AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಗೆ ಇಂದು ಕೊನೇ ದಿನ: ನಾಳೆಯಿಂದ ದುಪ್ಪಟ್ಟು ತೆರಿಗೆ, ಬಡ್ಡಿ ಹಾಗೂ ಕಠಿಣ ಕ್ರಮ

ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಗೆ ಮಾರ್ಚ್ 31, ಅಂದರೆ ಇಂದು ಕೊನೆಯ ದಿನ. ಇಂದು ಪಾವತಿಸದಿದ್ದರೆ ಡಬಲ್ ತೆರಿಗೆ ಮತ್ತು ಬಡ್ಡಿ ಪಾವತಿಸಬೇಕಾಗುತ್ತದೆ. ಹೀಗಾಗಿ ಇಂದು ರಂಜಾನ್ ರಜೆ ಕೂಡ ರದ್ದುಗೊಳಿಸಿ, ರಾತ್ರಿ 11ರವರೆಗೆ ಕಚೇರಿ ತೆರೆದಿರುತ್ತದೆ. ಏಪ್ರಿಲ್ 1 ರಿಂದ ಬಾಕಿ ತೆರಿಗೆ ಪಾವತಿಗೆ ಬಡ್ಡಿ ಎಷ್ಟಾಗುತ್ತದೆ? ಬಾಕಿ ತೆರಿಗೆ ವಸೂಲಿಗೆ ಬಿಬಿಎಂಪಿ ಏನೆಲ್ಲ ಕ್ರಮ ಕೈಗೊಳ್ಳಲಿದೆ ಎಂಬ ವಿವರ ಇಲ್ಲಿದೆ.

ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಗೆ ಇಂದು ಕೊನೇ ದಿನ: ನಾಳೆಯಿಂದ ದುಪ್ಪಟ್ಟು ತೆರಿಗೆ, ಬಡ್ಡಿ ಹಾಗೂ ಕಠಿಣ ಕ್ರಮ
ಸಾಂದರ್ಭಿಕ ಚಿತ್ರ
Follow us
ಶಾಂತಮೂರ್ತಿ
| Updated By: ರಾಜೇಶ್ ದುಗ್ಗುಮನೆ

Updated on:Mar 31, 2025 | 9:59 AM

ಬೆಂಗಳೂರು, ಮಾರ್ಚ್ 31: ಬಿಬಿಎಂಪಿ ಆಸ್ತಿ ತೆರಿಗೆ (BBMP Property Tax) ಪಾವತಿಗೆ ಇಂದು (March 31) ಕೊನೆಯ ದಿನವಾಗಿದೆ. ಒಂದು ವೇಳೆ ಇಂದಿನ ಒಳಗೆ ತೆರಿಗೆ ಪಾವತಿಸಲು ವಿಫಲವಾದರೆ ದುಪ್ಪಟ್ಟು ಮೊತ್ತ ಪಾವತಿಸಬೇಕಾಗಲಿದೆ. ಮಾರ್ಚ್ 31 ರ ವರೆಗೆ ತೆರಿಗೆ ಬಾಕಿ ಪಾವತಿಸಲು ಬಿಬಿಎಂಪಿ (BBMP) ಅವಕಾಶ ಕಲ್ಪಿಸಿದೆ. ಒಂದು ಬಾರಿಯ ಪಾವತಿಗೆ (One Time Settlement) ನೀಡಿದ್ದ ಅವಕಾಶವನ್ನು ಹಲವು ಬಾರಿ ವಿಸ್ತರಿಸಿದ್ದ ಬಿಬಿಎಂಪಿ, ಅಂತಿಮವಾಗಿ ಮಾರ್ಚ್ 31ರ ಗಡುವು ವಿಧಿಸಿತ್ತು. ಇದೀಗ ತೆರಿಗೆ ಪಾವತಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ನಿರ್ಧರಿಸಿದೆ.

ರಂಜಾನ್ ರಜೆ ರದ್ದು: ಇಂದು ರಾತ್ರಿ ವರೆಗೆ ಆಸ್ತಿ ತೆರಿಗೆ ಪಾವತಿಗೆ ಅವಕಾಶ

ಆಸ್ತಿ ತೆರಿಗೆ ಪಾವತಿಗೆ ಕೊನೆಯ ದಿನವಾಗಿರುವ ಕಾರಣ ಬಿಬಿಎಂಪಿ ಕಂದಾಯ ಇಲಾಖೆ ಕಚೇರಿಗೆ ರಂಜಾನ್ ರಜೆ ರದ್ದುಗೊಳಿಸಲಾಗಿದೆ. ರಾತ್ರಿ 11 ರ ವರೆಗೆ ಬಿಬಿಎಂಪಿ ಕಂದಾಯ ಇಲಾಖೆ ಕಚೇರಿ ತೆರೆದಿರಲಿದ್ದು, ಆಸ್ತಿ ತೆರಿಗೆ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.

ದುಪ್ಪಟ್ಟು ತೆರಿಗೆ, ಬಡ್ಡಿಯ ಬರೆ

ಒಂದು ವೇಳೆ ಗಡುವಿನ ಒಳಗೆ ಆಸ್ತಿ ತೆರಿಗೆ ಪಾವತಿಸಲು ವಿಫಲರಾದರೆ, ಏಪ್ರಿಲ್ 1 ರಿಂದ ದುಪ್ಪಟ್ಟು ತೆರಿಗೆ ಪಾವತಿಸಬೇಕಾಗುತ್ತದೆ. ಅದೆ ಜತೆಗೆ, ಶೇ 9 ರ ಬಡ್ಡಿ ಸಹ ಪಾವತಿಸಬೇಕಾಗುತ್ತದೆ. ಬಿಬಿಎಂಪಿ ಕಾಯ್ದೆಯಲ್ಲಿ ತಿದ್ದುಪಡಿ ಹಿನ್ನೆಲೆ ಡಬಲ್ ತೆರಿಗೆ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ
Image
ಇಂದು ಚಾಮರಾಜಪೇಟೆ, ಮೈಸೂರು ರಸ್ತೆಗಳಲ್ಲಿ ಸಂಚರಿಸುವವರು ಗಮನಿಸಿ
Image
ರಂಜಾನ್​ ಹಬ್ಬ: ಮಾ.31 ರಂದು ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
Image
ಬೆಂಗಳೂರಿನ ಆ ಸ್ಥಳದಲ್ಲಿ ಸ್ಫೋಟಕ ಇಡಲು ಪ್ಲಾನ್: ಬಾಯ್ಬಿಟ್ಟ ಅಬ್ದುಲ್
Image
ಬ್ರಿಟಿಷ್ ಕಾಲದ ಟೋಪಿಗೆ ನಿವೃತ್ತಿ: ಪೊಲೀಸರ ತಲೆ ಮೇಲೆ ಸ್ಮಾರ್ಟ್​ ಹ್ಯಾಟ್​

ಸದ್ಯ ಪಾಲಿಕೆಗೆ 400 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಬರಬೇಕಿದೆ. ಇವುಗಳಲ್ಲಿ ಕೆಲವು ಸರ್ಕಾರಿ ಕಟ್ಟಡಗಳ ಆಸ್ತಿ ತೆರಿಗೆ ಕೂಡ ಬಾಕಿ ಇದೆ ಎನ್ನಲಾಗಿದೆ. ತೆರಿಗೆ ಬಾಕಿ ಪಾವತಿಸಿಲ್ಲ ಎಂದಾದರೆ ಮುಂದಿನ ದಿನಗಳಲ್ಲಿ ಆಸ್ತಿ ಹರಾಜು ಹಾಕುವ ಸಾಧ್ಯತೆಯೂ ಇದೆ.

ತೆರಿಗೆ ಪಾವತಿಸದವರ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲು ಪ್ರಾರಂಭಿಸಿದ್ದೇವೆ. ತೆರಿಗೆ ಮೊತ್ತ ವಶಪಡಿಸಿಕೊಳ್ಳುವುದು ಮತ್ತು ಆಸ್ತಿ ಹರಾಜು ಮಾಡುವುದು ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿಯ ಕಂದಾಯ ವಿಶೇಕ್ಷ ಆಯುಕ್ತ ಮುನೀಶ್​ ಮೌದ್ಗಿಲ್ ತಿಳಿಸಿದ್ದಾರೆ.

ಯಾವ ವರ್ಷದ ತೆರಿಗೆ ಬಾಕಿಗೆ ಎಷ್ಟು ಬಡ್ಡಿ?

2022-23 ಅಥವಾ ಅದಕ್ಕಿಂತ ಮೊದಲಿನ ತೆರಿಗೆ ಬಾಕಿಗೆ ವಾರ್ಷಿಕ ಶೇ 9 ರ ಬಡ್ಡಿ ವಿಧಿಸಲಾಗುತ್ತದೆ. 2023-24 ರ ಬಾಕಿಗೆ ಶೇ 15 ರ ಬಡ್ಡಿ ವಿಧಿಸಲಾಗುತ್ತದೆ. 2024-25 ರ ಹಣಕಾಸು ವರ್ಷಕ್ಕೆ ತೆರಿಗೆ ಬಾಕಿ ಇರಿಸಿಕೊಂಡರೆ ಶೇ 15 ರ ಬಡ್ಡಿ ವಿಧಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಉದಾಹರಣೆಗೆ, 2022-23 ರಿಂದ ಆಸ್ತಿ ಮಾಲೀಕರು 1,000 ರೂ. ತೆರಿಗೆ ಬಾಕಿ ಉಳಿದಿದ್ದರೆ, ಅವರು 2,000 ರೂ. ಪಾವತಿಸಬೇಕಾಗುತ್ತದೆ. ಜೊತೆಗೆ ಶೇ 9 ರ ಬಡ್ಡಿ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: BBMP Budget 2025: ಬ್ರ್ಯಾಂಡ್ ಬೆಂಗಳೂರಿಗೆ ಒತ್ತು ನೀಡಿದ ಬಿಬಿಎಂಪಿ ಬಜೆಟ್, ಯಾವ ಕ್ಷೇತ್ರಕ್ಕೆ ಎಷ್ಟು ಸಿಕ್ತು? ಇಲ್ಲಿದೆ ವಿವರ

ಪ್ರಸ್ತುತ, ಬಿಬಿಎಂಪಿ ಮಿತಿಯಲ್ಲಿ ಸುಮಾರು 1,82,467 ಆಸ್ತಿಗಳು ತೆರಿಗೆ ಬಾಕಿ ಉಳಿಸಿಕೊಂಡಿವೆ. ಮಹದೇವಪುರ, ಪೂರ್ವ ಮತ್ತು ದಕ್ಷಿಣ ವಲಯಗಳಲ್ಲಿ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಳ್ಳಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 am, Mon, 31 March 25

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್