AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಎಸೆದರೆ 10 ಸಾವಿರ ದಂಡ

ಬಿಬಿಎಂಪಿ ವ್ಯಾಪ್ತಿಯ ಪ್ರದೇಶಗಳು, ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಇಕ್ಕೆಲಗಳು ಹಾಗೂ ಹೊರವಲಯದಲ್ಲಿ ಅನಧಿಕೃತವಾಗಿ ಕಟ್ಟಡದ ಅವಶೇಷಗಳು ಮತ್ತು ಇತರೆ ಭಗ್ನಾವಶೇಷಗಳನ್ನು ಹಾಕುವಂತಿಲ್ಲ. ಹಾಕಿದರೆ ಅಂತವರ ಮೇಲೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯ ಎಸೆದರೆ 10 ಸಾವಿರ ದಂಡ
ಬಿಬಿಎಂಪಿ
TV9 Web
| Updated By: ಆಯೇಷಾ ಬಾನು|

Updated on: Sep 20, 2023 | 11:42 AM

Share

ಬೆಂಗಳೂರು, ಸೆ.20: ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ಕಟ್ಟಡಗಳ ತ್ಯಾಜ್ಯ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಎಸೆಯುವವರಿಗೆ ಬಿಬಿಎಂಪಿ ಖಡಲ್ ಎಚ್ಚರಿಕೆ ನೀಡಿದೆ. ಬಿಬಿಎಂಪಿ(BBMP) ವ್ಯಾಪ್ತಿಯ ಪ್ರದೇಶಗಳು, ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಇಕ್ಕೆಲಗಳು ಹಾಗೂ ಹೊರವಲಯದಲ್ಲಿ ಅನಧಿಕೃತವಾಗಿ ಕಟ್ಟಡದ ಅವಶೇಷಗಳು ಮತ್ತು ಇತರೆ ಭಗ್ನಾವಶೇಷಗಳನ್ನು ಹಾಕುವಂತಿಲ್ಲ. ಹಾಕಿದರೆ ಅಂತವರ ಮೇಲೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಪ್ರತಿ ಟನ್ ಕಟ್ಟಡಗಳ ತ್ಯಾಜ್ಯಕ್ಕೆ ಹತ್ತು ಸಾವಿರ ರೂಪಾಯಿ ದಂಡ ವಿಧಿಸುವುದಾಗಿ ಬಿಬಿಎಂಪಿ ಕಟ್ಟಡ ಮಾಲೀಕರಿಗೆ ಎಚ್ಚರಿಕೆ ನೀಡಿದೆ. ಜಂಟಿ ನಿರ್ದೇಶಕರು (SWM) ಹೊರಡಿಸಿದ ಆದೇಶದಲ್ಲಿ, ಅನಾಮಧೇಯ ವ್ಯಕ್ತಿಗಳು, ಏಜೆನ್ಸಿಗಳು ಅನಧಿಕೃತವಾಗಿ ಕಟ್ಟಡಗಳ ಅವಶೇಷಗಳನ್ನು ಮತ್ತು ಇತರೆ ಭಗ್ನಾವಶೇಷದ ತ್ಯಾಜ್ಯವನ್ನು ನಗರದ ಹೊರವಲಯದಲ್ಲಿ ಎಸೆದು ಹೋಗುತ್ತಿದ್ದಾರೆ. ಇದರಿಂದ ನಗರದೊಳಗೆ ಪ್ರವೇಶಿಸುವ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತಂತೆ ನಕಾರಾತ್ಮಕ ಮನೋಭಾವ ಮೂಡುತ್ತಿದೆ. ಅಲ್ಲದೆ, ನಗರದ ಘನತೆಗೆ ಧಕ್ಕೆಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರದ ಹೊರವಲಯದಲ್ಲಿ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ಅನಧಿಕೃತವಾಗಿ ವಿಲೇವಾರಿ ಮಾಡುವ ಎಲ್ಲ ವಾಹನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆಯ ಎಲ್ಲಾ ಸೂಪರವೈಸರ್‌, ಕಿರಿಯ ಆರೋಗ್ಯ ಪರಿವೀಕ್ಷಕರು, ವಾರ್ಡ್‌ ಮಾರ್ಷಲ್‌ಗಳು, ಮಾರ್ಷಲ್‌ ಸೂಪರ್‌ವೈಸರ್‌ಗಳು ತಪಾಸಣೆ ನಡೆಸಲು ಬಿಬಿಎಂಪಿ ಸೂಚಿಸಿದೆ. ನಿಯಮ ಉಲ್ಲಂಘಿಸಿದವರಿಗೆ ನಿಯಮಾವಳಿಗಳನ್ವಯ ದಂಡ ವಿಧಿಸಲಾಗುತ್ತದೆ. ಬಳಿಕ ವಾಹನಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಸಮೀಪದ ಪೊಲೀಸ್‌ ಠಾಣೆಯ ಸುಪರ್ದಿಗೆ ನೀಡಲು ಬಿಬಿಎಂಪಿ ಆದೇಶಿಸಿದೆ.

ಇದನ್ನೂ ಓದಿ: ಕಾವೇರಿ ನೀರು ಸಂಕಷ್ಟ: ದೆಹಲಿ ಸಭೆಯಲ್ಲಿ ಮಹತ್ವದ ತೀರ್ಮಾನ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಇನ್ನು ಕಟ್ಟಡಗಳ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಅದನ್ನು ಸಾಗಣೆ ಮಾಡುವುದು ಅಥವಾ ವಿಲೇವಾರಿ ಮಾಡುವ ಜವಾಬ್ದಾರಿಯು ಸಂಬಂಧಪಟ್ಟ ತ್ಯಾಜ್ಯ ಉತ್ಪಾದಕರದ್ದೇ ಆಗಿರುತ್ತದೆ. ಈ ತ್ಯಾಜ್ಯವನ್ನು ಪಾಲಿಕೆಯಿಂದ ಅಧಿಕೃತವಾಗಿ ಗುರುತಿಸಲಾಗಿರುವ ಸಂಸ್ಕರಣಾ ಘಟಕಗಳಿಗೆ ಸಾಗಿಸಿ ವಿಲೇವಾರಿ ಮಾಡಬೇಕು. ಕಟ್ಟಡ ತ್ಯಾಜ್ಯವನ್ನು ಅನಧಿಕೃತವಾಗಿ ಎಲ್ಲೆಂದರಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳ ಬದಿಯ ಇಕ್ಕೆಲಗಳು, ಚರಂಡಿಗಳು, ಖಾಲಿ ನಿವೇಶನ ಅಥವಾ ಕ್ವಾರಿಗಳಲ್ಲಿ ಸುರಿಯುವುದು ತಪ್ಪು. ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ನಿರ್ವಹಣಾ ನಿಯಮಗಳು-2016 ರನ್ವಯ ನಿಷೇಧಿಸಲಾಗಿದೆ. ಇದು ದಂಡಾರ್ಹ ಮತ್ತು ಕಾನೂನಾತ್ಮಕವಾಗಿ ಅಪರಾಧವಾಗಿದೆ.

ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣೆ, ವಿಲೇವಾರಿದಾರರಿಗೂ ಸಹ ನಿಯಮಾವಳಿಗಳನ್ವಯ 10,000 ಪ್ರತಿ ಟನ್‌ಗೆ ದಂಡವನ್ನು ವಿಧಿಸಲಾಗುವುದು. ಅಷ್ಟೇ ಅಲ್ಲದೆ, ಪರಿಸರ (ಸಂರಕ್ಷಣೆ) ಕಾಯ್ದೆ 1986ರನ್ವಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖೇನ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಾಗುವುದು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು