AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಜೂನ್​ ಅಂತ್ಯದ ವರೆಗೆ ವಿಸ್ತರಣೆ ಸಾಧ್ಯತೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಏಪ್ರಿಲ್ ಅಂತ್ಯಕ್ಕೆ ಮುಕ್ತಾಯಗೊಂಡಿದ್ದು, ಅದನ್ನು ಜೂನ್ ಕೊನೆಯ ವರೆಗೆ ವಿಸ್ತರಣೆ ಮಾಡಬೇಕು ಎಂದು ಕಾರ್ಪೊರೇಟರ್‌ಗಳು ಮನವಿ ಮಾಡಿದ್ದಾರೆ.

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಜೂನ್​ ಅಂತ್ಯದ ವರೆಗೆ ವಿಸ್ತರಣೆ ಸಾಧ್ಯತೆ
ಬಿಬಿಎಂಪಿ
ಗಣಪತಿ ಶರ್ಮಾ
|

Updated on: May 18, 2023 | 8:30 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಏಪ್ರಿಲ್ ಅಂತ್ಯಕ್ಕೆ ಮುಕ್ತಾಯಗೊಂಡಿದ್ದು, ಅದನ್ನು ಜೂನ್ ಕೊನೆಯ ವರೆಗೆ ವಿಸ್ತರಣೆ ಮಾಡಬೇಕು ಎಂದು ಕಾರ್ಪೊರೇಟರ್‌ಗಳು ಮನವಿ ಮಾಡಿದ್ದಾರೆ. ಇದರ ಆಧಾರದಲ್ಲಿ ಬಿಬಿಎಂಪಿ ಪ್ರಸ್ತಾವನೆ ಸಿದ್ಧಪಡಿಸಲು ಮುಂದಾಗಿದ್ದು, ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡುವ ನಿರೀಕ್ಷೆ ಇದೆ. ಸಾಮಾನ್ಯವಾಗಿ, ರಿಯಾಯಿತಿಯನ್ನು ಪ್ರತಿ ವರ್ಷ ಮೇ ಅಂತ್ಯದವರೆಗೆ ಒಂದು ತಿಂಗಳವರೆಗೆ ವಿಸ್ತರಿಸಲಾಗುತ್ತದೆ. ಆದರೆ ಈ ವರ್ಷ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಅದನ್ನು ವಿಸ್ತರಿಸಲಾಗಿಲ್ಲ.

ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೇ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದವರು ಮುಂದಿನ ಹಣಕಾಸು ವರ್ಷದಲ್ಲಿ ಪಾವತಿ ಮಾಡುವಾಗ ಶೇಕಡಾ 5 ರಷ್ಟು ರಿಯಾಯಿತಿಯನ್ನು ಪಡೆದು ಸರಿಹೊಂದಿಸಬಹುದಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಮಾಜಿ ಕಾರ್ಪೊರೇಟರ್ ಅಬ್ದುಲ್ ವಾಜಿದ್ ಅವರು ಸೋಮವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದು, ಕಂದಾಯ ಅಧಿಕಾರಿಗಳು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದುದರಿಂದ ಆಸ್ತಿ ತೆರಿಗೆ ಸಂಗ್ರಹದಲ್ಲಿ ನಿಧಾನಗತಿಯ ಪ್ರಗತಿಯಾಗಿತ್ತು. ಹೀಗಾಗಿ ಶೇ 5 ರಷ್ಟು ರಿಯಾಯಿತಿಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದ್ದರು.

ಬಿಬಿಎಂಪಿಯು 2023-24ರ ಬಜೆಟ್‌ನಲ್ಲಿ ಆಸ್ತಿ ತೆರಿಗೆಯಿಂದ ಇತರ ಸೆಸ್‌ಗಳು ಸೇರಿದಂತೆ 4,690 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿದೆ. ಕಳೆದ ವರ್ಷ ಪಾಲಿಕೆಯು 3,332 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಸಂಗ್ರಹಿಸಿದ್ದು, ಮಹದೇವಪುರ ಮತ್ತು ಬಿಬಿಎಂಪಿಯ ಪೂರ್ವ ವಲಯಗಳಿಂದ ಗಮನಾರ್ಹ ಮೊತ್ತ ಸಂಗ್ರಹವಾಗಿತ್ತು.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!