AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಾನಂದ ಸರ್ಕಲ್ ಸ್ಟೀಲ್ ಫ್ಲೈಒವರ್ ವಿವಾದದ ಬಳಿಕ ಜೆಸಿ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ಮಾಡಲು ಬಿಬಿಎಂಪಿ ಸಿದ್ಧತೆ

ಸಾಕಷ್ಟು ವಿವಾದಗಳಿಂದಲೇ ನಿರ್ಮಾಣವಾದ ಶಿವನಂದ ಸ್ಟೀಲ್ ಬ್ರಿಡ್ಜ್ ಇದೀಗಾ ಮತ್ತೆ ಮುನ್ನೆಲೆಗೆ ಬಂದಿದೆ.‌ ಶಿವನಂದ ಸ್ಟೀಲ್ ಬ್ರಿಡ್ಜ್ ನಂತೆಯೇ ಜೆಸಿ ರಸ್ತೆಯಿಂದ ಟೌನ್ ಹಾಲ್​ವರೆಗೂ ಅಲ್ಲಿಂದ ಕಸ್ತುರುಬಾ ರೋಡ್ ವರೆಗೂ ಸ್ಟೀಲ್ ಬ್ರಿಡ್ಜ್ ಮಾಡಲು ಪ್ಲಾನ್ ಮಾಡಲಾಗುತ್ತಿದೆ.

ಶಿವಾನಂದ ಸರ್ಕಲ್ ಸ್ಟೀಲ್ ಫ್ಲೈಒವರ್ ವಿವಾದದ ಬಳಿಕ  ಜೆಸಿ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ ಮಾಡಲು ಬಿಬಿಎಂಪಿ ಸಿದ್ಧತೆ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Oct 05, 2023 | 3:53 PM

Share

ಬೆಂಗಳೂರು, ಅ.05: ಭಾರಿ ವಿವಾದಗಳಿಂದಲೇ ನಿರ್ಮಾಣವಾಗಿದ್ದ ಶಿವಾನಂದ ಸ್ಟೀಲ್ ಬ್ರಿಡ್ಜ್ ನಂತೆಯೇ (Shivananda Steel Bridge) ನಗರದ ಜೆಸಿ ರಸ್ತೆಯಲ್ಲಿ ಸ್ಟೀಲ್ ಬ್ರಿಡ್ಜ್ (Steel Bridge) ಮಾಡಲು ಬಿಬಿಎಂಪಿ (BBMP) ಸಜ್ಜಾಗಿದೆ. ಬೆಂಗಳೂರಿನ ಶಿವನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.‌ ಸಾಕಷ್ಟು ವಿವಾದಗಳಿಂದಲೇ ನಿರ್ಮಾಣವಾದ ಶಿವನಂದ ಸ್ಟೀಲ್ ಬ್ರಿಡ್ಜ್ ಇದೀಗಾ ಮತ್ತೆ ಮುನ್ನೆಲೆಗೆ ಬಂದಿದೆ.‌ ಶಿವನಂದ ಸ್ಟೀಲ್ ಬ್ರಿಡ್ಜ್ ನಂತೆಯೇ ಜೆಸಿ ರಸ್ತೆಯಿಂದ ಟೌನ್ ಹಾಲ್​ವರೆಗೂ ಅಲ್ಲಿಂದ ಕಸ್ತುರುಬಾ ರೋಡ್ ವರೆಗೂ ಸ್ಟೀಲ್ ಬ್ರಿಡ್ಜ್ ಮಾಡಲು ಪ್ಲಾನ್ ಮಾಡಲಾಗುತ್ತಿದೆ.

ಹೌದು, ಈ ಸ್ಟೀಲ್ ಬ್ರಿಡ್ಜ್ ಮಾಡುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಮುಂದಿನ ತಿಂಗಳಿನಿಂದ ಇದರ ಕಾಮಾಗರಿ ಆರಂಭವಾಗುವ ಸಾಧ್ಯತೆ ಇದೆ. ಇನ್ನು ಈ ಸ್ಟೀಲ್ ಬ್ರಿಡ್ಜ್ ಮಾಡಲು ಬಿಜೆಪಿ ಸರ್ಕಾರದ ಅವಧಿಯಲ್ಲಿ‌ ನಗರೋತ್ಥಾನ ಅನುದಾನದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಇದೀಗಾ ಸ್ಟೀಲ್ ಎಲಿವೆಟೆಡ್ ಕಾರಿಡಾರ್​ಗೆ ಡಿಸಿಎಂ ಡಿಕೆ ಶಿವಕುಮಾರ್ ಸಹ ಅಸ್ತು ಎಂದಿದ್ದಾರಂತೆ. ಸಧ್ಯ ಮಿನರ್ವ ಸರ್ಕಲ್‌ನಿಂದ ಜೆ.ಸಿ ರಸ್ತೆ ಮಾರ್ಗವಾಗಿ ಹಡ್ಸನ್ ಸರ್ಕಲ್ ವರೆಗೂ ಈ ಕಾರಿಡಾರ್ ನಿರ್ಮಾಣವಾಗಲಿದ್ದು, ಈ ಯೋಜನೆಗೆ 213 ಕೋಟಿ ಅನುದಾನ ಮೀಸಲಿಡಲಾಗಿದೆ. ಇನ್ನು ಎಲಿವೇಟೆಡೆಡ್ ಒಟ್ಟು ನಾಲ್ಕು ಪಥದ ಫ್ಲೈಒವರ್ ಇದಾಗಿದ್ದು, ಮಿನರ್ವ ಸರ್ಕಲ್, ಎಲ್ಐಸಿ ಆಫೀಸ್, ಹಲಸೂರು ಗೇಟ್ ಸ್ಟೇಷನ್, ಶಿವಾಜಿ ಹಾಗೆ ಭಾರತ್ ಟಾಕೀಸ್ ಬಳಿ ಸಿಗ್ನ‌ಲ್‌ ಮುಕ್ತವಾಗಲಿದೆ. ವಿವಿ ಪುರ ಹಾಗೂ ಆರ್.ವಿ ರೋಡ್ ನಲ್ಲಿ ಮೇಲೇರಿ ಕೆಜಿ ರಸ್ತೆಯಲ್ಲಿ ಇಳಿಯಬಹುದಾಗಿದ್ದು, ಟ್ರಾಫಿಕ್ ಗೆ ಕಡಿವಾಣ ಹಾಕಲು ಈ ಯೋಜನೆ ರೂಪಿಸಲಾಗಿದ್ಯಂತೆ.

ಇದನ್ನೂ ಓದಿ: Shivananda Steel Flyover: ಶಿವಾನಂದ ಮೇಲ್ಸೇತುವೆ ಕೆಳಗೆ ಪಬ್ಲಿಕ್ ಪ್ಲಾಜಾ ನಿರ್ಮಾಣಕ್ಕೆ ಸ್ಥಳೀಯರ ವಿರೋಧ, ಏನಿದು ಹೊಸ ಯೋಜನೆ?

ಇನ್ನು, ಸಿಟಿಯಲ್ಲಿ ಇನ್ನೊಂದು ಸ್ಟೀಲ್ ಬ್ರಿಡ್ಜ್ ಮಾಡುತ್ತಿದ್ದಾರೆ ಅಂತ ಗೊತ್ತಾಗುತ್ತಿದ್ದಂತೆ ಜನರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸ್ಟೀಲ್ ಬ್ರಿಡ್ಜ್ ಕುರಿತಾಗಿ ಈಗಾಗಲೆ ಸಾಕಷ್ಟು ವಿವಾದಗಳಾಗಿವೆ.‌ ಬ್ರಿಡ್ಜ್ ನಿರ್ಮಾಣದ ಬಳಿಕವೂ ಅವೈಜ್ಞಾನಿಕ ಕಾಮಾಗಾರಿ ಅಂತ ಕಮೆಂಟ್ಸ್ ಗಳು ಬಂದಿವೆ.‌ ಈ ಸಂದರ್ಭದಲ್ಲಿ ಮತ್ತೊಂದು ಸ್ಟೀಲ್ ಬ್ರಿಡ್ಜ್ ಮಾಡುವ ಅಗತ್ಯತೆ ಇತ್ತಾ ಎಂದು ಸಾಮಾಜಿಕ ಕಾರ್ಯಕರ್ತರು ಸರ್ಕಾರಕ್ಕೆ ಪ್ರಶ್ನಿಸುತ್ತಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?