AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪ್ರಕಟ: ಮತದಾರರ ಸಂಖ್ಯೆ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಬಿಬಿಎಂಪಿ ಪ್ರಕಟ ಮಾಡಿದ್ದು, ಮತದಾರರ ಸಂಖ್ಯೆ ಎಷ್ಟು ಹೆಚ್ಚಾಗಿದೆ? ಎಷ್ಟು ಡಿಲೀಟ್ ಆಗಿವೆ? ಎನ್ನುವ ಮಾಹಿತಿಯನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೀಡಿದ್ದಾರೆ.

ಬೆಂಗಳೂರಿನ 25 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪ್ರಕಟ: ಮತದಾರರ ಸಂಖ್ಯೆ ಎಷ್ಟು? ಇಲ್ಲಿದೆ ಮಾಹಿತಿ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Jan 05, 2023 | 7:18 PM

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ 25 ವಿಧಾನಸಭೆ ಕ್ಷೇತ್ರಗಳ ಮತದಾರರ ಪಟ್ಟಿ ಇಂದು(ಜನವರಿ 05) ಪಕಟವಾಗಿದೆ. ಇನ್ನು ಮೂರು ಕ್ಷೇತ್ರಗಳಾದ ಮಹಾದೇವಪುರ, ಚಿಕ್ಕಪೇಟೆ, ಶಿವಾಜಿನಗರ ಕ್ಷೇತ್ರದ ಮತದಾರರ ಪಟ್ಟಿಯನ್ನು ಮುಂದಿನ 10‌ ದಿನಗಳ ಅಂದರೆ ಜನವರಿ 15 ರಂದು ಬಿಡುಗಡೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವೋಟರ್ ಐಡಿ ಅಕ್ರಮ : ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಹೆಸರು ಡಿಲೀಟ್​, ಪಟ್ಟಿಯಲ್ಲಿ ಸತ್ತವರು ಜೀವಂತ

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ತುಷಾರ್ ಗಿರಿನಾಥ್, ಈ ಹಿಂದೆ 25 ಕ್ಷೇತ್ರ ವ್ಯಾಪ್ತಿಯಲ್ಲಿ 81,48,998 ಮತದಾರರು ಇದ್ದರು. ಈಗ 25 ಕ್ಷೇತ್ರದ ಮತದಾರರ ಸಂಖ್ಯೆ 82,29,375ಕ್ಕೆ ಏರಿಕೆಯಾಗಿದೆ. ಪುರುಷ ಮತದಾರರು-42,65,140, ಮಹಿಳಾ ಮತದಾರರು-39,62,712 ಹಾಗೂ 1,523 ತೃತೀಯಲಿಂಗ ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು.

ಈ ಬಾರಿ ಹೊಸದಾಗಿ 1,02,460 ಮತದಾರರು ಸೇರ್ಪಡೆಯಾಗಿದ್ದು,. ಮತದಾರರ ಪಟ್ಟಿಯಿಂದ 22,244 ಜನರ ಹೆಸರು ಡಿಲೀಟ್​​ ಆಗಿದೆ. 75 ಸಾವಿರಕ್ಕೂ ಹೆಚ್ಚು ಮತದಾರರ ದಾಖಲಾತಿ ಸರಿಯಾಗಿ ಇರಲಿಲ್ಲ. ಆ ಮತದಾರರ ಹೆಸರನ್ನು ಬಿಎಲ್ಓಗೆ ಕಳುಹಿಸಿ ಪರಿಶೀಲಿಸಲಾಗಿದ್ದು,ಈ ವೇಳೆ 65 ಸಾವಿರ ಮತದಾರರು ದಾಖಲೆ ನೀಡಿದ್ದಾರೆ. ಇನ್ನು ಯುವ ಮತದಾರರು ಮಾರ್ಚ್ ವರೆಗೂ ಓಟರ್ ಲಿಸ್ಟ್ ಗೆ ಸೇರಿಸಲು ಅವಕಾಶ ಇದೆ ಎಂದು ಹೇಳಿದರು.

ಮಹಾದೇವಪುರ, ಚಿಕ್ಕಪೇಟೆ, ಶಿವಾಜಿನಗರ ಈ 3 ಕ್ಷೇತ್ರದಲ್ಲಿ ಎಲೆಕ್ಷನ್ ಕಮಿಷನ್ ಸೂಚನೆ ಮೇರೆಗೆ ಪರಿಶೀಲನೆ ಆಗುತ್ತಿದೆ. ಇದಕ್ಕಾಗಿ ಹೆಚ್ಚುವರಿ ಸಮಯಾವಕಾಶ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಮತದಾರರ ಪಟ್ಟಿ 10‌ ದಿನಗಳ ಬಳಿಕ ಅಂದರೆ ಜನವರಿ 15 ರಂದು ಬಿಡುಗಡೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:12 pm, Thu, 5 January 23

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್