AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ರಸ್ತೆಗುಂಡಿಗಳಿಗೆ ಕೊನೆಗೂ ಮುಕ್ತಿ? 150 ಕಿಮೀ ವೈಟ್ ಟಾಪಿಂಗ್ ಆರಂಭಿಸಲು ಬಿಬಿಎಂಪಿ ಸಜ್ಜು

ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗುಂಡಿಗಳಿಂದ ಸುಸ್ತಾಗಿದ್ದ ಜನರಿಗೆ ಇದೀಗ ಈ ಸಮಸ್ಯೆಯಿಂದ ಮುಕ್ತಿ ಸಿಗುವ ಸೂಚನೆ ಸಿಗುತ್ತಿದೆ. ಬೆಂಗಳೂರಿನ 43 ರಸ್ತೆಗಳಿಗೆ 15 ಪ್ಯಾಕೇಜ್​​​ನಲ್ಲಿ ವೈಟ್ ಟಾಪಿಂಗ್ ಮಾಡಲು ಪಾಲಿಕೆ ಸಜ್ಜಾಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲು ತಯಾರಿ ನಡೆಸಿದೆ. ಯಾವೆಲ್ಲ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲಾಗುತ್ತದೆ ಎಂಬ ವಿವರ ಇಲ್ಲಿದೆ.

ಬೆಂಗಳೂರು ರಸ್ತೆಗುಂಡಿಗಳಿಗೆ ಕೊನೆಗೂ ಮುಕ್ತಿ? 150 ಕಿಮೀ ವೈಟ್ ಟಾಪಿಂಗ್ ಆರಂಭಿಸಲು ಬಿಬಿಎಂಪಿ ಸಜ್ಜು
150 ಕಿಮೀ ವೈಟ್ ಟಾಪಿಂಗ್ ಆರಂಭಿಸಲು ಬಿಬಿಎಂಪಿ ಸಜ್ಜು
ಶಾಂತಮೂರ್ತಿ
ಶಾಂತಮೂರ್ತಿ | Edited By: |

Updated on: Jul 03, 2024 | 8:08 AM

Share

ಬೆಂಗಳೂರು, ಜುಲೈ 3: ಬೆಂಗಳೂರಿನ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲು ಸಜ್ಜಾಗಿರುವ ಬಿಬಿಎಂಪಿ, ಶೀಘ್ರದಲ್ಲೇ ಕಾಮಗಾರಿ ಶುರು ಮಾಡಲು ತಯಾರಿ ನಡೆಸಿದೆ. ನಗರದ 43 ರಸ್ತೆಗಳಿಗೆ 1,700 ಕೋಟಿ ರೂಪಾಯಿ ವೆಚ್ಚದಲ್ಲಿ ವೈಟ್ ಟಾಪಿಂಗ್ ನಡೆಸೋಕೆ ತಯಾರಿ ನಡೆದಿದ್ದು, ಈ ಬಗ್ಗೆ ಬಿಬಿಎಂಪಿ ಸಭೆ ನಡೆಸಿದೆ. ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ರಸ್ತೆಗಳಲ್ಲಿ ಪೈಪ್ ಲೈನ್, ಕೇಬಲ್ ಅಳವಡಿಕೆ ಇದ್ದರೆ ಕಾಮಗಾರಿಗೂ ಮೊದಲೇ ಮುಗಿಸುವಂತೆ ಬಿಡಿಎ, ಜಲಮಂಡಳಿ ಹಾಗೂ ಟೆಲಿಕಾಂ ಕಂಪನಿಗಳಿಗೆ ಸೂಚಿಸಿದೆ.

ಬಜೆಟ್​​​ನಲ್ಲಿ ಘೋಷಣೆಯಾದ ಬಳಿಕ ಟೆಂಡರ್ ಆಹ್ವಾನ ಮಾಡಿದ್ದರೂ ಕೂಡ ಗುತ್ತಿಗೆದಾರರ ಅಲಭ್ಯತೆಯಿಂದ ಕಾಮಗಾರಿ ನಡೆಸಲು ಪಾಲಿಕೆ ವಿಳಂಬ ಮಾಡಿತ್ತು. ಇದೀಗ ವೈಟ್ ಟಾಪಿಂಗ್ ಕಾಮಗಾರಿಯನ್ನು ಬಿಬಿಎಂಪಿ ವಿಂಗಡಿಸಿ ಐದು ಗುತ್ತಿಗೆ ಕಂಪೆನಿಗಳಿಗೆ ಹಂಚಿ, ಕಾಮಗಾರಿ ನಡೆಸಲು ಮುಂದಾಗಿದೆ. ಈ ಪೈಕಿ 800 ಕೋಟಿ ರೂಪಾಯಿ ಕಾಮಗಾರಿಯನ್ನ ಬಿಬಿಎಂಪಿಯ ಯೋಜನಾ ವಿಭಾಗದ ಉಸ್ತುವಾರಿಯಲ್ಲಿ ನಡೆದರೆ, ಉಳಿದಂತೆ 900 ಕೋಟಿ ರೂಪಾಯಿ ಮೊತ್ತದ ಕಾಮಗಾರಿ ರಸ್ತೆ ಹಾಗೂ ಮೂಲಭೂತ ಸೌಕರ್ಯ ವಿಭಾಗದಿಂದ ನಡೆಸಲಿದೆ.

ಸದ್ಯ ಬೆಂಗಳೂರಿನ ರಸ್ತೆಗಳಲ್ಲಿನ ಗುಂಡಿ ಕಂಟಕಕ್ಕೂ ವೈಟ್ ಟಾಪಿಂಗ್​ನಿಂದ ಮುಕ್ತಿ ಸಿಗುವ ನಿರೀಕ್ಷೆಯಲ್ಲಿ ಸಿಟಿಜನ ಕಾದು ಕುಳಿತಿದ್ದಾರೆ.

ಎಲ್ಲೆಲ್ಲಿ ವೈಟ್ ಟಾಪಿಂಗ್?

  • ಟ್ಯಾನರಿ ರಸ್ತೆ, ದೊಡ್ಡಿ ಸರ್ಕಲ್ ಕಡೆಗೆ
  • ಲೋವರ್ ಅಗರಂ ರಸ್ತೆ, ಈಜೀಪುರ ಕಡೆಗೆ
  • ಎಸ್​​ಪಿ ರಸ್ತೆಯಿಂದ ಹಡ್ಸನ್ ಸರ್ಕಲ್ ವರೆಗೆ
  • ಸಿಬಿಐ ರಸ್ತೆ, ಆರ್​ಟಿ ನಗರ ಕಡೆಗೆ
  • ರೆಸಿಡೆನ್ಸಿ ರಸ್ತೆ, ರಿಚ್ಮಂಡ್ ರಸ್ತೆ ಕಡೆಗೆ
  • ಮೌರ್ಯ ಜಂಕ್ಷನ್ ನಿಂದ ಹರೆ ಕೃಷ್ಣ ಜಂಕ್ಷನ್ ವರೆಗೆ

ಇದನ್ನೂ ಓದಿ: ಡೆಂಗ್ಯೂ ಹೆಚ್ಚಳ ಪರಿಣಾಮ; ಬೆಂಗಳೂರಿನಲ್ಲಿ ಪ್ಲೇಟ್​​ಲೆಟ್​​ಗೆ ಹೆಚ್ಚಿದ ಬೇಡಿಕೆ

ಒಟ್ಟಿನಲ್ಲಿ ಗುಂಡಿ ಗಂಡಾಂತರಕ್ಕೆ ಪರಿಹಾರ ಕಂಡುಹಿಡಿಯಲು ಸುಸ್ತಾಗಿದ್ದ ಪಾಲಿಕೆ, ಇದೀಗ ರಾಜಧಾನಿಯ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡಲು ಕೊನೆಗೂ ಸಿದ್ಧವಾಗಿದೆ. ಶುಕ್ರವಾರದಿಂದ ಕಾಮಗಾರಿಗಳಿಗೆ ಚಾಲನೆ ನೀಡಲು ಪಾಲಿಕೆ ಸಿದ್ಧತೆ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ