AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ತೆರಿಗೆ ಪಾವತಿಸದ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಿದ BBMP ಅಧಿಕಾರಿಗಳು

ಇವತ್ತು ತೆರಿಗೆ ಕೇಳೋಕೆ ಬಂದಿದ್ದೀವಿ. ಕಮಿಷನರ್ ಹತ್ರ ಮಾತಾಡ್ತಿವಿ ಅಂತಿದ್ದಾರೆ. ಕಮಿಷನರ್​ರಿಂದ ನಮಗೆ ಯಾವುದೇ ಸೂಚನೆ ಬಂದಿಲ್ಲ. ಸ್ವಲ್ಪ ಸಮಯ ಕಾಯ್ತಿವಿ, ನಂತರ ನಿರ್ಧಾರ ತಗೋತಿವಿ ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ತೆರಿಗೆ ಪಾವತಿಸದ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಹಾಕಿದ BBMP ಅಧಿಕಾರಿಗಳು
ಮಂತ್ರಿ ಮಾಲ್‌
TV9 Web
| Edited By: |

Updated on:Nov 15, 2021 | 6:30 PM

Share

ಬೆಂಗಳೂರು: ಮಂತ್ರಿ ಮಾಲ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಇಂದು (ನವೆಂಬರ್ 15) ಮತ್ತೆ ಬೀಗ ಹಾಕಿದ್ದಾರೆ. ತೆರಿಗೆ ಪಾವತಿಸದ ಹಿನ್ನೆಲೆ ಮಂತ್ರಿ ಮಾಲ್​ಗೆ ಮತ್ತೆ ಬೀಗ ಹಾಕಲಾಗಿದೆ. 22 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಂತ್ರಿಮಾಲ್ ವಿರುದ್ಧ ಬಿಬಿಎಂಪಿ ಕ್ರಮ ಕೈಗೊಂಡಿದೆ. ಹಿಂದೆ ಬೀಗ ಹಾಕಿದ್ದಾಗ 5 ಕೋಟಿ ತೆರಿಗೆ ಪಾವತಿಸಿದ್ದ ಮಾಲ್ ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿತ್ತು. ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಇದೀಗ ಮುಕ್ತಾಯಗೊಂಡ ಹಿನ್ನೆಲೆ ಇಂದು ಮತ್ತೆ ಮಂತ್ರಿಮಾಲ್​ಗೆ ಬೀಗ ಹಾಕಲಾಗಿದೆ.

ಮಾಲ್​ನ ಮುಖ್ಯದ್ವಾರಕ್ಕೆ ಅಡ್ಡಲಾಗಿ ಅಧಿಕಾರಿಗಳು ನಿಂತಿದ್ದಾರೆ. ಮಾಲ್ ಒಳಗೆ ಯಾರನ್ನು ಬಿಡದೆ ಬಾಗಿಲು ಹಾಕಿದ್ದಾರೆ. ಕಳೆದ ಮೂರು ವರ್ಷದಿಂದ ಟ್ಯಾಕ್ಸ್ ಕಟ್ಟದ ಮಂತ್ರಿಮಾಲ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಮಂತ್ರಿ ಮಾಲ್ 27 ಕೋಟಿ ಬಾಕಿ ಬಡ್ಡಿ ಸಮೇತ 36 ಕೋಟಿ ಹಣ ಕಟ್ಟಬೇಕಿದೆ. ಕಳೆದ ಬಾರಿ 5 ಕೋಟಿ ಹಣ ಕಟ್ಟಿ ಟೈಂ ತೆಗೆದುಕೊಂಡಿದ್ದ ಮಂತ್ರಿಮಾಲ್, ಮತ್ತೆ ಟ್ಯಾಕ್ಸ್ ಕಟ್ಟದ ಕಾರಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಬಂದಿರುವ ಬಿಬಿಎಂಪಿ ಅಧಿಕಾರಿಗಳು‌ ಹಣ ಕಟ್ಟದೇ ಇದ್ರೆ ಮಂತ್ರಿಮಾಲ್ ಬಾಗಿಲು ಹಾಕಿಸುವ ಎಚ್ಚರಿಕೆ ನೀಡಿದ್ದಾರೆ. ಮಂತ್ರಿಮಾಲ್​ನಿಂದ ಮೂರು ವರ್ಷದಿಂದ 27 ಕೋಟಿ ತೆರಿಗೆ ಕಟ್ಟಿಲ್ಲ. ಕಳೆದ ಬಾರಿ 5 ಕೋಟಿ ಕಟ್ಟಿದ್ರು, ಆಗಸ್ಟ್‌ ಮೂವತ್ತಕ್ಕೆ ಉಳಿದ ಹಣ ನೀಡುವುದಾಗಿ ಹೇಳಿದ್ರು‌. ಇನ್ನೂ ಕಟ್ಟಿಲ್ಲ ಹಾಗಾಗಿ ಇವತ್ತು ತೆರಿಗೆ ಕೇಳೋಕೆ ಬಂದಿದ್ದೀವಿ. ಕಮಿಷನರ್ ಹತ್ರ ಮಾತಾಡ್ತಿವಿ ಅಂತಿದ್ದಾರೆ. ಕಮಿಷನರ್​ರಿಂದ ನಮಗೆ ಯಾವುದೇ ಸೂಚನೆ ಬಂದಿಲ್ಲ. ಸ್ವಲ್ಪ ಸಮಯ ಕಾಯ್ತಿವಿ, ನಂತರ ನಿರ್ಧಾರ ತಗೋತಿವಿ ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಮಂತ್ರಿಮಾಲ್​ಗೆ 15 ದಿನ ಕಾಲಾವಕಾಶ ನೀಡಿದ ಬಿಬಿಎಂಪಿ 15 ದಿನಗಳೊಳಗೆ ತೆರಿಗೆ ಪಾವತಿಸುವಂತೆ ಮಾಲ್​​ಗೆ ಗಡುವು ನೀಡಲಾಗಿದೆ. 15 ದಿನದೊಳಗೆ ತೆರಿಗೆ ಪಾವತಿಸುವುದಾಗಿ ಮಾಲೀಕರ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರ ಬಳಿ ಮಂತ್ರಿಮಾಲ್ ಮಾಲೀಕ ಮನವಿ ಮಾಡಿಕೊಂಡಿರುವ ಬಗ್ಗೆ ತಿಳಿದುಬಂದಿದೆ. ಹೀಗಾಗಿ ಬಿಬಿಎಂಪಿ 15 ದಿನಗಳ ಕಾಲಾವಕಾಶ ನೀಡಿದೆ. ಈ ತಿಂಗಳ ಅಂತ್ಯದೊಳಗೆ ತೆರಿಗೆ ಪಾವತಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Delhi Pollution: ದೆಹಲಿಯಲ್ಲಿ ಸಂಪೂರ್ಣ ಲಾಕ್​ಡೌನ್​ಗೆ ಸಿದ್ಧ; ಸುಪ್ರೀಂ ಕೋರ್ಟ್​ಗೆ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್ ಸರ್ಕಾರ

ಇದನ್ನೂ ಓದಿ: Kurup: ದುಲ್ಕರ್ ಸಲ್ಮಾನ್ ನಟನೆಯ ಕುರುಪ್ ಚಿತ್ರಕ್ಕೆ ಸಂಕಷ್ಟ; ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ

Published On - 5:53 pm, Mon, 15 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ