AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Election: ಬಗೆಹರಿಯದ ಮೀಸಲಾತಿ ಗೊಂದಲ, ಸರ್ಕಾರಕ್ಕೆ ಮಹತ್ವದ ವರದಿ ಕೇಳಿದ ಕೋರ್ಟ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ ಕೊಟ್ಟಿದೆ.

BBMP Election: ಬಗೆಹರಿಯದ ಮೀಸಲಾತಿ ಗೊಂದಲ, ಸರ್ಕಾರಕ್ಕೆ ಮಹತ್ವದ ವರದಿ ಕೇಳಿದ ಕೋರ್ಟ್
ಬಿಬಿಎಂಪಿ ಮತ್ತು ಕರ್ನಾಟಕ ಹೈಕೋರ್ಟ್​ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 28, 2022 | 6:16 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ವಾರ್ಡ್‌ವಾರು ಮಹಿಳಾ ಮೀಸಲಾತಿ ಗೊಂದಲ ಇನ್ನೂ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ವಾರ್ಡ್ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಸೆ.28) ಕರ್ನಾಟಕ ಕೈಕೋರ್ಟ್ (Karnataka High Court) ನಲ್ಲಿ ವಿಚಾರಣೆ ನಡೆಯಿತು.

ಬಿಬಿಎಂಪಿ ವಾರ್ಡ್‌ವಾರು ಮೀಸಲು ನಿಗದಿ ಪ್ರಶ್ನಿಸಿ ಈಜಿಪುರದ ಕೆ ಮಹದೇವ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಈ ವರ್ಷದೊಳಗೆ ಬಿಬಿಎಂಪಿ ಚುನಾವಣೆ ನಡೆಯಲೇಬೇಕು. ಹೊಸ‌ ಮೀಸಲಾತಿ ರೂಪಿಸಲು ಎಷ್ಟು ಕಾಲಾವಕಾಶ ಬೇಕು? ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಅಲ್ಲದೇ ಅಲ್ಲಿಯವರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸದಂತೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್‌ 30ಕ್ಕೆ ಮುಂದೂಡಿದೆ.

ಮೀಸಲಾತಿಗೆ ಸಂಬಂಧಿಸಿದ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಆಯೋಗದ ವರದಿಗೆ ಯಾವ ದಾಖಲೆ ಆಧರಿಸಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ.

ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ಪುನರ್​ ವಿಂಗಡಣೆಯಲ್ಲಿ ಲೋಪದೋಷ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ರಿಟ್​ ವಜಾ: ಹೈಕೋರ್ಟ್​

ಅರ್ಜಿದಾರರ ಪರ ಹಿರಿಯ ವಕೀಲರಾದ ಜಯಕುಮಾರ್‌ ಪಾಟೀಲ್‌, ಎ ಎಸ್‌ ಪೊನ್ನಣ್ಣ, ವಕೀಲರಾದ ಸಂದೀಪ್‌ ಪಾಟೀಲ್‌, ಎಂ ಜಯ ಮೋವಿಲ್‌ ಅವರು ಮೀಸಲು ನಿಗದಿ ಮಾಡುವ ನಿಯಮ ಪಾಲನೆಯಾಗಿಲ್ಲ. ಖಚಿತ ದತ್ತಾಂಶ ಇಲ್ಲದೇ ಒಬಿಸಿ ಮೀಸಲು ನಿಗದಿ ಮಾಡಲಾಗಿದೆ. ಸಮೀಕ್ಷೆಯನ್ನೇ ನಡೆಸದೆ ಒಬಿಸಿ ಆಯೋಗವು ಮೀಸಲಾತಿ ನಿರ್ಧರಿಸಿದೆ. ರಾಜಕೀಯ ಹಿಂದುಳಿದಿರುವಿಕೆ ಬಗ್ಗೆಯೂ ಯಾವುದೇ ಸಮೀಕ್ಷೆ ನಡೆಸಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಮೂರು ಹಂತದ ಪರೀಕ್ಷೆಯ ಮಾನದಂಡ ಅನುಸರಿಸಿಲ್ಲ. ಹೀಗಾಗಿ, ಒಬಿಸಿ ಆಯೋಗದ ವರದಿಯಂತೆ ಮೀಸಲು ಪರಿಗಣಿಸಬಾರದು. ಹೊಸದಾಗಿ ಒಬಿಸಿ ಸಮುದಾಯಗಳ ಸಮೀಕ್ಷೆ ನಡೆಸಲು ನಿರ್ದೇಶನ ನೀಡಬೇಕು. ಕೆಲವು ವಿಧಾನಸಭಾ ಕ್ಷೇತ್ರಗಳ ಎಲ್ಲಾ ವಾರ್ಡ್ ಮಹಿಳೆಯರಿಗೆ ಮೀಸಲಿರಿಸಲಾಗಿದೆ. ಈ ನಿಟ್ಟಿನಲ್ಲಿಯೂ ಇದು ದೋಷಪೂರಿತ ಎಂದು ವಾದಿಸಿದರು.

ಇದಕ್ಕೆ ಪ್ರತಿಯಾಗಿ ರಾಜ್ಯ ಚುನಾವಣಾ ಆಯೋಗ ಪರ ವಕೀಲ ಕೆ ಎನ್ ಫಣೀಂದ್ರ ವಾದ ಮಂಡಿಸಿದ್ದು, ಒಬಿಸಿ ಮೀಸಲು ಪರಿಗಣಿಸದೇ ಚುನಾವಣೆ ನಡೆಸಬಹುದು. ಸುರೇಶ್‌ ಮಹಾಜನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನ ಇಲ್ಲೂ ಅನ್ವಯಿಸುತ್ತದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚುನಾವಣೆ ನಡೆಸಲು ಆದೇಶಿಸುವಂತೆ ಮನವಿ ಮಾಡಿದರು. ಅಲ್ಲದೆ, ಹೊಸದಾಗಿ ಒಬಿಸಿ ಕುರಿತು ವರದಿ ಪಡೆಯುವುದು ವಿಳಂಬವಾಗುತ್ತದೆ. ಮೂರು ಹಂತದ ಪರಿಶೀಲನೆಯ ಆಧಾರದಲ್ಲಿ ಮೀಸಲಾತಿ ರೂಪಿಸಲು ಸಮಯಬೇಕಾಗುತ್ತದೆ. ಒಂದು ವೇಳೆ ಮೀಸಲು ಮರು ರೂಪಿಸಲು ನಿರ್ದೇಶನ ನೀಡಿದರೆ ಒಂದು ವಾರ ಮಾತ್ರ ಸಮಯ ನೀಡಬೇಕು. ಕೇಂದ್ರ ಚುನಾವಣಾ ಆಯೋಗಕ್ಕೆ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮರಳಿಸಬೇಕಿದೆ. ಹೀಗಾಗಿ, ಮೀಸಲು ಮರುರೂಪಿಸಲು ಹೆಚ್ಚಿನ ಸಮಯ ನೀಡಬಾರದು ಎಂದರು.

ಇನ್ನಷ್ಟು ಸುದ್ದಿಗಾಗಿ ಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?