AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mantri Mall: ಬಿಬಿಎಂಪಿ ಅಧಿಕಾರಿಗಳಿಂದ ಬೆಂಗಳೂರಿನ ಮಂತ್ರಿ ಮಾಲ್​ಗೆ ಮತ್ತೆ ಬಿತ್ತು ಬೀಗ

ತೆರಿಗೆ ಪಾವತಿಸದ ಹಿನ್ನೆಲೆ ಈ ಹಿಂದೆ ಅಂದರೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಹಿಂದೆ ಬೀಗ ಹಾಕಿದ್ದಾಗ 5 ಕೋಟಿ ತೆರಿಗೆ ಪಾವತಿಸಿದ್ದ ಮಾಲ್ ಮಾಲೀಕರು, ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿತ್ತು.

Mantri Mall: ಬಿಬಿಎಂಪಿ ಅಧಿಕಾರಿಗಳಿಂದ ಬೆಂಗಳೂರಿನ ಮಂತ್ರಿ ಮಾಲ್​ಗೆ ಮತ್ತೆ ಬಿತ್ತು ಬೀಗ
ಮಂತ್ರಿ ಮಾಲ್‌
TV9 Web
| Edited By: sandhya thejappa|

Updated on:Dec 06, 2021 | 12:17 PM

Share

ಬೆಂಗಳೂರು: ನಗರದ ಪ್ರತಿಷ್ಠಿತ ಮಂತ್ರಿ ಮಾಲ್​ಗೆ (Mantri Mall) ಮತ್ತೆ ಬೀಗ ಬಿದ್ದಿದೆ. ಬಿಬಿಎಂಪಿಗೆ (BBMP) ಸುಮಾರು 27 ಕೋಟಿ ತೆರಿಗೆ ಪಾವತಿಸದ ಹಿನ್ನೆಲೆ ಬೀಗ ಹಾಕಲಾಗಿದೆ. 3 ವರ್ಷದಿಂದ ಮಂತ್ರಿ ಮಾಲ್ ಬಿಬಿಎಂಪಿಗೆ ಒಟ್ಟು 27 ಕೋಟಿ ತೆರಿಗೆಯನ್ನು ಪಾವತಿಸಿಲ್ಲ. ಪದೇಪದೆ ನೋಟಿಸ್ ಜಾರಿ ಮಾಡಿದರೂ ತೆರಿಗೆ ಪಾವತಿಸಿಲ್ಲ. ಹೀಗಾಗಿ ಇಂದು (ಡಿಸೆಂಬರ್ 6) ಮತ್ತೆ ಬಿಬಿಎಂಪಿ ಪಶ್ಚಿಮ ವಲಯದ ಅಧಿಕಾರಿಗಳು ಮಾಲ್​ಗೆ ಬೀಗ ಜಡಿದಿದ್ದಾರೆ.

ಮಂತ್ರಿ ಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕುತ್ತಿರುವುದು ಇದು ಮೊದಲೇನಲ್ಲ. ಮೂರ್ನಾಲ್ಕು ಬಾರಿ ಬೀಗ ಹಾಕಿದ್ದಾರೆ. ಈ ವೇಳೆ ಮಾಲ್​ ಮಾಲೀಕರು ಸಮಯವನ್ನು ಕೇಳಿದ್ದರು. ತೆರಿಗೆ ಪಾವತಿಸದ ಹಿನ್ನೆಲೆ ಈ ಹಿಂದೆ ಅಂದರೆ ನವೆಂಬರ್ 15ಕ್ಕೆ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಹಿಂದೆ ಬೀಗ ಹಾಕಿದ್ದಾಗ 5 ಕೋಟಿ ತೆರಿಗೆ ಪಾವತಿಸಿದ್ದ ಮಾಲ್ ಮಾಲೀಕರು, ಬಳಿಕ ಬಾಕಿ ತೆರಿಗೆ ಪಾವತಿಗೆ ಸಮಯ ಕೇಳಿದ್ದರು. ಆಡಳಿತ ಮಂಡಳಿಗೆ ಕೊಟ್ಟ ಸಮಯಾವಕಾಶ ಮುಕ್ತಾಯಗೊಂಡಿದ್ದರಿಂದ ಬೀಗ ಹಾಕಲಾಗಿತ್ತು.

ಮಂತ್ರಿಮಾಲ್​ಗೆ 15 ದಿನ ಕಾಲಾವಕಾಶ ನೀಡಿದ್ದ ಬಿಬಿಎಂಪಿ ಈ ಹಿಂದೆ 15 ದಿನಗಳೊಳಗೆ ತೆರಿಗೆ ಪಾವತಿಸುವಂತೆ ಮಾಲ್​ಗೆ ಗಡುವು ನೀಡಲಾಗಿತ್ತು. 15 ದಿನದೊಳಗೆ ತೆರಿಗೆ ಪಾವತಿಸುವುದಾಗಿ ಮಾಲೀಕರು ಮನವಿ ಮಾಡಿದ್ದರು. ಬಿಬಿಎಂಪಿ ಆಯುಕ್ತರ ಬಳಿ ಮಂತ್ರಿಮಾಲ್ ಮಾಲೀಕ ಮನವಿ ಮಾಡಿಕೊಂಡಿದ್ದರಂತೆ. ಹೀಗಾಗಿ ಬಿಬಿಎಂಪಿ 15 ದಿನಗಳ ಕಾಲಾವಕಾಶ ನೀಡಿತ್ತು. ನವೆಂಬರ್ ತಿಂಗಳ ಅಂತ್ಯದೊಳಗೆ ತೆರಿಗೆ ಪಾವತಿಸುವಂತೆ ಸೂಚನೆ ನೀಡಲಾಗಿತ್ತು. ಆದರೆ ಇನ್ನು ಉಳಿದ ಬಾಕಿ ತೆರಿಗೆ ಹಣ ನೀಡದ ಕಾರಣ ಇಂದು ಮತ್ತೆ ಬೀಗ ಹಾಕಲಾಗಿದೆ.

ಈ ಹಿಂದೆ ಸ್ಥಳಕ್ಕೆ ಬಂದಿದ್ದ ಬಿಬಿಎಂಪಿ ಅಧಿಕಾರಿಗಳು‌ ಹಣ ಕಟ್ಟದೇ ಇದ್ರೆ ಮಂತ್ರಿಮಾಲ್ ಬಾಗಿಲು ಹಾಕಿಸುವ ಎಚ್ಚರಿಕೆ ನೀಡಿದ್ದರು. ಮಂತ್ರಿಮಾಲ್​ನಿಂದ ಮೂರು ವರ್ಷದಿಂದ 27 ಕೋಟಿ ತೆರಿಗೆ ಕಟ್ಟಿಲ್ಲ. ಕಳೆದ ಬಾರಿ 5 ಕೋಟಿ ಕಟ್ಟಿದ್ದರು. ಉಳಿದ ಹಣ ನೀಡುವುದಾಗಿ ಹೇಳಿದ್ದರು.

ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್​ಗೆ ಸೆಪ್ಟೆಂಬರ್ 30ಕ್ಕೆ ಬೀಗ ಹಾಕಲಾಗಿತ್ತು.  ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ ಅವರಿಂದ ಬೀಗ ಜಡಿಯುವ ಕಾರ್ಯ ನೆರವೇರಿತ್ತು.

ಇದನ್ನೂ ಓದಿ

Nagaland Firing: ನಾಗಾಲ್ಯಾಂಡ್​ ಫೈರಿಂಗ್​ ಪ್ರಕರಣದ ಸಾವಿನ ಸಂಖ್ಯೆ 15ಕ್ಕೆ ಏರಿಕೆ; ಇಂದು ಘಟನಾಸ್ಥಳಕ್ಕೆ ಭೇಟಿಕೊಡಲಿದೆ ಟಿಎಂಸಿ ನಿಯೋಗ

ಬೆಂಗಳೂರಿನಲ್ಲಿ ಅಪಾರ್ಟ್​ಮೆಂಟ್ 12ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ; ಸ್ಥಳದಲ್ಲೇ ಸಾವು

Published On - 12:04 pm, Mon, 6 December 21

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?