AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mantri Mall: ಬಿಬಿಎಂಪಿ ಅಧಿಕಾರಿಗಳಿಂದ ಬೆಂಗಳೂರಿನ ಮಂತ್ರಿ ಮಾಲ್​ಗೆ ಮತ್ತೆ ಬಿತ್ತು ಬೀಗ

ತೆರಿಗೆ ಪಾವತಿಸದ ಹಿನ್ನೆಲೆ ಈ ಹಿಂದೆ ಅಂದರೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಹಿಂದೆ ಬೀಗ ಹಾಕಿದ್ದಾಗ 5 ಕೋಟಿ ತೆರಿಗೆ ಪಾವತಿಸಿದ್ದ ಮಾಲ್ ಮಾಲೀಕರು, ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿತ್ತು.

Mantri Mall: ಬಿಬಿಎಂಪಿ ಅಧಿಕಾರಿಗಳಿಂದ ಬೆಂಗಳೂರಿನ ಮಂತ್ರಿ ಮಾಲ್​ಗೆ ಮತ್ತೆ ಬಿತ್ತು ಬೀಗ
ಮಂತ್ರಿ ಮಾಲ್‌
TV9 Web
| Edited By: sandhya thejappa|

Updated on:Dec 06, 2021 | 12:17 PM

Share

ಬೆಂಗಳೂರು: ನಗರದ ಪ್ರತಿಷ್ಠಿತ ಮಂತ್ರಿ ಮಾಲ್​ಗೆ (Mantri Mall) ಮತ್ತೆ ಬೀಗ ಬಿದ್ದಿದೆ. ಬಿಬಿಎಂಪಿಗೆ (BBMP) ಸುಮಾರು 27 ಕೋಟಿ ತೆರಿಗೆ ಪಾವತಿಸದ ಹಿನ್ನೆಲೆ ಬೀಗ ಹಾಕಲಾಗಿದೆ. 3 ವರ್ಷದಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 27 ಕೋಟಿ ತೆರಿಗೆಯನ್ನು ಪಾವತಿಸಿಲ್ಲ. ಪದೇಪದೆ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿಲ್ಲ. ಹೀಗಾಗಿ ಇಂದು (ಡಿಸೆಂಬರ್ 6) ಮತ್ತೆ ಬಿಬಿಎಂಪಿ ಪಶ್ಚಿಮ ವಲಯದ ಅಧಿಕಾರಿಗಳು ಮಾಲ್​ಗೆ ಬೀಗ ಜಡಿದಿದ್ದಾರೆ.

ಮಂತ್ರಿ ಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕುತ್ತಿರುವುದು ಇದು ಮೊದಲೇನಲ್ಲ. ಮೂರ್ನಾಲ್ಕು ಬಾರಿ ಬೀಗ ಹಾಕಿದ್ದಾರೆ. ಈ ವೇಳೆ ಮಾಲ್​ ಮಾಲೀಕರು ಸಮಯವನ್ನು ಕೇಳಿದ್ದರು. ತೆರಿಗೆ ಪಾವತಿಸದ ಹಿನ್ನೆಲೆ ಈ ಹಿಂದೆ ಅಂದರೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಹಿಂದೆ ಬೀಗ ಹಾಕಿದ್ದಾಗ 5 ಕೋಟಿ ತೆರಿಗೆ ಪಾವತಿಸಿದ್ದ ಮಾಲ್ ಮಾಲೀಕರು, ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿದ್ದರು. ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಮುಕ್ತಾಯಗೊಂಡಿದ್ದರಿಂದ ಬೀಗ ಹಾಕಲಾಗಿತ್ತು.

ಮಂತ್ರಿಮಾಲ್​ಗೆ 15 ದಿನ ಕಾಲಾವಕಾಶ ನೀಡಿದ್ದ ಬಿಬಿಎಂಪಿ ಈ ಹಿಂದೆ 15 ದಿನಗಳೊಳಗೆ ತೆರಿಗೆ ಪಾವತಿಸುವಂತೆ ಮಾಲ್​ಗೆ ಗಡುವು ನೀಡಲಾಗಿತ್ತು. 15 ದಿನದೊಳಗೆ ತೆರಿಗೆ ಪಾವತಿಸುವುದಾಗಿ ಮಾಲೀಕರು ಮನವಿ ಮಾಡಿದ್ದರು. ಬಿಬಿಎಂಪಿ ಆಯುಕ್ತರ ಬಳಿ ಮಂತ್ರಿಮಾಲ್ ಮಾಲೀಕ ಮನವಿ ಮಾಡಿಕೊಂಡಿದ್ದರಂತೆ. ಹೀಗಾಗಿ ಬಿಬಿಎಂಪಿ 15 ದಿನಗಳ ಕಾಲಾವಕಾಶ ನೀಡಿತ್ತು. ನವೆಂಬರ್ ತಿಂಗಳ ಅಂತ್ಯದೊಳಗೆ ತೆರಿಗೆ ಪಾವತಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಇನ್ನು ಉಳಿದ ಬಾಕಿ ತೆರಿಗೆ ಹಣ ನೀಡದ ಕಾರಣ ಇಂದು ಮತ್ತೆ ಬೀಗ ಹಾಕಲಾಗಿದೆ.

ಈ ಹಿಂದೆ ಸ್ಥಳಕ್ಕೆ ಬಂದಿದ್ದ ಬಿಬಿಎಂಪಿ ಅಧಿಕಾರಿಗಳು‌ ಹಣ ಕಟ್ಟದೇ ಇದ್ರೆ ಮಂತ್ರಿಮಾಲ್ ಬಾಗಿಲು ಹಾಕಿಸುವ ಎಚ್ಚರಿಕೆ ನೀಡಿದ್ದರು. ಮಂತ್ರಿಮಾಲ್​ನಿಂದ ಮೂರು ವರ್ಷದಿಂದ 27 ಕೋಟಿ ತೆರಿಗೆ ಕಟ್ಟಿಲ್ಲ. ಕಳೆದ ಬಾರಿ 5 ಕೋಟಿ ಕಟ್ಟಿದ್ದರು. ಉಳಿದ ಹಣ ನೀಡುವುದಾಗಿ ಹೇಳಿದ್ದರು.

ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್​ಗೆ ಸೆಪ್ಟೆಂಬರ್ 30ಕ್ಕೆ ಬೀಗ ಹಾಕಲಾಗಿತ್ತು.  ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ಅವರಿಂದ ಬೀಗ ಜಡಿಯುವ ಕಾರ್ಯ ನೆರವೇರಿತ್ತು.

ಇದನ್ನೂ ಓದಿ

Nagaland Firing: ನಾಗಾಲ್ಯಾಂಡ್​ ಫೈರಿಂಗ್​ ಪ್ರಕರಣದ ಸಾವಿನ ಸಂಖ್ಯೆ 15ಕ್ಕೆ ಏರಿಕೆ; ಇಂದು ಘಟನಾಸ್ಥಳಕ್ಕೆ ಭೇಟಿಕೊಡಲಿದೆ ಟಿಎಂಸಿ ನಿಯೋಗ

ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್ 12ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ; ಸ್ಥಳದಲ್ಲೇ ಸಾವು

Published On - 12:04 pm, Mon, 6 December 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ