Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಕೈಯಿಂದ ಕಾಯಮಾತಿ ಪತ್ರ ಕೊಡಿಸ್ತೇವೆಂದು ಪೌರಕಾರ್ಮಿಕರಿಗೆ ವಂಚನೆ, ತಲಾ 5 ಸಾವಿರದಂತೆ ವಸೂಲಿ

ಕೆಲಸ ಕಾಯಂ ಆಗಬೇಕು ಎಂದು ಅದೆಷ್ಟೋ ವರ್ಷಗಳಿಂದ ಹೋರಾಟ ನಡೆಸಿದ್ದ ಪೌರಕಾರ್ಮಿಕರ ಕೂಗಿಗೆ ಸರ್ಕಾರ ಕೂಡ ಸ್ಪಂದಿಸಿದೆ. ಆದರೆ, ಇದೀಗ ಅದೇ ವಿಚಾರ ಮುಂದಿಟ್ಟುಕೊಂಡು ಮೇಸ್ತ್ರಿಗಳ ಮೂಲಕ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಪೌರಕಾರ್ಮಿಕರಿಗೆ ಸಿಎಂ ಕೈಯಿಂದಲೇ ಕಾಯಂ ಪತ್ರ ಕೊಡಿಸ್ತೀವೆ ಅಂತಾ ಮೇಸ್ತ್ರಿಗಳ ಮೂಲಕ ಪೌರಕಾರ್ಮಿಕರ ಬಳಿ ಹಣ ವಸೂಲಿ ಮಾಡ್ತಿರೋ ವಿಡಿಯೋ ಇದೀಗ ಸಂಚಲನ ಸೃಷ್ಟಿಸಿದೆ.

ಸಿಎಂ ಕೈಯಿಂದ ಕಾಯಮಾತಿ ಪತ್ರ ಕೊಡಿಸ್ತೇವೆಂದು ಪೌರಕಾರ್ಮಿಕರಿಗೆ ವಂಚನೆ, ತಲಾ 5 ಸಾವಿರದಂತೆ ವಸೂಲಿ
ಸಾಂದರ್ಭಿಕ ಚಿತ್ರ
Follow us
ಶಾಂತಮೂರ್ತಿ
| Updated By: Ganapathi Sharma

Updated on:Mar 11, 2025 | 10:06 AM

ಬೆಂಗಳೂರು, ಮಾರ್ಚ್ 11: ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು (Pourakarmikas) ಕೆಲಸ ಕಾಯಂ ಮಾಡಿ ಎಂದು ಆಗಾಗ ಪ್ರತಿಭಟನೆ ನಡೆಸಿದ್ದರು. ಅಲ್ಲದೇ, ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರು. ಇದೀಗ ಇದೇ ವಿಚಾರವನ್ನು ಬಂಡವಾಳ ಮಾಡಿಕೊಂಡ ಕೆಲ ಗುತ್ತಿಗೆದಾರರು ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಕೆಲವರು ಮೇಸ್ತ್ರಿಗಳ ಮೂಲಕ ಪೌರಕಾರ್ಮಿಕರ ಬಳಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಇದೇ ಏಪ್ರಿಲ್ 3 ರಂದು ಸಿಎಂ ಸಿದ್ದರಾಮಯ್ಯ (Siddaramaiah) ಕೈಯಲ್ಲೇ ಕಾಯಮಾತಿ ಪತ್ರ ಕೊಡಿಸುತ್ತೇವೆ ಎಂದು ಪ್ರತಿವಾರ್ಡ್​​ನಲ್ಲಿ ಪೌರಕಾರ್ಮಿಕರಿಂದ ತಲಾ 5 ಸಾವಿರ ರೂಪಾಯಿ ವಸೂಲಿ ಮಾಡಿದ್ದಾರೆ ಎನ್ನಲಾದ ವಿಡಿಯೋ ಇದೀಗ ಪೌರಕಾರ್ಮಿಕ ಮುಖಂಡರನ್ನು ಕೆರಳುವಂತೆ ಮಾಡಿದೆ.

ಮೈಸೂರು ನಾರಾಯಣ ಎಂಬ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ಹಾಗೂ ಕೆಲ ಮೇಸ್ತ್ರಿಗಳು ಪೌರಕಾರ್ಮಿಕರಿಂದ ತಲಾ 5 ಸಾವಿರ ರೂಪಾಯಿ ಹಣ ವಸೂಲಿ ಮಾಡಿದ್ದಾರೆ ಎಂದು ಪೌರಕಾರ್ಮಿಕ ಮುಖಂಡ ತ್ಯಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ. ಏಪ್ರಿಲ್ 3ನೇ ತಾರಿಕು ಕಾಯಂ ಪತ್ರ ಕೊಡಿಸುತ್ತೇವೆ ಎಂದು ಪೌರಕಾರ್ಮಿಕರಿಗೆ ಸುಳ್ಳು ಭರವಸೆ ನೀಡ್ತಿದ್ದಾರೆ ಎಂದು ಕಿಡಿಕಾರಿರುವ ಅವರು, ಈ ಬಗ್ಗೆ ಬಿಬಿಎಂಪಿಯ ಆಯುಕ್ತರು ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಕಾರ್ಯಕ್ರಮಕ್ಕೆ ಪೌರಕಾರ್ಮಿಕರನ್ನುಸೇರಿಸಲು ಪ್ಲಾನ್ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ತ್ಯಾಗರಾಜ್, ಇತ್ತ ಪ್ರತಿವಾರ್ಡ್​​ನ ಪೌರಕಾರ್ಮಿಕರ ಬಳಿ ಹಣ ಪಡೆದಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಈ ಬಗ್ಗೆ ಲೋಕಾಯುಕ್ತಕ್ಕೂ ದೂರು ನೀಡಲು ಸಜ್ಜಾಗಿರುವ ಪೌರಕಾರ್ಮಿಕರ ಮುಖಂಡರು, ಬಿಬಿಎಂಪಿ ಹೆಸರಲ್ಲಿ, ಸರ್ಕಾರದ ಹೆಸರಲ್ಲಿ ಪೌರಕಾರ್ಮಿಕರಿಗೆ ವಂಚನೆ ಮಾಡಲು ಹೊರಟಿರುವವರ ವಿರುದ್ಧ ಸೂಕ್ತ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
ಕೊಪ್ಪಳ ರೇಪ್​ ಕೇಸ್​: ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಪೊಲೀಸರ ದಾಳಿ
Image
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​
Image
ಮದರಸಾದಲ್ಲಿ ಬಾಲಕಿ ಮೇಲೆ ಹಲ್ಲೆ: ದೂರು ಕೊಟ್ಟ ಪೋಷಕರಿಗೆ ಕೊಲೆ ಬೆದರಿಕೆ
Image
‘ಕೈ’ ಶಾಸಕಾಂಗ ಸಭೆಯಲ್ಲೇ ಅಸಮಾಧಾನದ ಹೊಗೆ: ಸತೀಶ್ ವಿರುದ್ಧ ಗಣಿಗ ಆಕ್ಷೇಪ

ಇದನ್ನೂ ಓದಿ: ಚಿನ್ನ ಕಳ್ಳಸಾಗಾಣಿಕೆ: ಪತಿ ನೀಡಿದ ಸುಳಿವಿನಿಂದ ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ರನ್ಯಾ ರಾವ್​?

ಸದ್ಯ ಬಿಬಿಎಂಪಿಯ ಎಂಟು ವಲಯಗಳಲ್ಲಿ ಸಾವಿರಾರು ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇತ್ತ ಸರ್ಕಾರ ಕೂಡ ಆಯ್ದ ಪೌರಕಾರ್ಮಿಕರಿಗೆ ಕೆಲಸ ಕಾಯಂ ಮಾಡುವ ಭರವಸೆ ನೀಡಿದೆ. ಆದರೆ, ಕಾಯಂ ಆಗಿರುವವರು ಯಾರೆಲ್ಲ ಎಂಬುದನ್ನು ಪ್ರಕಟಿಸುವ ಮೊದಲೇ ಕೆಲಸ ಕಾಯಂ ಆಮಿಷವೊಡ್ಡಿ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಇತ್ತ ಹಣ ನೀಡಿದ ವಿಚಾರ ಬಯಲು ಮಾಡಿದರೆ ಕಾಯಂ ಪಟ್ಟಿಯಿಂದ ಹೆಸರು ತೆಗೆಯುತ್ತೇವೆ ಎಂದು ಪೌರಕಾರ್ಮಿಕರಿಗೆ ಧಮ್ಕಿ ಹಾಕಿರುವ ಆರೋಪ ಕೂಡ ಕೇಳಿಬಂದಿದ್ದು, ಸದ್ಯ ಈ ಬಗ್ಗೆ ಪಾಲಿಕೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:06 am, Tue, 11 March 25

ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ
ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ