AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಘೋಷಣೆಗೆ ಸೀಮಿತವಾದ ಮಳೆ ಹಾನಿ ಪರಿಹಾರ; ಕೇವಲ ಪ್ರಮಾಣ ಪತ್ರ ಕೊಟ್ಟು ಸುಮ್ಮನಾದ ಬಿಬಿಎಂಪಿ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಹಲವು ಮನೆಗಳಿಗೆ ಅಪಾರ ಹಾನಿಯಾಗಿತ್ತು. ಸಂತ್ರಸ್ತರಿಗೆ ಬಿಬಿಎಂಪಿ ಪರಿಹಾರವನ್ನೂ ಘೋಷಿಸಿತ್ತು. ಆದರೆ ಇದುವರೆಗೆ ಯಾರಿಗೂ ಪರಿಹಾರ ಲಭ್ಯವಾಗಿಲ್ಲ.

BBMP: ಘೋಷಣೆಗೆ ಸೀಮಿತವಾದ ಮಳೆ ಹಾನಿ ಪರಿಹಾರ; ಕೇವಲ ಪ್ರಮಾಣ ಪತ್ರ ಕೊಟ್ಟು ಸುಮ್ಮನಾದ ಬಿಬಿಎಂಪಿ
ಬಿಬಿಎಂಪಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Oct 19, 2021 | 9:52 AM

Share

ಬೆಂಗಳೂರು: ನಗರದಲ್ಲಿ ಅಕ್ಟೋಬರ್2- 3 ರಂದು ಸುರಿದ ಭಾರಿ ಮಳೆಯಿಂದ ಅಪಾರ ನಷ್ಟವುಂಟಾಗಿತ್ತು. ಮಳೆಯಿಂದ ಮನೆಗಳೊಳಗೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳು, ಬಟ್ಟೆ ಹಾಗೂ ಇನ್ನಿತರ ವಸ್ತುಗಳು ಹಾನಿಯಾಗಿತ್ತು. ಹೀಗೆ ನಷ್ಟ ಉಂಟಾದವರಿಗೆ ಬಿಬಿಎಂಪಿಯಿಂದ ಪರಿಹಾರ ಘೋಷಿಸಲಾಗಿತ್ತು. ಹೀಗೆ ಹಾನಿಯಾದವರಿಗೆ ಪ್ರಮಾಣ ಪತ್ರವನ್ನೂ ಬಿಬಿಎಂಪಿ ನೀಡಿತ್ತು. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಗೋವಿಂದರಾಜ ನಗರ ಕ್ಷೇತ್ರದ ಒಟ್ಟು 717 ಜನ ಸಂತ್ರಸ್ತರ ಪಟ್ಟಿಯನ್ನು ತಯಾರಿಸಲಾಗಿತ್ತು. ಅವರಿಗೆ ತಲಾ 10 ಸಾವಿರ ರೂಪಾಯಿ ಪರಿಹಾರವನ್ನು ಬಿಬಿಎಂಪಿ ಘೋಷಣೆ ಮಾಡಿತ್ತು. ಆದರೆ ಈವರೆಗೂ ಯಾರಿಗೂ ಪರಿಹಾರ ಸಿಕ್ಕಿಲ್ಲ.

ಬಿಬಿಎಂಪಿ ಸಿದ್ಧಪಡಿಸಿದ ಪಟ್ಟಿಯಲ್ಲಿರುವ ಸಂತ್ರಸ್ತರಿಗೆ ಹಂಚಲೆಂದು ₹ 71,70,000 ಅನುದಾನಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಈವರೆಗೆ ಪರಿಹಾರ ಮಾತ್ರ ಸಂತ್ರಸ್ತರಿಗೆ ಸಿಕ್ಕಿಲ್ಲ. ಕೇವಲ ರಾಜಕೀಯಕ್ಕಾಗಿ ಪರಿಹಾರ ಘೋಷಿಸಿದ ಆರೋಪ ಎದುರಾಗಿದೆ. ಕೇವಲ ಪ್ರಮಾಣ ಪತ್ರ ನೀಡಿ ಬಿಬಿಎಂಪಿ ಸುಮ್ಮನಾಗಿದೆ. ಇದರೊಂದಿಗೆ ಅಸಲಿ ಸಂತ್ರಸ್ತರ ಹೆಸರು ಪರಿಹಾರದ ಪಟ್ಟಿಯಲ್ಲಿಲ್ಲ ಎಂದು ಗಂಭೀರ ಆರೋಪ ಮಾಡಲಾಗಿದೆ. ಆರ್ ಆರ್ ನಗರದಲ್ಲಿ ಹಸು ಕಳೆದುಕೊಂಡವರಿಗೆ ಪ್ರತಿ ಹಸುವಿಗೆ 30 ಸಾವಿರ ಪರಿಹಾರವನ್ನು ಬಿಬಿಎಂಪಿ ಘೋಷಣೆ ಮಾಡಿತ್ತು. ಆದರೆ ಪರಿಹಾರದ ಹಣ ಇದುವರೆಗೆ ಯಾವ ಸಂತ್ರಸ್ತರಿಗೂ ಲಭ್ಯವಾಗಿಲ್ಲ.

ಇದನ್ನೂ ಓದಿ:

‘ಬಿಕ್ಷೆ ಬೇಡಲು ಬಯಸೋದಿಲ್ಲ’ ಪುಣೆ ಬೀದಿಗಳಲ್ಲಿ ಪೆನ್ನು ಮಾರಿ ಜೀವನ ನಡೆಸುತ್ತಿದ್ದಾರೆ ಸ್ವಾವಲಂಬಿ ವೃದ್ಧೆ

ತುಮಕೂರಿನಲ್ಲಿ 45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆ; ಫೋಟೋ ವೈರಲ್

ಇನ್ನೂ ಎಷ್ಟು ದಿನ ಬದುಕಿರುತ್ತೇನೋ, ನಾನು ಸತ್ತರೂ ಪ್ರಾದೇಶಿಕ ಪಕ್ಷ ಉಳಿಯಬೇಕು: ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್