AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತೆರಿಗೆ ಪಾವತಿಸದ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಿದ BBMP ಅಧಿಕಾರಿಗಳು

ಇವತ್ತು ತೆರಿಗೆ ಕೇಳೋಕೆ ಬಂದಿದ್ದೀವಿ. ಕಮಿಷನರ್ ಹತ್ರ ಮಾತಾಡ್ತಿವಿ ಅಂತಿದ್ದಾರೆ. ಕಮಿಷನರ್​ರಿಂದ ನಮಗೆ ಯಾವುದೇ ಸೂಚನೆ ಬಂದಿಲ್ಲ. ಸ್ವಲ್ಪ ಸಮಯ ಕಾಯ್ತಿವಿ, ನಂತರ ನಿರ್ಧಾರ ತಗೋತಿವಿ ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ತೆರಿಗೆ ಪಾವತಿಸದ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಿದ BBMP ಅಧಿಕಾರಿಗಳು
ಮಂತ್ರಿ ಮಾಲ್‌
TV9 Web
| Edited By: |

Updated on:Nov 15, 2021 | 6:30 PM

Share

ಬೆಂಗಳೂರು: ಮಂತ್ರಿ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಇಂದು (ನವೆಂಬರ್ 15) ಮತ್ತೆ ಬೀಗ ಹಾಕಿದ್ದಾರೆ. ತೆರಿಗೆ ಪಾವತಿಸದ ಹಿನ್ನೆಲೆ ಮಂತ್ರಿ ಮಾಲ್​ಗೆ ಮತ್ತೆ ಬೀಗ ಹಾಕಲಾಗಿದೆ. 22 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಂತ್ರಿಮಾಲ್ ವಿರುದ್ಧ ಬಿಬಿಎಂಪಿ ಕ್ರಮ ಕೈಗೊಂಡಿದೆ. ಹಿಂದೆ ಬೀಗ ಹಾಕಿದ್ದಾಗ 5 ಕೋಟಿ ತೆರಿಗೆ ಪಾವತಿಸಿದ್ದ ಮಾಲ್ ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿತ್ತು. ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಇದೀಗ ಮುಕ್ತಾಯಗೊಂಡ ಹಿನ್ನೆಲೆ ಇಂದು ಮತ್ತೆ ಮಂತ್ರಿಮಾಲ್​ಗೆ ಬೀಗ ಹಾಕಲಾಗಿದೆ.

ಮಾಲ್​ನ ಮುಖ್ಯದ್ವಾರಕ್ಕೆ ಅಡ್ಡಲಾಗಿ ಅಧಿಕಾರಿಗಳು ನಿಂತಿದ್ದಾರೆ. ಮಾಲ್ ಒಳಗೆ ಯಾರನ್ನು ಬಿಡದೆ ಬಾಗಿಲು ಹಾಕಿದ್ದಾರೆ. ಕಳೆದ ಮೂರು ವರ್ಷದಿಂದ ಟ್ಯಾಕ್ಸ್ ಕಟ್ಟದ ಮಂತ್ರಿಮಾಲ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಮಂತ್ರಿ ಮಾಲ್ 27 ಕೋಟಿ ಬಾಕಿ ಬಡ್ಡಿ ಸಮೇತ 36 ಕೋಟಿ ಹಣ ಕಟ್ಟಬೇಕಿದೆ. ಕಳೆದ ಬಾರಿ 5 ಕೋಟಿ ಹಣ ಕಟ್ಟಿ ಟೈಂ ತೆಗೆದುಕೊಂಡಿದ್ದ ಮಂತ್ರಿಮಾಲ್, ಮತ್ತೆ ಟ್ಯಾಕ್ಸ್ ಕಟ್ಟದ ಕಾರಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಬಂದಿರುವ ಬಿಬಿಎಂಪಿ ಅಧಿಕಾರಿಗಳು‌ ಹಣ ಕಟ್ಟದೇ ಇದ್ರೆ ಮಂತ್ರಿಮಾಲ್ ಬಾಗಿಲು ಹಾಕಿಸುವ ಎಚ್ಚರಿಕೆ ನೀಡಿದ್ದಾರೆ. ಮಂತ್ರಿಮಾಲ್​ನಿಂದ ಮೂರು ವರ್ಷದಿಂದ 27 ಕೋಟಿ ತೆರಿಗೆ ಕಟ್ಟಿಲ್ಲ. ಕಳೆದ ಬಾರಿ 5 ಕೋಟಿ ಕಟ್ಟಿದ್ರು, ಆಗಸ್ಟ್‌ ಮೂವತ್ತಕ್ಕೆ ಉಳಿದ ಹಣ ನೀಡುವುದಾಗಿ ಹೇಳಿದ್ರು‌. ಇನ್ನೂ ಕಟ್ಟಿಲ್ಲ ಹಾಗಾಗಿ ಇವತ್ತು ತೆರಿಗೆ ಕೇಳೋಕೆ ಬಂದಿದ್ದೀವಿ. ಕಮಿಷನರ್ ಹತ್ರ ಮಾತಾಡ್ತಿವಿ ಅಂತಿದ್ದಾರೆ. ಕಮಿಷನರ್​ರಿಂದ ನಮಗೆ ಯಾವುದೇ ಸೂಚನೆ ಬಂದಿಲ್ಲ. ಸ್ವಲ್ಪ ಸಮಯ ಕಾಯ್ತಿವಿ, ನಂತರ ನಿರ್ಧಾರ ತಗೋತಿವಿ ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಮಂತ್ರಿಮಾಲ್​ಗೆ 15 ದಿನ ಕಾಲಾವಕಾಶ ನೀಡಿದ ಬಿಬಿಎಂಪಿ 15 ದಿನಗಳೊಳಗೆ ತೆರಿಗೆ ಪಾವತಿಸುವಂತೆ ಮಾಲ್​​ಗೆ ಗಡುವು ನೀಡಲಾಗಿದೆ. 15 ದಿನದೊಳಗೆ ತೆರಿಗೆ ಪಾವತಿಸುವುದಾಗಿ ಮಾಲೀಕರ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರ ಬಳಿ ಮಂತ್ರಿಮಾಲ್ ಮಾಲೀಕ ಮನವಿ ಮಾಡಿಕೊಂಡಿರುವ ಬಗ್ಗೆ ತಿಳಿದುಬಂದಿದೆ. ಹೀಗಾಗಿ ಬಿಬಿಎಂಪಿ 15 ದಿನಗಳ ಕಾಲಾವಕಾಶ ನೀಡಿದೆ. ಈ ತಿಂಗಳ ಅಂತ್ಯದೊಳಗೆ ತೆರಿಗೆ ಪಾವತಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Delhi Pollution: ದೆಹಲಿಯಲ್ಲಿ ಸಂಪೂರ್ಣ ಲಾಕ್​ಡೌನ್​ಗೆ ಸಿದ್ಧ; ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್ ಸರ್ಕಾರ

ಇದನ್ನೂ ಓದಿ: Kurup: ದುಲ್ಕರ್ ಸಲ್ಮಾನ್ ನಟನೆಯ ಕುರುಪ್ ಚಿತ್ರಕ್ಕೆ ಸಂಕಷ್ಟ; ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

Published On - 5:53 pm, Mon, 15 November 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು