AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರನ್ನು ಮತ್ತಷ್ಟು ಹಸಿರು ಮಾಡಲು ಮುಂದಾದ ಬಿಬಿಎಂಪಿ, 2.5 ಲಕ್ಷ ಸಸಿಗಳ ವಿತರಣೆ

ನಗರವನ್ನು ಹಸಿರಾಗಿಸಲು ಬಿಬಿಎಂಪಿಯು ನಿವಾಸಿ ಕಲ್ಯಾಣ ಸಂಘಗಳು (ಆರ್‌ಡಬ್ಲ್ಯುಎ) ಮತ್ತು ಲಾಭರಹಿತ ಸಂಸ್ಥೆಗಳು ಸೇರಿದಂತೆ ನಾಗರಿಕರಿಗೆ 2.5 ಲಕ್ಷ ಸಸಿಗಳನ್ನು ವಿತರಿಸಲು ಸಿದ್ಧತೆ ನಡೆಸಿದೆ.

ಬೆಂಗಳೂರನ್ನು ಮತ್ತಷ್ಟು ಹಸಿರು ಮಾಡಲು ಮುಂದಾದ ಬಿಬಿಎಂಪಿ, 2.5 ಲಕ್ಷ ಸಸಿಗಳ ವಿತರಣೆ
ಬಿಬಿಎಂಪಿ
ಆಯೇಷಾ ಬಾನು
|

Updated on: Jun 05, 2023 | 8:49 AM

Share

ಬೆಂಗಳೂರು: ಗಾರ್ಡನ್ ಸಿಟಿ, ಗ್ರೀನ್ ಸಿಟಿಯೆಂದು ಹೆಸರು ಪಡೆದಿರುವ ಬೆಂಗಳೂರನ್ನು ಮತ್ತಷ್ಟು ಹಸಿರು ಮಾಡಲು ಬಿಬಿಎಂಪಿ ಮುಂದಾಗಿದೆ. ನಗರವನ್ನು ಹಸಿರಾಗಿಸಲು ಬಿಬಿಎಂಪಿಯು ನಿವಾಸಿ ಕಲ್ಯಾಣ ಸಂಘಗಳು (ಆರ್‌ಡಬ್ಲ್ಯುಎ) ಮತ್ತು ಲಾಭರಹಿತ ಸಂಸ್ಥೆಗಳು ಸೇರಿದಂತೆ ನಾಗರಿಕರಿಗೆ 2.5 ಲಕ್ಷ ಸಸಿಗಳನ್ನು ವಿತರಿಸಲು ಸಿದ್ಧತೆ ನಡೆಸಿದೆ.

ಬಿಬಿಎಂಪಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ್ ಈ ಬಗ್ಗೆ ಮಾತನಾಡಿ, ಈ ಮಳೆಗಾಲದಲ್ಲಿ 1 ಲಕ್ಷ ಸಸಿಗಳನ್ನು ನೆಡಲಾಗುವುದು. “ಈಗಾಗಲೇ ನಾವು ಎರಡು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿದ್ದೇವೆ. ಇವುಗಳಲ್ಲಿ ಸರಿಸುಮಾರು 90 ಪ್ರತಿಶತದಷ್ಟು ಸಸಿಗಳು ಉಳಿದುಕೊಂಡಿವೆ, ಹಾಳಾದ ಸಸಿಗಳ ಸ್ಥಳಗಳಲ್ಲಿ ಹೊಸ ಸಸಿಗಳನ್ನು ನೆಡುತ್ತೇವೆ” ಸಸಿಗಳನ್ನು ನೆಡಲು ಗಾರ್ಡ್​ಗಳನ್ನು ನೇಮಿಸಲಾಗುವುದು. ಅವರು ಮೂರು ವರ್ಷಗಳ ಕಾಲ ನೀರು ಹಾಕುವ ಮತ್ತು ಗಿಡಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಅವರು ತಿಳಿಸಿದರು.

ಆದರೆ, ಬಿಬಿಎಂಪಿ ನೀಡಿರುವ ಸಸಿಗಳ ಬಗ್ಗೆ ಸ್ಥಳೀಯ ಸಮುದಾಯಗಳು ಅಸಮಾಧಾನ ವ್ಯಕ್ತಪಡಿಸಿವೆ.

ಈ ಬಗ್ಗೆ RWAs ಹೇಳೋದೇನು?

BBMPಯ ಸಸಿ ನೆಡುವ ಕಾರ್ಯದಲ್ಲಿ ಅನುಭವ ಹೊಂದಿರುವ RWA ಸಂಸ್ಥೆಗಳು, ಈ ಯೋಜನೆ ಹೆಚ್ಚಿನ ಮಟ್ಟದಲ್ಲಿ ಯಶಸ್ಸು ಕಾಣಬೇಕಾದ್ರೆ ಸಸಿಗಳ ಜೊತೆಗೆ ಗಾರ್ಡ್‌ಗಳನ್ನೂ ಒದಗಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಗೋಲ್​ಮಾಲ್: ಬಿಬಿಎಂಪಿ ಶಾಲಾ ಕಾಲೇಜುಗಳಿಗೆ ಅನರ್ಹ ಶಿಕ್ಷಕರ ನೇಮಕ

“ಟ್ರೀ ಗಾರ್ಡ್‌ಗಳು ದುಬಾರಿ ಮತ್ತು ಅವರು ಸುಲಭವಾಗಿ ಲಭ್ಯವಿರುವುದಿಲ್ಲ. ನಾವು ಬಿಬಿಎಂಪಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಅವರು ಸ್ಟಾಕ್ ಇಲ್ಲವೆಂದು ಹೇಳಿಬಿಡುತ್ತಾರೆ” ಎಂದು ರಾಮಮೂರ್ತಿನಗರ ನಿವಾಸಿಗಳ ಕಲ್ಯಾಣ ಸಂಘದ (ಆರ್‌ಡಬ್ಲ್ಯೂಎ) ಶಂಕರ್ ಹೇಳಿದರು. “ನಮ್ಮ ವಾರ್ಡ್‌ನಲ್ಲಿ ಅಂದಾಜು 500 ಹಸುಗಳಿದ್ದು, ಟ್ರೀ ಗಾರ್ಡ್‌ಗಳಿಲ್ಲದೆ, ಸಸ್ಯಗಳನ್ನು ರಕ್ಷಿಸಲು ಆಗುತ್ತಿಲ್ಲ. ಹಸುಗಳು ಸಸಿಗಳನ್ನು ತಿಂದು ಹಾಕುತ್ತವೆ ಎಂದರು.

ಇನ್ನು ವೈಟ್‌ಫೀಲ್ಡ್ ರೈಸಿಂಗ್ ತಂಡದ ನಾಯಕಿ ಅನುಪಮಾ ಕಿಲಾರು ಮತ್ತೊಂದು ಕಳವಳ ವ್ಯಕ್ತಪಡಿಸಿದರು. “ಸಸಿಗಳ ವೆಚ್ಚವನ್ನು ಬಿಬಿಎಂಪಿ ಭರಿಸುತ್ತಿರುವಾಗ, ಈ ಸಸಿಗಳ ಸುಸ್ಥಿರತೆ ಮತ್ತು ಗುಣಮಟ್ಟದ ಬಗ್ಗೆ ಅವರಿಗೆ ನಿರ್ಲಕ್ಷ್ಯವಿದೆ. ನಿರ್ದಿಷ್ಟ ಪ್ರದೇಶದಲ್ಲಿ ಒಂದು ಜಾತಿಯು ನಿಜವಾಗಿಯೂ ಬದುಕಬಹುದೇ ಎಂದು ಅವರು ಪರಿಶೀಲಿಸುವುದಿಲ್ಲ. ಅದಕ್ಕಾಗಿಯೇ ಅಂತಹ ಸಸಿಗಳು ಕೆಲವೇ ದಿನಗಳಲ್ಲಿ ಒಣಗುವುದನ್ನು ನಾವು ನೋಡುತ್ತೇವೆ ಎಂದರು.

ಮತ್ತೊಂದೆಡೆ ಸಸಿ ನೆಡುವ ತಂಡವು ತ್ವರಿತವಾಗಿ ಬೆಳೆಯುವ, ಸುಮಾರು 10 ಅಡಿಗಳಷ್ಟು ಬೆಳೆಯುವ ಮತ್ತು ರಸ್ತೆ ಬದಿಯಲ್ಲಿ ನೆಡಲು ಸೂಕ್ತವಾದ ಸ್ಥಳೀಯ ತಳಿಗಳ ಗಟ್ಟಿಮುಟ್ಟಾದ ಮರಗಳನ್ನು ಆಯ್ಕೆ ಮಾಡುವ ಮೂಲಕ ಈ ಸಮಸ್ಯೆಯನ್ನು ಪರಿಹರಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್