ಬೆಂಗಳೂರಿನಲ್ಲಿ ಸ್ಥಗಿತಗೊಂಡಿಲ್ಲ ಒತ್ತುವರಿ ತೆರವು ಕಾರ್ಯ, ಮತ್ತೆ ಯಾವಾಗ ಶುರು?

ಪೂರ್ವ ಪಾರ್ಕ್ರಿಡ್ಜ್ ನ ಮೂರು ವಿಲ್ಲಾಗಳು, ರೈನ್ ಬೋ ಲೇಔಟ್ ನ 30 ವಿಲ್ಲಾಗಳು ಡೆಮಾಲಿಷನ್ ಗೆ ಫಿಕ್ಸ್ ಆಗಿ ನಿಂತಿವೆ. ಇಂದು ಮತ್ತು ನಾಳೆ ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ನಡೆಯಲಿದೆ.

ಬೆಂಗಳೂರಿನಲ್ಲಿ ಸ್ಥಗಿತಗೊಂಡಿಲ್ಲ ಒತ್ತುವರಿ ತೆರವು ಕಾರ್ಯ, ಮತ್ತೆ ಯಾವಾಗ ಶುರು?
ಬೆಂಗಳೂರಿನಲ್ಲಿ ಸ್ಥಗಿತಗೊಂಡಿಲ್ಲ ಒತ್ತುವರಿ ತೆರವು ಕಾರ್ಯ, ಮತ್ತೆ ಯಾವಾಗ ಶುರು?
Image Credit source: ಸಾಂದರ್ಭಿಕ ಚಿತ್ರ
Edited By: ಸಾಧು ಶ್ರೀನಾಥ್​

Updated on: Oct 06, 2022 | 2:36 PM

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯ ಸ್ಥಗಿತಗೊಂಡಿದೆಯಾ ಎಂಬ ಅನುಮಾನಗಳ ಮಧ್ಯೆ ಬಿಬಿಎಂಪಿ (BBMP) ಸೋಮವಾರದಿಂದ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯವನ್ನು ಮತ್ತೆ ಕೈಗೆತ್ತಿಕೊಳ್ಳಲಿದೆ. ಈ ಮಧ್ಯೆ, ಇಂದು ಮತ್ತು ನಾಳೆ ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೆ ನಡೆಯಲಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಇಕೋಸ್ಪೇಸ್​ ಕಂಪನಿಯ (ecospace company) ಒತ್ತುವರಿ ಜಾಗ ತೆರವು ಮಾಡಲು ಅಧಿಕಾರಿಗಳಿಗೆ ಫ್ರೀಹ್ಯಾಂಡ್ ನೀಡಲಾಗಿದೆ. ಇದರೊಂದಿಗೆ ಇಕೋಸ್ಪೇಸ್​ ಒಳಗಿರುವ 12 ಅಂತಸ್ತಿನ 2 ಕಟ್ಟಡ ತೆರವು ನಿಶ್ಚಿತವಾಗಿದೆ. ಇಂದು ಅಥವಾ ನಾಳೆ ಇಕೋಸ್ಪೇಸ್​ಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ. ಸಾವಳಕೆರೆಯಿಂದ ಬೆಳ್ಳಂದೂರು ಕೆರೆಗೆ ಸಂಪರ್ಕ ಸಲ್ಲಿಸುವ ರಾಜಕಾಲುವೆ ಮಾರ್ಗದಲ್ಲಿ (Rajakaluve Encroachment clearance) 500 ಮೀಟರ್​ ಉದ್ದ, 40-50 ಅಡಿ ಅಗಲದ ಜಾಗ ಒತ್ತುವರಿಯಾಗಿದೆ.

ಇದರ ಹೊರತಾಗಿ ಪೂರ್ವ ಪಾರ್ಕ್ರಿಡ್ಜ್ ನ ಮೂರು ವಿಲ್ಲಾಗಳು, ರೈನ್ ಬೋ ಲೇಔಟ್ ನ 30 ವಿಲ್ಲಾಗಳು ಡೆಮಾಲಿಷನ್ ಗೆ ಫಿಕ್ಸ್ ಆಗಿ ನಿಂತಿವೆ. ಇಂದು ಮತ್ತು ನಾಳೆ ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ನಡೆಯಲಿದೆ. ಸೋಮವಾರದಿಂದ ತೆರವು ಕಾರ್ಯಾಚರಣೆ ಶುರುವಾಗುವುದು ಪಕ್ಕಾ ಆಗಿದೆ.

Web contact

TV9 Kannada

Read More
Follow Us