AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಕಡೆಗೆ ಪರ್ಯಾಯ ರಸ್ತೆ ನಿರ್ಮಾಣಕ್ಕೆ ಯೋಜನೆ: ವೃಷಭಾವತಿ ರಾಜಕಾಲುವೆ ಮೇಲೆ ತಲೆಎತ್ತಲಿದೆ ರಸ್ತೆ

ವೃಷಭಾವತಿ ನದಿಯ ಪುನರುತ್ಥಾನ ಮತ್ತು ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ಕಾಣಿಸುವುದಕ್ಕಾಗಿ ಬಿಬಿಎಂಪಿ ಹೊಸದೊಂದು ಯೋಜನೆ ಹಮ್ಮಿಕೊಂಡಿದೆ. ಅದರಂತೆ, ವೃಷಭಾವತಿ ರಾಜಕಾಲುವೆ ಮೇಲೆ ಮೈಸೂರು ಕಡೆಗೆ ತೆರಳಲು ಹೊಸ ರಸ್ತೆ ನಿರ್ಮಾಣವಾಗಲಿದೆ! ಹೌದು, ರಾಜಕಾಲುವೆ ಮೇಲೆಯೇ ರಸ್ತೆ ನಿರ್ಮಾಣದ ಸಾಹಸಕ್ಕೆ ಪಾಲಿಕೆ ಮುಂದಾಗಿದೆ. ಏನಿದು ಯೋಜನೆ ಎಂಬುದನ್ನು ತಿಳಿಯಲು ಮುಂದೆ ಓದಿ.

ಮೈಸೂರು ಕಡೆಗೆ ಪರ್ಯಾಯ ರಸ್ತೆ ನಿರ್ಮಾಣಕ್ಕೆ ಯೋಜನೆ: ವೃಷಭಾವತಿ ರಾಜಕಾಲುವೆ ಮೇಲೆ ತಲೆಎತ್ತಲಿದೆ ರಸ್ತೆ
ಮೈಸೂರು ರಸ್ತೆ ಬಳಿ ವೃಷಭಾವತಿ ನದಿ ರಾಜಕಾಲುವೆ
ಶಾಂತಮೂರ್ತಿ
| Edited By: |

Updated on: Jan 06, 2025 | 7:28 AM

Share

ಬೆಂಗಳೂರು, ಜನವರಿ 6: ಬೆಂಗಳೂರಿನ ಜೀವನದಿಯಾಗಿದ್ದ ವೃಷಭಾವತಿ ನದಿಗೆ ಮರುಜೀವ ಕೊಡಲು ಬಿಬಿಎಂಪಿ ಸಜ್ಜಾಗಿದೆ. 28 ಕಿಲೋಮೀಟರ್ ಉದ್ದದ ವೃಷಭಾವತಿ ನದಿ ಮಾರ್ಗದ ರಾಜಕಾಲುವೆಯಲ್ಲಿ ತ್ಯಾಜ್ಯ ಸಂಗ್ರಹ ತಡೆಯುವುದರ ಜೊತೆಗೆ ವೃಷಭಾವತಿ ರಾಜಕಾಲುವೆ ಮೇಲೆ ಮೈಸೂರು ಕಡೆಗೆ ತೆರಳಲು ರಸ್ತೆ ನಿರ್ಮಾಣ ಮಾಡಲು ಸಿದ್ಧತೆ ನಡೆದಿದೆ. ಸದ್ಯ ಪಾಲಿಕೆಯ ಈ ಯೋಜನೆಗೆ ಸಕಲ ಸಿದ್ಧತೆಗಳು ನಡೆಸಿದ್ದು, ಕೆಂಗೇರಿಯಿಂದ ಮೈಸೂರು ಕಡೆಗೆ ರಸ್ತೆ ನಿರ್ಮಿಸಲು ಚಿಂತನೆ ನಡೆದಿದೆ.

ಬೆಂಗಳೂರು ಟ್ರಾಫಿಕ್​ಗೆ ಕಡಿವಾಣ ಹಾಕಲು ಯೋಜನೆ

ರಾಜಧಾನಿ ಬೆಂಗಳೂರಿನ ಟ್ರಾಫಿಕ್​ಗೆ ಲಗಾಮು ಹಾಕುವುದಕ್ಕಾಗಿ ಬಿಬಿಎಂಪಿ ಹೊಸ ಯೋಜನೆ ಮಾಡಲು ಹೊರಟಿದೆ. ಹಿಂದೆ ಬೆಂಗಳೂರಿನ ಪ್ರಮುಖ ನದಿಗಳಲ್ಲಿ ಒಂದಾಗಿದ್ದ ವೃಷಭಾವತಿ ನದಿಮಾರ್ಗದಲ್ಲಿ ಸ್ವಚ್ಛತೆ ಕಾಪಾಡುವುದಕ್ಕೂ ಸಜ್ಜಾಗಿರುವ ಪಾಲಿಕೆ, ಸಮಗ್ರ ಯೋಜನೆ ಮೂಲಕ ವೃಷಭಾವತಿ ನದಿ ಮಾರ್ಗದ ರಾಜಕಾಲುವೆಗಳನ್ನು ನಿರ್ವಹಣೆ ಮಾಡಲು ಹೊರಟಿದೆ.

ಇತ್ತ ಕೆಂಗೇರಿ ಬಳಿ ಇರುವ ರಾಜಕಾಲುವೆ ಮೇಲೆ ಹೊಸದಾಗಿ ಮೈಸೂರು ಕಡೆಗೆ ರಸ್ತೆ ನಿರ್ಮಾಣ ಮಾಡಲು ಹೊರಟಿರುವ ಬಿಬಿಎಂಪಿ, ಆ ಮೂಲಕ ಮೈಸೂರು ರಸ್ತೆ ಕಡೆಗಿನ ಸಂಚಾರ ಸುಗಮಗೊಳಿಸಲು ಮುಂದಾಗಿದೆ.

ಒತ್ತುವರಿ ತೆರವಿಗೂ ಸಜ್ಜಾದ ಪಾಲಿಕೆ

ವೃಷಭಾವತಿ ನದಿಪಾತ್ರದಲ್ಲಿರುವ ರಾಜಕಾಲುವೆಗಳ ಬಳಿ ಒತ್ತುವರಿ ತೆರವಿಗೂ ಸಜ್ಜಾಗಿರೋ ಬಿಬಿಎಂಪಿ, ಎಲ್ಲೆಲ್ಲೆ ಒತ್ತುವರಿಯಾಗಿದೆ ಎಂಬುದನ್ನು ಗುರುತಿಸಿ ತೆರವು ಮಾಡುವುದಕ್ಕೂ ಯೋಜನೆ ರೂಪಿಸಲು ಹೊರಟಿದೆ. ಸದ್ಯ ಈ ಬಗ್ಗೆ ಎಲ್ಲಾ ವಲಯದ ವಲಯ ಆಯುಕ್ತರ ಜೊತೆ ಚರ್ಚಿಸಿರುವ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವೃಷಭಾವತಿ ಪಾತ್ರದಲ್ಲಿ ರಸ್ತೆ ನಿರ್ಮಿಸುವುದರಿಂದ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ಸಿಗುತ್ತದೆ. ಜೊತೆಗೆ ರಾಜಕಾಲುವೆಗಳ ಒತ್ತುವರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಕೂಡ ಚಿಂತನೆ ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ: ವಸತಿ ಯೋಜನೆಯಲ್ಲಿ 55% ಬೆಲೆ ಏರಿಕೆ, ಮುಂಬರುವ ದುಬಾರಿ ಮನೆಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಎರಡನೇ ಸ್ಥಾನ ಸಿಗಲಿದೆ; ವರದಿ

ಕೆಂಗೇರಿ ಬಳಿ ಹರಿಯುತ್ತಿರುವ ವೃಷಭಾವತಿ ನದಿ ಮಾರ್ಗದ ಬೃಹತ್ ರಾಜಕಾಲುವೆಯಲ್ಲಿ ಈಗಾಗಲೇ ಸ್ವಚ್ಛತಾಕಾರ್ಯ ಶುರುವಾಗಿದೆ. ಯಾವ್ಯಾವ ಅಪಾರ್ಟ್​​​ಮೆಂಟ್​ಗಳಿಂದ ರಾಜಕಾಲುವೆಗೆ ನೀರು ಹರಿಯುತ್ತದೆ, ಕಸ ಎಲ್ಲಿಂದ ಸೇರ್ಪಡೆಯಾಗುತ್ತದೆ ಎಂಬ ಅಂಶಗಳನ್ನ ಗುರುತಿಸುವ ಕೆಲಸ ನಡೆಯುತ್ತಿದೆ. ಈ ಮೂಲಕ ರಾಜಕಾಲುವೆಯ ಸ್ವಚ್ಛತೆ ಕಾಪಾಡುವುದರ ಜೊತೆಗೆ ಹೊಸ ರಸ್ತೆ ನಿರ್ಮಾಣವಾದರೆ ರಾಜಧಾನಿಯ ವಾಹನ ದಟ್ಟನೆಗೆ ಪರಿಹಾರ ಸಿಗುವ ನಿರೀಕ್ಷೆ ಕೂಡ ಪಾಲಿಕೆ ಮುಂದಿದೆ.

ಸದ್ಯ ಬ್ರ್ಯಾಂಡ್ ಬೆಂಗಳೂರಿನ ರಾಜಕಾಲುವೆ ಮೇಲೆ ಮಾಡಲು ಹೊರಟಿರುವ ಪ್ರಯೋಗ ಎಷ್ಟರಮಟ್ಟಿಗೆ ಫಲ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್