Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಘೋಷಣೆಗೆ ಸೀಮಿತವಾದ ಮಳೆ ಹಾನಿ ಪರಿಹಾರ; ಕೇವಲ ಪ್ರಮಾಣ ಪತ್ರ ಕೊಟ್ಟು ಸುಮ್ಮನಾದ ಬಿಬಿಎಂಪಿ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಹಲವು ಮನೆಗಳಿಗೆ ಅಪಾರ ಹಾನಿಯಾಗಿತ್ತು. ಸಂತ್ರಸ್ತರಿಗೆ ಬಿಬಿಎಂಪಿ ಪರಿಹಾರವನ್ನೂ ಘೋಷಿಸಿತ್ತು. ಆದರೆ ಇದುವರೆಗೆ ಯಾರಿಗೂ ಪರಿಹಾರ ಲಭ್ಯವಾಗಿಲ್ಲ.

BBMP: ಘೋಷಣೆಗೆ ಸೀಮಿತವಾದ ಮಳೆ ಹಾನಿ ಪರಿಹಾರ; ಕೇವಲ ಪ್ರಮಾಣ ಪತ್ರ ಕೊಟ್ಟು ಸುಮ್ಮನಾದ ಬಿಬಿಎಂಪಿ
ಬಿಬಿಎಂಪಿ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: shivaprasad.hs

Updated on: Oct 19, 2021 | 9:52 AM

ಬೆಂಗಳೂರು: ನಗರದಲ್ಲಿ ಅಕ್ಟೋಬರ್2- 3 ರಂದು ಸುರಿದ ಭಾರಿ ಮಳೆಯಿಂದ ಅಪಾರ ನಷ್ಟವುಂಟಾಗಿತ್ತು. ಮಳೆಯಿಂದ ಮನೆಗಳೊಳಗೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳು, ಬಟ್ಟೆ ಹಾಗೂ ಇನ್ನಿತರ ವಸ್ತುಗಳು ಹಾನಿಯಾಗಿತ್ತು. ಹೀಗೆ ನಷ್ಟ ಉಂಟಾದವರಿಗೆ ಬಿಬಿಎಂಪಿಯಿಂದ ಪರಿಹಾರ ಘೋಷಿಸಲಾಗಿತ್ತು. ಹೀಗೆ ಹಾನಿಯಾದವರಿಗೆ ಪ್ರಮಾಣ ಪತ್ರವನ್ನೂ ಬಿಬಿಎಂಪಿ ನೀಡಿತ್ತು. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಗೋವಿಂದರಾಜ ನಗರ ಕ್ಷೇತ್ರದ ಒಟ್ಟು 717 ಜನ ಸಂತ್ರಸ್ತರ ಪಟ್ಟಿಯನ್ನು ತಯಾರಿಸಲಾಗಿತ್ತು. ಅವರಿಗೆ ತಲಾ 10 ಸಾವಿರ ರೂಪಾಯಿ ಪರಿಹಾರವನ್ನು ಬಿಬಿಎಂಪಿ ಘೋಷಣೆ ಮಾಡಿತ್ತು. ಆದರೆ ಈವರೆಗೂ ಯಾರಿಗೂ ಪರಿಹಾರ ಸಿಕ್ಕಿಲ್ಲ.

ಬಿಬಿಎಂಪಿ ಸಿದ್ಧಪಡಿಸಿದ ಪಟ್ಟಿಯಲ್ಲಿರುವ ಸಂತ್ರಸ್ತರಿಗೆ ಹಂಚಲೆಂದು ₹ 71,70,000 ಅನುದಾನಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಈವರೆಗೆ ಪರಿಹಾರ ಮಾತ್ರ ಸಂತ್ರಸ್ತರಿಗೆ ಸಿಕ್ಕಿಲ್ಲ. ಕೇವಲ ರಾಜಕೀಯಕ್ಕಾಗಿ ಪರಿಹಾರ ಘೋಷಿಸಿದ ಆರೋಪ ಎದುರಾಗಿದೆ. ಕೇವಲ ಪ್ರಮಾಣ ಪತ್ರ ನೀಡಿ ಬಿಬಿಎಂಪಿ ಸುಮ್ಮನಾಗಿದೆ. ಇದರೊಂದಿಗೆ ಅಸಲಿ ಸಂತ್ರಸ್ತರ ಹೆಸರು ಪರಿಹಾರದ ಪಟ್ಟಿಯಲ್ಲಿಲ್ಲ ಎಂದು ಗಂಭೀರ ಆರೋಪ ಮಾಡಲಾಗಿದೆ. ಆರ್ ಆರ್ ನಗರದಲ್ಲಿ ಹಸು ಕಳೆದುಕೊಂಡವರಿಗೆ ಪ್ರತಿ ಹಸುವಿಗೆ 30 ಸಾವಿರ ಪರಿಹಾರವನ್ನು ಬಿಬಿಎಂಪಿ ಘೋಷಣೆ ಮಾಡಿತ್ತು. ಆದರೆ ಪರಿಹಾರದ ಹಣ ಇದುವರೆಗೆ ಯಾವ ಸಂತ್ರಸ್ತರಿಗೂ ಲಭ್ಯವಾಗಿಲ್ಲ.

ಇದನ್ನೂ ಓದಿ:

‘ಬಿಕ್ಷೆ ಬೇಡಲು ಬಯಸೋದಿಲ್ಲ’ ಪುಣೆ ಬೀದಿಗಳಲ್ಲಿ ಪೆನ್ನು ಮಾರಿ ಜೀವನ ನಡೆಸುತ್ತಿದ್ದಾರೆ ಸ್ವಾವಲಂಬಿ ವೃದ್ಧೆ

ತುಮಕೂರಿನಲ್ಲಿ 45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆ; ಫೋಟೋ ವೈರಲ್

ಇನ್ನೂ ಎಷ್ಟು ದಿನ ಬದುಕಿರುತ್ತೇನೋ, ನಾನು ಸತ್ತರೂ ಪ್ರಾದೇಶಿಕ ಪಕ್ಷ ಉಳಿಯಬೇಕು: ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ