AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮೂರನೇ ಅಲೆ ಆತಂಕದ ಹಿನ್ನಲೆ ಕಡ್ಡಾಯ ವ್ಯಾಕ್ಸಿನ್ ಗೆ ಬಿಬಿಎಂಪಿ ಆದೇಶ

ಆಗಸ್ಟ್ ತಿಂಗಳಾಂತ್ಯದೊಳಗೆ ಲಸಿಕೆ ಪಡೆದಿರಬೇಕು. ಕನಿಷ್ಠ ಒಂದು ಡೋಸ್ ಲಸಿಕೆಯನ್ನಾದರೂ ಪಡೆದಿರಬೇಕು. ಸೆಪ್ಟೆಂಬರ್ 1ರಿಂದ ಬಿಬಿಎಂಪಿ ಮಾರ್ಷಲ್‌ಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿ ಹೋಟೆಲ್ ಹಾಗೂ ವಾಣಿಜ್ಯ ಕೇಂದ್ರಗಳಿಗೆ ಭೇಟಿ ನೀಡಿ ವ್ಯಾಕ್ಸಿನ್ ಪಡೆದಿರುವ ಬಗ್ಗೆ ತಪಾಸಣೆ ಮಾಡಬೇಕು.

ಬೆಂಗಳೂರಿನಲ್ಲಿ ಮೂರನೇ ಅಲೆ ಆತಂಕದ ಹಿನ್ನಲೆ ಕಡ್ಡಾಯ ವ್ಯಾಕ್ಸಿನ್ ಗೆ ಬಿಬಿಎಂಪಿ ಆದೇಶ
ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ
Follow us
TV9 Web
| Updated By: ಆಯೇಷಾ ಬಾನು

Updated on:Aug 26, 2021 | 11:58 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ 3ನೇ ಅಲೆ(Corona 3rd Wave) ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ಬಿಬಿಎಂಪಿ(BBMP) ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ವಾಣಿಜ್ಯ ಚಟುವಟಿಕೆ, ಹೋಟೆಲ್‌ಗಳು, ರೆಸ್ಟೋರೆಂಟ್‌ನ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಬಿಬಿಎಂಪಿ ಆದೇಶಿಸಿದೆ.

ಆಗಸ್ಟ್ ತಿಂಗಳಾಂತ್ಯದೊಳಗೆ ಲಸಿಕೆ ಪಡೆದಿರಬೇಕು. ಕನಿಷ್ಠ ಒಂದು ಡೋಸ್ ಲಸಿಕೆಯನ್ನಾದರೂ ಪಡೆದಿರಬೇಕು. ಸೆಪ್ಟೆಂಬರ್ 1ರಿಂದ ಬಿಬಿಎಂಪಿ ಮಾರ್ಷಲ್‌ಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿ ಹೋಟೆಲ್ ಹಾಗೂ ವಾಣಿಜ್ಯ ಕೇಂದ್ರಗಳಿಗೆ ಭೇಟಿ ನೀಡಿ ವ್ಯಾಕ್ಸಿನ್ ಪಡೆದಿರುವ ಬಗ್ಗೆ ತಪಾಸಣೆ ಮಾಡಬೇಕು. ಕೊವಿಡ್ ಲಸಿಕೆ ಪಡೆಯದಿದ್ದರೆ ದಂಡ ಹಾಕಲು ಸೂಚನೆ ನೀಡಿದ್ದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಆದೇಶ ಹೊರಡಿಸಿದ್ದಾರೆ.

ಇನ್ನು ಇದೇ ವೇಳೆ ಸಾರ್ವಜನಿಕವಾಗಿ ಗಣೇಶ ಹಬ್ಬ ಆಚರಿಸುವ ವಿಚಾರ ಸಂಬಂಧ ಮಾತನಾಡಿದ ಅವರು, ಸದ್ಯಕ್ಕೆ ಸಾರ್ವಜನಿಕವಾಗಿ ಗಣೇಶ ಆಚರಣೆಗೆ ಅವಕಾಶವಿಲ್ಲ. ಈ ಬಗ್ಗೆ ಸರ್ಕಾರ ಈಗ ಮತ್ತೊಮ್ಮೆ ನಿರ್ಧಾರ ಮಾಡಿದರೆ ಸರ್ಕಾರದ ನಿರ್ಧಾರದಂತೆ ನಾವು ನಡೆದುಕೊಳ್ಳಬೇಕಾಗಿದೆ. ಆದರೆ ಕೊರೊನಾ ಹರಡದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಬುಧವಾರ ಒಟ್ಟು 1224 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 22 ಜನರು ಸಾವನ್ನಪ್ಪಿದ್ದಾರೆ. ಒಟ್ಟು 1668 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 0.62, ಸೋಂಕಿತರ ಸಾವಿನ ಪ್ರಮಾಣ ಶೇ 1.79 ಇದೆ. ಕರ್ನಾಟಕದಲ್ಲಿ ಈವರೆಗೆ 29,42,250 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,85,700 ಮಂದಿ ಚೇತರಿಸಿಕೊಂಡಿದ್ದಾರೆ. ಮೃತರ ಒಟ್ಟು ಸಂಖ್ಯೆ 37,206. ರಾಜ್ಯದಲ್ಲಿ ಪ್ರಸ್ತುತ 19,318 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ.

ಬೆಂಗಳೂರು ನಗರದಲ್ಲಿ ಬುಧವಾರ 309 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ. 657 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,35,910 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,12,705 ಮಂದಿ ಚೇತರಿಸಿಕೊಂಡಿದ್ದಾರೆ. 7231 ಮಂದಿಯಲ್ಲಿ ಸೋಂಕು ಸಕ್ರಿಯವಾಗಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 309, ದಕ್ಷಿಣ ಕನ್ನಡ 217, ಉಡುಪಿ 130, ಮೈಸೂರು 102, ಹಾಸನ 95, ತುಮಕೂರು 52, ಉತ್ತರ ಕನ್ನಡ 48, ಕೊಡಗು 41, ಶಿವಮೊಗ್ಗ 42, ಮಂಡ್ಯ 38, ಚಿಕ್ಕಮಗಳೂರು 28, ಬೆಳಗಾವಿ 19, ಕೋಲಾರ 17, ಬೆಂಗಳೂರು ಗ್ರಾಮಾಂತರ 13, ಧಾರವಾಡ 11, ಚಿತ್ರದುರ್ಗ, ಕಲಬುರಗಿ 10, ಯಾದಗಿರಿ 8, ಚಾಮರಾನಗರ 6, ಬಳ್ಳಾರಿ, ಹಾವೇರಿ, ವಿಜಯಪುರ, ದಾವಣಗೆರೆ 3, ಚಿಕ್ಕಬಳ್ಳಾಪುರ, ಕೊಪ್ಪಳ, ಬಾಗಲಕೋಟೆ 2, ರಾಯಚೂರು, ರಾಮನಗರ 1.

ಇದನ್ನೂ ಓದಿ: ಕೊರೊನಾ ಲಸಿಕೆಯಲ್ಲಿ ಭಾರತ ಹೊಸ ದಾಖಲೆ; ದೇಶದಲ್ಲಿ 59 ಕೋಟಿ ಡೋಸ್ ಲಸಿಕೆ ವಿತರಣೆ

Published On - 11:50 am, Thu, 26 August 21

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ