AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಜೂನ್​ 30ರ ವರೆಗೆ ವಿಸ್ತರಣೆ

ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ವಿಸ್ತರಣೆ ಮಾಡಬೇಕು ಎಂದು ಕಾರ್ಪೊರೇಟರ್‌ಗಳು ಮನವಿ ಮಾಡಿದ್ದರು. ಇದರ ಆಧಾರದಲ್ಲಿ ಬಿಬಿಎಂಪಿ ಪ್ರಸ್ತಾವನೆ ಸಿದ್ಧಪಡಿಸಿ, ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು.

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಜೂನ್​ 30ರ ವರೆಗೆ ವಿಸ್ತರಣೆ
ಬಿಬಿಎಂಪಿ
Ganapathi Sharma
|

Updated on: Jun 01, 2023 | 8:05 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ಜೂನ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ರಿಯಾಯಿತಿಯು ಏಪ್ರಿಲ್ ಅಂತ್ಯಕ್ಕೆ ಮುಕ್ತಾಯಗೊಂಡಿತ್ತು. ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಪಾಲಿಕೆಯ ಆರ್ಥಿಕ ಹಿತದೃಷ್ಟಿಯಿ೦ದ, 2023-24ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇಕಡ 5 ರಷ್ಟು ರಿಯಾಯಿತಿ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.

ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ವಿಸ್ತರಣೆ ಮಾಡಬೇಕು ಎಂದು ಕಾರ್ಪೊರೇಟರ್‌ಗಳು ಮನವಿ ಮಾಡಿದ್ದರು. ಇದರ ಆಧಾರದಲ್ಲಿ ಬಿಬಿಎಂಪಿ ಪ್ರಸ್ತಾವನೆ ಸಿದ್ಧಪಡಿಸಿ, ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಟ್ಟಿತ್ತು. ಸಾಮಾನ್ಯವಾಗಿ, ಪ್ರತಿ ವರ್ಷ ರಿಯಾಯಿತಿಯನ್ನು ಮೇ ಅಂತ್ಯದವರೆಗೆ ಒಂದು ತಿಂಗಳವರೆಗೆ ವಿಸ್ತರಿಸಲಾಗುತ್ತದೆ. ಆದರೆ ಈ ವರ್ಷ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅದನ್ನು ವಿಸ್ತರಿಸಿರಲಿಲ್ಲ.

ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೇ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದವರು ಮುಂದಿನ ಹಣಕಾಸು ವರ್ಷದಲ್ಲಿ ಪಾವತಿ ಮಾಡುವಾಗ ಶೇಕಡಾ 5 ರಷ್ಟು ರಿಯಾಯಿತಿಯನ್ನು ಪಡೆದು ಸರಿಹೊಂದಿಸಬಹುದಾಗಿದೆ ಎಂದು ಬಿಬಿಎಂಪಿ ಮೂಲಗಳು ಮೇ ಮಧ್ಯಭಾಗದಲ್ಲಿ ತಿಳಿಸಿದ್ದವು.

ಇದನ್ನೂ ಓದಿ: ಗ್ಯಾರಂಟಿಯಿಂದ ಗುತ್ತಿಗೆದಾರಿಗೆ ಆತಂಕ: ಬಾಕಿ ಹಣ ಪಾವತಿಸುವಂತೆ ಬಿಬಿಎಂಪಿಗೆ ಡೆಡ್ ಲೈನ್

ಬಿಬಿಎಂಪಿಯು 2023-24ರ ಬಜೆಟ್‌ನಲ್ಲಿ ಆಸ್ತಿ ತೆರಿಗೆಯಿಂದ ಇತರ ಸೆಸ್‌ಗಳು ಸೇರಿದಂತೆ 4,690 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿದೆ. ಕಳೆದ ವರ್ಷ ಪಾಲಿಕೆಯು 3,332 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಸಂಗ್ರಹಿಸಿದ್ದು, ಮಹದೇವಪುರ ಮತ್ತು ಬಿಬಿಎಂಪಿಯ ಪೂರ್ವ ವಲಯಗಳಿಂದ ಗಮನಾರ್ಹ ಮೊತ್ತ ಸಂಗ್ರಹವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ