AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಶೃಂಗೇರಿ ಮಠಕ್ಕೆ ಸೇರಿದ ಅನಧಿಕೃತ ಕಟ್ಟಡಕ್ಕೂ ಡೆಮಾಲಿಷನ್​ ಭೀತಿ

ಬಾಬುಸಪಾಳ್ಯದ ಅನಧಿಕೃತ ಕಟ್ಟಡ ಕುಸಿತದ ಬಳಿಕ ಬೆಂಗಳೂರಿನ ಅನಧಿಕೃತ ಕಟ್ಟಡಗಳನ್ನ ಪತ್ತೆ ಮಾಡುತ್ತಿರುವ ಬಿಬಿಎಂಪಿ, ಬರೋಬ್ಬರಿ 200 ಅನಧಿಕೃತ ಕಟ್ಟಡಗಳನ್ನ ಗುರುತಿಸಿದೆ. ಇದರಲ್ಲಿ ಶಂಕರಪುರದ ಶೃಂಗೇರಿ ಮಠದ ನೇತೃತ್ವದಲ್ಲಿ ನಡೆಯುತ್ತಿರೋ ಜ್ಞಾನೋದಯ ಪಿಯು ಕಾಲೇಜಿನ ಕಟ್ಟಡಕ್ಕೂ ಕಂಟಕ ಎದುರಾಗಿದೆ.

ಬೆಂಗಳೂರಿನ ಶೃಂಗೇರಿ ಮಠಕ್ಕೆ ಸೇರಿದ ಅನಧಿಕೃತ ಕಟ್ಟಡಕ್ಕೂ ಡೆಮಾಲಿಷನ್​ ಭೀತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Nov 06, 2024 | 10:14 PM

Share

ಬೆಂಗಳೂರು, (ನವೆಂಬರ್ 06): ಬಾಬುಸಪಾಳ್ಯ ಕಟ್ಟಡ ಕುಸಿತ ದುರಂತದ ಬಳಿಕ ರಾಜಧಾನಿಯ ಅನಧಿಕೃತ ಕಟ್ಟಡಗಳಿಗೆ ಬಿಸಿ ಮುಟ್ಟಿಸೋಕೆ ಪಾಲಿಕೆ ಸಜ್ಜಾಗಿನಿಂತಿದೆ.ರಾಜಧಾನಿಯಲ್ಲಿ ಇದುವರೆಗೆ ಬರೋಬ್ಬರಿ 200 ಅನಧಿಕೃತ ಕಟ್ಟಡಗಳು ಪತ್ತೆಯಾಗಿದ್ದು, ಅದರಲ್ಲಿ ಕೆಲ ಕಟ್ಟಡಗಳ ಡೆಮಾಲಿಷನ್ ಗೆ ಪಾಲಿಕೆ ಸಜ್ಜಾಗಿದೆ. ಇತ್ತ ಶಂಕರಪುರದ ಶೃಂಗೇರಿ ಮಠದ ನೇತೃತ್ವದಲ್ಲಿ ನಡೆಯುತ್ತಿರೋ ಜ್ಞಾನೋದಯ ಪಿಯು ಕಾಲೇಜಿನ ಕಟ್ಟಡಕ್ಕೂ ಕಂಟಕ ಎದುರಾಗಿದ್ದು,ಮಠದ ಆವರಣದಲ್ಲಿರೋ ಕಟ್ಟಡ ಡೆಮಾಲಿಷನ್ ಗೆ ಬಿಬಿಎಂಪಿ ಆದೇಶ ಹೊರಡಿಸಿದೆ.

ರಾಜಧಾನಿಯ ಬಹುತೇಕ ಅನಧಿಕೃತ ಕಟ್ಟಡಗಳನ್ನ ತೆರವು ಮಾಡೋಕು ಪ್ಲಾನ್ ಮಾಡಿರೋ ಪಾಲಿಕೆ, ನಕ್ಷೆ ಅನುಮತಿ ಪಡೆಯದೇ ತಲೆ ಎತ್ತಿರೋ ಶಂಕರಪುರದ ಜ್ಞಾನೋದಯ ಪಿಯು ಕಾಲೇಜಿನ ಕಟ್ಟಡ ಡೆಮಾಲಿಷನ್ ಗೆ ಮುಹೂರ್ತ ಫಿಕ್ಸ್ ಮಾಡಿದೆ. ನಕ್ಷೆ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಈಗಾಗಲೇ ನೋಟಿಸ್ ನೀಡಿರುವ ಪಾಲಿಕೆ, ಇದೇ ನವೆಂಬರ್ 11ರಂದು ಡೆಮಾಲಿಷನ್ ಮಾಡುವುದಕ್ಕೆ ತಯಾರಿ ನಡೆಸಿದೆ.

ಇದನ್ನೂ ಓದಿ: ವೈಟ್ ಟಾಪಿಂಗ್: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ, ಪಾರ್ಕಿಂಗ್​ ನಿಷೇಧ

ಇನ್ನು ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಈ ಕಟ್ಟಡಕ್ಕೆ ಬಿಬಿಎಂಪಿಯ ನಕ್ಷೆ ಅನುಮೋದನೆ ಪಡೆಯದಿರೋದು ಇದೀಗ ಕಟ್ಟಡಕ್ಕೆ ಕಂಟಕ ತಂದಿಟ್ಟಿದೆ. ಇತ್ತ ಶೃಂಗೇರಿಯ ಶಾರದ ಮಠದ ಅಧೀನದಲ್ಲಿ ನಡೆಯುತ್ತಿರೋ ಈ ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಡೆಮಾಲಿಷನ್ ಆದೇಶ ಕೊಟ್ಟಿರೋದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅಸಮಾಧಾನ ವ್ಯಕ್ತವಾಗ್ತಿದೆ. ಚಾಮರಾಜಪೇಟೆಯ ಸುತ್ತಮುತ್ತ ನೂರಾರು ಅನಧಿಕೃತ ಕಟ್ಟಡ ಇದೆ. ಆದ್ರೆ ಅದನ್ನೆಲ್ಲ ಕೈಹಾಕುವ ಧೈರ್ಯ ಮಾಡದ ಸರ್ಕಾರ ಹಾಗೂ ಪಾಲಿಕೆ, ಮಠದ ಅಧೀನದಲ್ಲಿರೋ ಶಿಕ್ಷಣ ಕೇಂದ್ರದ ಮೇಲೆ ಕಣ್ಣಿಟ್ಟಿರುವುದು ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಇದೇ ಕಟ್ಟಡ ನಿರ್ಮಾಣದ ವೇಳೆ ಇಡೀ ಕಟ್ಟಡವನ್ನ ಬಿಬಿಎಂಪಿಯ ನಕ್ಷೆ ಅನುಮತಿಯಿಲ್ಲದೇ ಕಟ್ಟಲಾಗ್ತಿದೆ,ಇದರಿಂದ ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ಬರೋ ಸಾಧ್ಯತೆಯಿದೆ ಎಂದು ಸಾಮಾಜಿಕ ಹೋರಾಟಗಾರರೊಬ್ಬರು ಏಕಾಂಗಿ ಹೋರಾಟ ನಡೆಸಿದ್ರು. ಅಲ್ಲದೇ ಕಟ್ಟಡ ತೆರವಿಗೆ ಬಿಬಿಎಂಪಿಯ ಮುಖ್ಯ ಆಯುಕ್ತರಿಗೂ ಪತ್ರ ಬರೆದಿದ್ದರು, ಇದೆಲ್ಲದರ ಪರಿಣಾಮ ಇದೀಗ ಮಠದ ಅಧಿನದಲ್ಲಿರೋ ಶಿಕ್ಷಣ ಸಂಸ್ಥೆಯ ಕಟ್ಟಡ ಡೆಮಾಲಿಷನ್ ಗೆ ಮುಹೂರ್ತ ಫಿಕ್ಸ್ ಆಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವರದಿ:ಶಾಂತಮೂರ್ತಿ,ಟಿವಿ9,ಬೆಂಗಳೂರು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್