AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿನ್ನಿಪೇಟೆಯ ಗಣಪತಿ ದೇಗುಲಕ್ಕೆ ಸಂಕಷ್ಟ, ನೋಟಿಸ್; 277 ಧಾರ್ಮಿಕ ಕೇಂದ್ರಗಳ ತೆರವಿಗೆ ಬಿಬಿಎಂಪಿ ಸಿದ್ದತೆ

ಬೆಂಗಳೂರಿನಲ್ಲಿ 2009 ರ ನಂತರ 277 ಅನಧಿಕೃತವಾಗಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಲಾಗಿದೆ. ಈ 277 ಧಾರ್ಮಿಕ ಕೇಂದ್ರಗಳಲ್ಲಿ ದೇವಾಲಯ, ಮಸೀದಿ, ಚರ್ಚ್ ಗಳ ಕೂಡ ಸೇರಿಕೊಂಡಿದೆ. 277 ಧಾರ್ಮಿಕ ಕಟ್ಟಡಗಳ ತೆರವು ಮಾಡಲು ಬಿಬಿಎಂಪಿ ಸೂಚನೆ ನೀಡಿದೆ.

ಬಿನ್ನಿಪೇಟೆಯ ಗಣಪತಿ ದೇಗುಲಕ್ಕೆ ಸಂಕಷ್ಟ, ನೋಟಿಸ್; 277 ಧಾರ್ಮಿಕ ಕೇಂದ್ರಗಳ ತೆರವಿಗೆ ಬಿಬಿಎಂಪಿ ಸಿದ್ದತೆ
ಗಣೇಶ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Sep 14, 2021 | 10:14 AM

Share

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ನಿರ್ಮಿಸಿದ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿ ಬಿನ್ನಿಪೇಟೆಯ ಸಂಕಷ್ಟಹರ ಗಣಪತಿ ದೇವಾಲಯಕ್ಕೆ ನೋಟಿಸ್ ನೀಡಲಾಗಿದೆ. 2009ರ ನಂತರ ಫುಟ್‌ಪಾತ್ ಮೇಲೆ ದೇವಾಲಯ ನಿರ್ಮಾಣ ಮಾಡಲಾಗಿದೆ. ಹೀಗಾಗಿ ದೇವಾಲಯವನ್ನು ತೆರವು ಮಾಡುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಆದ್ರೆ ದೇವಸ್ಥಾನದಿಂದ ಯಾರು ನೋಟಿಸ್ ಪಡೆಯದಿರುವ ಹಿನ್ನೆಲೆ ದೇಗುಲದಿಂದ ಕಸ ಸಂಗ್ರಹಣೆಯನ್ನು ಬಿಬಿಎಂಪಿ ಸ್ಥಗಿತಗೊಳಿಸಿದೆ.

ಬೆಂಗಳೂರಿನಲ್ಲಿ 2009 ರ ನಂತರ 277 ಅನಧಿಕೃತವಾಗಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಲಾಗಿದೆ. ಈ 277 ಧಾರ್ಮಿಕ ಕೇಂದ್ರಗಳಲ್ಲಿ ದೇವಾಲಯ, ಮಸೀದಿ, ಚರ್ಚ್ ಗಳ ಕೂಡ ಸೇರಿಕೊಂಡಿದೆ. 277 ಧಾರ್ಮಿಕ ಕಟ್ಟಡಗಳ ತೆರವು ಮಾಡಲು ಬಿಬಿಎಂಪಿ ಸೂಚನೆ ನೀಡಿದೆ. 277 ರ ಪೈಕಿ 200 ಹಿಂದೂ ದೇವಾಲಯಗಳಿದ್ದು, ನಾಗರ ಕಟ್ಟೆ, ಗಣೇಶ ಮೂರ್ತಿ, ಮಾಲದ ಮರ ಕಟ್ಟೆ ಹಾಗೂ ಸಣ್ಣಪುಟ್ಡ ದೇವಾಲಯಗಳಿಗೆ ಬಿಬಿಎಂಪಿ ನೋಟಿಸ್ ಕೊಟ್ಟಿದೆ.

50 ಕ್ಕೂ ಅಧಿಕ ಸಣ್ಣಪುಟ್ಟ ದೇವಾಲಯಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಆದ್ರೆ ಸಾರ್ವಜನಿಕ ಸ್ಥಳ ಹಾಗೂ ಫುಟ್ ಪಾತ್, ಪಾರ್ಕ್ಗಳಲ್ಲಿ ನಿರ್ಮಾಣವಾಗಿರುವ 70 ಮಸೀದಿ, ಚರ್ಚ್ ಗಳ ತೆರವು ಮಾಡಲು ಬಿಬಿಎಂಪಿ ಯಾವುದೇ ಕ್ರಮ ಕೈಗೊಂಡಿಲ್ಲ. 70 ಮಸೀದಿ, ಚರ್ಚ್ ಗಳಿಗೆ ಕೇವಲ ನೋಟಿಸ್ ಕೊಟ್ಟು ಸುಮ್ಮನಾಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಜನರ ಭಾವನೆಗಳಿಗೆ ಧಕ್ಕೆಯಾಗದಂತೆ ತೆರವಿಗೆ ಸೂಚನೆ ನೀಡಿದ್ದೇವೆ ಇನ್ನು ದೇವಸ್ಥಾನಗಳ ತೆರವು ಕಾರ್ಯಚರಣೆ ಬಗ್ಗೆ ಮಾತನಾಡಿದ ಕಂದಾಯ ಇಲಾಖೆ ಸಚಿವ ಆರ್ ಅಶೋಕ, ದೇಗುಲಗಳ ತೆರವು ಸಂಬಂಧ ಡಿಸಿಗಳ ಜತೆ ಚರ್ಚಿಸಿದ್ದೇನೆ. ಜನರ ಭಾವನೆಗಳಿಗೆ ಧಕ್ಕೆಯಾಗದಂತೆ ತೆರವಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.

ಏಕಾಏಕಿ ದೇವಾಲಯ ತೆರವು ಮಾಡುವುದು ಸರಿಯಲ್ಲ. ಈ ವಿಚಾರವಾಗಿ ಸಿಎಂ ಬೊಮ್ಮಾಯಿ ಜೊತೆ ಚರ್ಚಿಸುತ್ತೇನೆ. ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಆದರೆ ಜನರ ಭಾವನೆಗಳಿಗೆ ಧಕ್ಕೆಯಾಗದಂತೆ ತೆರವು ಮಾಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ಇದನ್ನೂ ಓದಿ: ತೆರವುಗೊಳಿಸಬೇಕಾದ ಅನಧಿಕೃತ ದೇಗುಲಗಳ ಪಟ್ಟಿಗೆ ಸೇರಿರುವ ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರಗಳು ಇವು

Published On - 10:09 am, Tue, 14 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!