BBMP: ಘೋಷಣೆಗೆ ಸೀಮಿತವಾದ ಮಳೆ ಹಾನಿ ಪರಿಹಾರ; ಕೇವಲ ಪ್ರಮಾಣ ಪತ್ರ ಕೊಟ್ಟು ಸುಮ್ಮನಾದ ಬಿಬಿಎಂಪಿ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಹಲವು ಮನೆಗಳಿಗೆ ಅಪಾರ ಹಾನಿಯಾಗಿತ್ತು. ಸಂತ್ರಸ್ತರಿಗೆ ಬಿಬಿಎಂಪಿ ಪರಿಹಾರವನ್ನೂ ಘೋಷಿಸಿತ್ತು. ಆದರೆ ಇದುವರೆಗೆ ಯಾರಿಗೂ ಪರಿಹಾರ ಲಭ್ಯವಾಗಿಲ್ಲ.

BBMP: ಘೋಷಣೆಗೆ ಸೀಮಿತವಾದ ಮಳೆ ಹಾನಿ ಪರಿಹಾರ; ಕೇವಲ ಪ್ರಮಾಣ ಪತ್ರ ಕೊಟ್ಟು ಸುಮ್ಮನಾದ ಬಿಬಿಎಂಪಿ
ಬಿಬಿಎಂಪಿ (ಪ್ರಾತಿನಿಧಿಕ ಚಿತ್ರ)
Edited By:

Updated on: Oct 19, 2021 | 9:52 AM

ಬೆಂಗಳೂರು: ನಗರದಲ್ಲಿ ಅಕ್ಟೋಬರ್2- 3 ರಂದು ಸುರಿದ ಭಾರಿ ಮಳೆಯಿಂದ ಅಪಾರ ನಷ್ಟವುಂಟಾಗಿತ್ತು. ಮಳೆಯಿಂದ ಮನೆಗಳೊಳಗೆ ನೀರು ನುಗ್ಗಿ ಗೃಹೋಪಯೋಗಿ ವಸ್ತುಗಳು, ಬಟ್ಟೆ ಹಾಗೂ ಇನ್ನಿತರ ವಸ್ತುಗಳು ಹಾನಿಯಾಗಿತ್ತು. ಹೀಗೆ ನಷ್ಟ ಉಂಟಾದವರಿಗೆ ಬಿಬಿಎಂಪಿಯಿಂದ ಪರಿಹಾರ ಘೋಷಿಸಲಾಗಿತ್ತು. ಹೀಗೆ ಹಾನಿಯಾದವರಿಗೆ ಪ್ರಮಾಣ ಪತ್ರವನ್ನೂ ಬಿಬಿಎಂಪಿ ನೀಡಿತ್ತು. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಗೋವಿಂದರಾಜ ನಗರ ಕ್ಷೇತ್ರದ ಒಟ್ಟು 717 ಜನ ಸಂತ್ರಸ್ತರ ಪಟ್ಟಿಯನ್ನು ತಯಾರಿಸಲಾಗಿತ್ತು. ಅವರಿಗೆ ತಲಾ 10 ಸಾವಿರ ರೂಪಾಯಿ ಪರಿಹಾರವನ್ನು ಬಿಬಿಎಂಪಿ ಘೋಷಣೆ ಮಾಡಿತ್ತು. ಆದರೆ ಈವರೆಗೂ ಯಾರಿಗೂ ಪರಿಹಾರ ಸಿಕ್ಕಿಲ್ಲ.

ಬಿಬಿಎಂಪಿ ಸಿದ್ಧಪಡಿಸಿದ ಪಟ್ಟಿಯಲ್ಲಿರುವ ಸಂತ್ರಸ್ತರಿಗೆ ಹಂಚಲೆಂದು ₹ 71,70,000 ಅನುದಾನಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಈವರೆಗೆ ಪರಿಹಾರ ಮಾತ್ರ ಸಂತ್ರಸ್ತರಿಗೆ ಸಿಕ್ಕಿಲ್ಲ. ಕೇವಲ ರಾಜಕೀಯಕ್ಕಾಗಿ ಪರಿಹಾರ ಘೋಷಿಸಿದ ಆರೋಪ ಎದುರಾಗಿದೆ. ಕೇವಲ ಪ್ರಮಾಣ ಪತ್ರ ನೀಡಿ ಬಿಬಿಎಂಪಿ ಸುಮ್ಮನಾಗಿದೆ. ಇದರೊಂದಿಗೆ ಅಸಲಿ ಸಂತ್ರಸ್ತರ ಹೆಸರು ಪರಿಹಾರದ ಪಟ್ಟಿಯಲ್ಲಿಲ್ಲ ಎಂದು ಗಂಭೀರ ಆರೋಪ ಮಾಡಲಾಗಿದೆ. ಆರ್ ಆರ್ ನಗರದಲ್ಲಿ ಹಸು ಕಳೆದುಕೊಂಡವರಿಗೆ ಪ್ರತಿ ಹಸುವಿಗೆ 30 ಸಾವಿರ ಪರಿಹಾರವನ್ನು ಬಿಬಿಎಂಪಿ ಘೋಷಣೆ ಮಾಡಿತ್ತು. ಆದರೆ ಪರಿಹಾರದ ಹಣ ಇದುವರೆಗೆ ಯಾವ ಸಂತ್ರಸ್ತರಿಗೂ ಲಭ್ಯವಾಗಿಲ್ಲ.

ಇದನ್ನೂ ಓದಿ:

‘ಬಿಕ್ಷೆ ಬೇಡಲು ಬಯಸೋದಿಲ್ಲ’ ಪುಣೆ ಬೀದಿಗಳಲ್ಲಿ ಪೆನ್ನು ಮಾರಿ ಜೀವನ ನಡೆಸುತ್ತಿದ್ದಾರೆ ಸ್ವಾವಲಂಬಿ ವೃದ್ಧೆ

ತುಮಕೂರಿನಲ್ಲಿ 45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆ; ಫೋಟೋ ವೈರಲ್

ಇನ್ನೂ ಎಷ್ಟು ದಿನ ಬದುಕಿರುತ್ತೇನೋ, ನಾನು ಸತ್ತರೂ ಪ್ರಾದೇಶಿಕ ಪಕ್ಷ ಉಳಿಯಬೇಕು: ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ

Loading...
Unable to load recommendations.
Follow Us