್ನೆಲೆ ಆರ್​ಆರ್ ನಗರ ವಲಯ ಸಹಾಯಕ ಕಂದಾಯ ಅಧಿಕಾರಿ ಕೆ ಜಯಣ್ಣಗೆ ನೋಟೀಸ್ ಜಾರಿ ಮಾಡಿದ್ದಾರೆ. ಹೌದು, 2008ರಿಂದ ಈ ಸ್ವತ್ತಿಗೆ ಇದುವರೆಗೂ ಕೂಡ ಆಸ್ತಿ ತೆರಿಗೆ ಪಾವತಿಯಾಗಿಲ್ಲ. ಈ ಹಿನ್ನೆಲೆ 15 ದಿನಗಳ ಅವಧಿಯ ಒಳಗಾಗಿ ಸಂಬಂಧಪಟ್ಟ ದಾಖಲೆ ಹಾಗೂ ಕಾರಣ ನೀಡುವಂತೆ ನೋಟೀಸ್ ನೀಡಿದ್ದಾರೆ.

ಇದನ್ನೂ ಓದಿ:ಕೊಲೆ ನಡೆದ ಸ್ಥಳದಲ್ಲಿ ದರ್ಶನ್‌ ಕರೆತಂದು ‘ಚಿತ್ರೀಕರಣ’! ಪಟ್ಟಣಗೆರೆ ಶೆಡ್‌ನಲ್ಲಿ 13 ಆರೋಪಿಗಳ ಸ್ಥಳ ಮಹಜರು

ಇನ್ನು ಈ ಹಿಂದೆ ಪ್ರಕರಣದ ಕುರಿತು ಮಾತನಾಡಿದ್ದ ಶೆಡ್​ ಮಾಲೀಕ ಜಯಣ್ಣ, ‘ಇಲ್ಲಿ ಕೊಲೆ ನಡೆದಿರುವುದು ನನಗೆ ಮಾಧ್ಯಮಗಳ ಮೂಲಕ ತಿಳಿಯಿತು. ಇನ್ನು ಈ ಶೆಡ್​​ನ್ನು ನನ್ನ ತಂಗಿಯ ಮಗ ಕಿಶೋರ್​​ ಎಂಬುವವರಿಗೆ ಬಾಡಿಗೆ ನೀಡಲಾಗಿದೆ. ಈ ಕುರಿತು ಪೊಲೀಸರು ನನ್ನನ್ನು ವಿಚಾರಣೆಗೆ ಕರೆದರೆ ಎದುರಿಸಲು ಸಿದ್ದನಿದ್ದೇನೆ. ಪೊಲೀಸರು ಕಾನೂನು ರೀತಿ ಕ್ರಮಕೈಗೊಳ್ಳಲಿ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Thu, 20 June 24