AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರುವ ಕ್ಯಾಂಟೀನ್ ನಿರ್ವಹಣೆ ಬಿಟ್ಟು 20 ಕೋಟಿ ರೂ. ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್​ಗಳ ಆರಂಭಿಸಲು ಮುಂದಾದ ಬಿಬಿಎಂಪಿ

ಬೆಂಗಳೂರಿನಲ್ಲಿರುವ ಕೆಲ ಇಂದಿರಾ ಕ್ಯಾಂಟೀನ್​ಗಳು ನಿರ್ವಹಣೆಯಾಗದೇ ಸೊರಗಿದ್ದರೆ, ಮೆನು ಬದಲಾಯಿಸುವುದಕ್ಕೂ ಪಾಲಿಕೆ ಮೀನಾಮೇಷ ಎಣಿಸುತ್ತಿದೆ. ಇದೀಗ ಬರೋಬ್ಬರಿ 20 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್​ಗಳನ್ನು ಆರಂಭಿಸಲು ಹೊರಟಿದೆ. ಇರುವ ಕ್ಯಾಂಟೀನ್​ಗಳನ್ನೇ ಸರಿಯಾಗಿ ನಿರ್ವಹಿಸದ ಪಾಲಿಕೆ ಹೊಸ ಕ್ಯಾಂಟೀನ್ ಆರಂಭಿಸಲು ಹೊರಟಿರುವುದು ಜನರ ಆಕ್ರೋಶಕ್ಕೆ ಗುರಿಯಾಗಿದೆ.

ಇರುವ ಕ್ಯಾಂಟೀನ್ ನಿರ್ವಹಣೆ ಬಿಟ್ಟು 20 ಕೋಟಿ ರೂ. ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್​ಗಳ ಆರಂಭಿಸಲು ಮುಂದಾದ ಬಿಬಿಎಂಪಿ
ಇಂದಿರಾ ಕ್ಯಾಂಟೀನ್
ಶಾಂತಮೂರ್ತಿ
| Edited By: |

Updated on: Aug 05, 2025 | 8:05 AM

Share

ಬೆಂಗಳೂರು, ಆಗಸ್ಟ್ 5: ಬಡಜನರ ಅಕ್ಷಯ ಪಾತ್ರೆಯಂತಿದ್ದ ಇಂದಿರಾ ಕ್ಯಾಂಟೀನ್​ಗಳನ್ನು (Indira Canteens) ಸರಿಯಾಗಿ ನಿರ್ವಹಣೆ ಮಾಡದೇ ಸರ್ಕಾರ ಹಾಗೂ ಪಾಲಿಕೆ (BBMP) ಜನರ ಕೋಪಕ್ಕೆ ಗುರಿಯಾಗಿತ್ತು. ಇತ್ತ ರಾಜಧಾನಿ ಬೆಂಗಳೂರಿನ (Bengaluru) ಹಲವೆಡೆ ಇಂದಿರಾ ಕ್ಯಾಂಟೀನ್​ಗಳ ಬಿಲ್ ಬಾಕಿ ಉಳಿಸಿಕೊಂಡು ಕ್ಯಾಂಟೀನ್​ಗಳಿಗೆ ಬೀಗ ಬಿದ್ದಿತ್ತು. ಇರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯಲ್ಲೇ ಎಡವಿದ್ದ ಪಾಲಿಕೆ ಇದೀಗ ಹೊಸದಾಗಿ 52 ಕ್ಯಾಂಟೀನ್ ಆರಂಭಿಸಲು ಸಜ್ಜಾಗಿದೆ. ಬರೋಬ್ಬರಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಇಂದಿರಾ ಕ್ಯಾಂಟೀನ್​ಗಳ ನಿರ್ಮಾಣಕ್ಕೆ ಸಜ್ಜಾಗಿದೆ.

2017ರಲ್ಲಿ ವಾರ್ಡ್‌ಗೆ ಒಂದರಂತೆ 198 ಇಂದಿರಾ ಕ್ಯಾಂಟೀನ್‌ ಆರಂಭಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಸೂಕ್ತ ಜಾಗ ಸಿಗದ ಹಿನ್ನೆಲೆಯಲ್ಲಿ 174 ಸ್ಥಿರ ಹಾಗೂ 24 ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಆರಂಭಿಸಲಾಗಿತ್ತು. ಈ ಪೈಕಿ ಸದ್ಯ ಸುಮಾರು 160 ಇಂದಿರಾ ಕ್ಯಾಂಟೀನ್‌ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು ಇದೀಗ ಹೊಸ ಕ್ಯಾಂಟೀನ್ ನಿರ್ಮಿಸಲು ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ.

ಬಿಬಿಎಂಪಿಯ ವಾರ್ಡ್‌ ಸಂಖ್ಯೆ 198 ರಿಂದ 225ಕ್ಕೆ ಹೆಚ್ಚಾದ ಹಿನ್ನೆಲೆಯಲ್ಲಿ ಹೊಸ ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸುವಂತೆ ಸರ್ಕಾರ ಸೂಚನೆ ನೀಡಿದ ಹಿನ್ನೆಲೆಯಲ್ಲಿ 52 ಹೊಸ ಇಂದಿರಾ ಕ್ಯಾಂಟೀನ್‌ ಕಟ್ಟಡ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದೆ. ಸದ್ಯ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಗುತ್ತಿಗೆದಾರರ ತಾಂತ್ರಿಕ ಅರ್ಹತೆ ಪರಿಶೀಲನೆ ಪೂರ್ಣಗೊಂಡಿದೆ. ಮುಂದಿನ ವಾರದಲ್ಲಿ ಟೆಂಡರ್‌ ಬಿಡ್‌ ಪರಿಶೀಲನೆ ಮಾಡಿ ಗುತ್ತಿಗೆದಾರರಿಗೆ ಕಾಮಗಾರಿ ಆರಂಭಿಸಲು ಸೂಚನೆ ನೀಡಲು ಸಿದ್ಧತೆ ನಡೆದಿದೆ.

ಮತ್ತೊಂದೆಡೆ, ಈಗಾಗಲೇ ಇರುವ ಇಂದಿರಾ ಕ್ಯಾಂಟೀನ್​ಗಳನ್ನು ನಿರ್ವಹಣೆ ಮಾಡದ ಪಾಲಿಕೆ ಈಗ ಹೊಸ ಕ್ಯಾಂಟೀನ್ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ಸಾರಿಗೆ ಮುಷ್ಕರ: ರಸ್ತೆಗಿಳಿಯದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು, ಖಾಸಗಿ ಬಸ್​ಗಳಿಗೆ ಮೊರೆ

ಈಗಾಗಲೇ ಹೊಸ ಇಂದಿರಾ ಕ್ಯಾಂಟೀನ್‌ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಹುತೇಕ ಕಡೆ ಜಾಗ ಸಹ ಗುರುತಿಸುವ ಕೆಲಸ ಮಾಡಲಾಗಿದೆ. ಸುಮಾರು 10 ರಿಂದ 12 ಕಡೆ ಸ್ಥಳ ಗುರುತಿಸುವುದು ಬಾಕಿ ಇದೆ. ಬೆಂಗಳೂರಿನಲ್ಲಿ ಹಲವು ಮೂಲಭೂತ ಸೌಕರ್ಯ ಇದ್ದರೂ ಕೂಡ ಅದಕ್ಕೆ ಗಮನಹರಿಸದ ಸರ್ಕಾರದ ನಡೆಗೆ ಜನರಿಂದ ಅಸಮಾಧಾನ ವ್ಯಕ್ತವಾಗುತ್ತಿದೆ. ಇಂದಿರಾ ಕ್ಯಾಂಟೀನ್ ಬದಲು ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಕೊಡಿ ಎಂದು ಜನರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್