Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಾಂತರ ರೂ. ವೆಚ್ಚದಲ್ಲಿ ಫ್ರೀಡಂ ಪಾರ್ಕ್ ನವೀಕರಿಸಿ ಆದಾಯಕ್ಕೆ ಪ್ಲಾನ್ ಮಾಡಿದ ಬಿಬಿಎಂಪಿ

ಪ್ರತಿಭಟನೆ ಹಾಗೂ ಸರ್ಕಾರಿ ಕಾರ್ಯಕ್ರಮಗಳಿಗೆ ಸೀಮಿತವಾಗಿರುವ ಬೆಂಗಳೂರಿನ ಫ್ರೀಡಂ ಪಾರ್ಕ್ 21 ಎಕರೆ ವ್ಯಾಪ್ತಿ ಪ್ರದೇಶವನ್ನು ಹೊಂದಿದೆ. ಫ್ರೀಡಂ ಪಾರ್ಕ್ ನವೀಕರಣಗೊಳಿಸಿ ಖಾಸಗಿ ಸಭೆ, ಸಮಾರಂಭಗಳಿಗೆ ಅವಕಾಶ ನೀಡಿ ಅದರಿಂದ ಆದಾಯ ಬರುವಂತೆ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ.

ಕೋಟ್ಯಾಂತರ ರೂ. ವೆಚ್ಚದಲ್ಲಿ ಫ್ರೀಡಂ ಪಾರ್ಕ್ ನವೀಕರಿಸಿ ಆದಾಯಕ್ಕೆ ಪ್ಲಾನ್ ಮಾಡಿದ ಬಿಬಿಎಂಪಿ
ಫ್ರೀಡಂ ಪಾರ್ಕ್
Follow us
Vinayak Hanamant Gurav
| Updated By: ಆಯೇಷಾ ಬಾನು

Updated on: Feb 20, 2024 | 8:18 AM

ಬೆಂಗಳೂರು, ಫೆ.20: ನಗರದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್ (Freedom Park) ಸಧ್ಯ ಸರ್ಕಾರಿ ಕಾರ್ಯಕ್ರಮಗಳಿಗೆ ಹಾಗೂ ಪ್ರತಿಭಟನೆಗಳಿಗೆ ಮಾತ್ರ ಸೀಮಿತವಾಗಿದೆ. ಈಗ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಪಾರ್ಕ್ ಅನ್ನು ನವೀಕರಿಸಿ ಪ್ರೇಕ್ಷಣೀಯ ಸ್ಥಳ ಹಾಗೂ ಹೆರಿಟೇಜ್ ಹಬ್ ಮಾಡೋದರ ಜೊತೆಗೆ ಇದರಿಂದಲೂ ಬಿಬಿಎಂಪಿ (BBMP) ಆದಾಯ ಬರುವಂತೆ ಮಾಡಿಕೊಳ್ಳಲು ಹೊರಟಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ಅಂದರೆ ನೆನಪಾಗೋದು ಪ್ರತಿಭಟನೆ ಹಾಗೂ ಸರ್ಕಾರಿ ಕಾರ್ಯಕ್ರಮಗಳು. 21 ಎಕರೆಯಲ್ಲಿ ನಗರದ ಹೃದಯಭಾಗದಲ್ಲಿ ಇರುವ ಫ್ರೀಡಂ ಪಾರ್ಕ್ ಅನ್ನು ನವೀಕರಣಗೊಳಿಸಲು ಬಿಬಿಎಂಪಿ 5 ಕೋಟಿ ರೂಪಾಯಿ ಮೀಸಲಿಟ್ಟಿದ್ದು ನವೀಕರಣ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಪಾರ್ಕ್ ನ ಅಸ್ತಿತ್ವದಲ್ಲಿರುವ ಹಳೆಯ ಸೆಂಟ್ರಲ್ ಜೈಲ್ ರಚನೆಗಳು, ವಿದ್ಯುತೀಕರಣ ಸೇರಿದಂತೆ ಕಟ್ಟಡಗಳಿಗೆ ಹಾನಿಯಾದ ವಿವಿಧ ಕಾಮಗಾರಿಯೊಂದಿಗೆ ರಾಮಚಂದ್ರ ರಸ್ತೆಯಿಂದ ಫ್ರೀಡಂ ಪಾರ್ಕ್​ಗೆ ಎರಡನೇ ಪ್ರವೇಶ ದ್ವಾರ ನಿರ್ಮಾಣಕ್ಕೆ ಯೋಜನೆ ನಡೆದಿದೆ. ಸಧ್ಯ ಫ್ರೀಡಂ ಪಾರ್ಕ್ ಒಳಗಡೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದ್ದು, ಮುಂದಿನ ದಿನಗಳಲ್ಲಿ ಪಾರ್ಕ್‌ ನವೀಕರಣ ಮೂಲಕ ವಾಣಿಜ್ಯ ದೃಷ್ಟಿಕೋನಕ್ಕೂ ಪಾಲಿಕೆ ಪ್ಲ್ಯಾನ್ ಮಾಡಿಕೊಂಡಿದೆ.

ಇದನ್ನೂ ಓದಿ: 6 ಟ್ರಂಕ್​ಗಳ ಮೂಲಕ ಬೆಂಗಳೂರಿನಿಂದ ತಮಿಳುನಾಡಿಗೆ ಮರಳಲಿವೆ ದಿ.ಜಯಲಲಿತಾರ ಆಭರಣ, ವಸ್ತುಗಳು

ಇನ್ನೂ ಕೋವಿಡ್​ಗೂ ಮುಂಚಿತವಾಗಿಯಷ್ಟೇ ಬಿಬಿಎಂಪಿ 2 ಕೋಟಿಯಲ್ಲಿ ಇದೇ ಫ್ರೀಡಂ ಪಾರ್ಕ್ ಅನ್ನು ನವೀಕರಿಸಿತ್ತು. ಈ ವೇಳೆ ಖಾಲಿ ಬಿದ್ದಿದ್ದ ಜಾಗದಲ್ಲಿ ಆಂಫಿ ಥಿಯೇಟರ್​​​, ಹೊರ ಸಭಾಂಗಣ ಹಾಗೂ ಗಾರ್ಡನ್ ಅನ್ನು ಇಲ್ಲಿ ಹೊಸದಾಗಿ ನಿರ್ಮಿಸಲಾಗಿತ್ತು. ಕಳಪೆ ನಿರ್ವಹಣೆಯಿಂದ ಇವೆಲ್ಲವೂ ಹಾಳು ಬೀಳಲು ಶುರುವಾಗಿದೆ. ಇದರೆ ಜೊತೆಗೆ ಇದರೊಳಗಿರುವ ಹಳೆಯ ಕೇಂದ್ರ ಕಾರಾಗೃಹ ಕೂಡ ಕುಸಿಯುವ ಹಂತಕ್ಕೆ ಬಂದು ನಿಂತಿದೆ. ಹೀಗಾಗಿ ಐತಿಹಾಸಿಕ ಪರಂಪರೆಯನ್ನು ಉಳಿಸಿಕೊಂಡು ಹೊಸ ಲುಕ್ ಜೊತೆಗೆ ಆದಾಯವನ್ನೂ ಇಲ್ಲಿಂದ ಪಾಲಿಕೆ ಎದುರು ನೋಡುತ್ತಿದೆ.

ಒಟ್ಟಿನಲ್ಲಿ ಪಾರ್ಕ್ ನ ಹೊರಭಾಗದಲ್ಲಿರುವ ಖಾಲಿ ಜಾಗ ಪ್ರತಿಭಟನೆಗೆ ಹಾಗೂ ಒಳಭಾಗ ಸರ್ಕಾರಿ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿತ್ತು. ಇದೀಗ ಎಲ್ಲದಕ್ಕೂ ಸುಸಜ್ಜಿತವಾಗಿ ಅವಕಾಶ ಕಲ್ಪಿಸಿಕೊಡಲು ಪಾಲಿಕೆ ಮುಂದಾಗಿದ್ದು, ಖಾಸಗಿ ಕಾರ್ಯಕ್ರಮಗಳಿಗೂ ನಿಗದಿತ ದರದೊಂದು ಅವಕಾಶ ನೀಡುವ ಮೂಲಕ ಹೀಗೆ ಯಾವುದೇ ಕೆಲಸಕ್ಕೆ ಬಾರದೆ ಬಿದ್ದಿರುವ ಜಾಗದಿಂದ ಆದಾಯ ಕ್ರೂಢೀಕರಿಸಲು ಪಾಲಿಕೆ ಚಿಂತಿಸಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್