Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ BBMP; ಎಲ್ಲೆಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ?

ಬಿಬಿಎಂಪಿ ಗುರುತು ಮಾಡಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಒಂದು ವಲಯದಲ್ಲಿ 2 ಅಥವಾ 3 ಮೈದಾನದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಒಂದು ಮೈದಾನದಲ್ಲಿ 10 ಮಳಿಗೆಗಳನ್ನು ತೆರೆಯಬೇಕು. ಜೊತೆಗೆ ಪ್ರತಿ ಮಳಿಗೆಯ ನಡುವೆ ಮೂರರಿಂದ 4 ಅಡಿ ಅಂತರವಿದ್ದು, ಬೆಂಕಿ ನಂದಿಸುವ ಉಪಕರಣ ಕೂಡ ಕಡ್ಡಾಯವಾಗಿ ಇರಬೇಕು.

ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ BBMP; ಎಲ್ಲೆಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ?
ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ನೀಡಿದ ಬಿಬಿಎಂಪಿ
Follow us
Poornima Agali Nagaraj
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 02, 2023 | 4:37 PM

ಬೆಂಗಳೂರು, ನ.02: ಅತ್ತಿಬೆಲೆ ಪಟಾಕಿ ದುರಂತ ಬಳಿಕ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದ್ದು, ದೀಪಾವಳಿ(Diwali) ಹಬ್ಬಕ್ಕೆ ಬಿಬಿಎಂಪಿ(BBMP) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೌದು, ಇತ್ತೀಚೆಗಷ್ಟೇ ಪಟಾಕಿ ಗೋಡೌನ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರು. ಈ ಹಿನ್ನಲೆ ಇದೀಗ ಧಾರ್ಮಿಕ ಮೈದಾನಗಳು, ಶಾಲಾ ಕಾಲೇಜಿನ ಮೈದಾನಗಳು, ಕೇಂದ್ರ-ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಡುವ ಕಾರ್ಖಾನೆ, ರಕ್ಷಣಾ ಇಲಾಖೆ ಮೈದಾನಗಳು ಸೇರಿದಂತೆ ಖಾಸಗಿ ಮೈದಾನಗಳಲ್ಲೂ ಪಟಾಕಿ ಮಾರಾಟವನ್ನು ನಿರ್ಬಂಧಿಸಲಾಗಿದೆ.

BBMP ಗುರುತಿಸಿದ ಮೈದಾನದಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ

ಹೌದು, ಬಿಬಿಎಂಪಿ ಗುರುತು ಮಾಡಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಒಂದು ವಲಯದಲ್ಲಿ 2 ಅಥವಾ 3 ಮೈದಾನದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಒಂದು ಮೈದಾನದಲ್ಲಿ 10 ಮಳಿಗೆಗಳನ್ನು ತೆರೆಯಬೇಕು. ಜೊತೆಗೆ ಪ್ರತಿ ಮಳಿಗೆಯ ನಡುವೆ ಮೂರರಿಂದ 4 ಅಡಿ ಅಂತರವಿದ್ದು, ಬೆಂಕಿ ನಂದಿಸುವ ಉಪಕರಣ ಕೂಡ ಕಡ್ಡಾಯವಾಗಿ ಇರಬೇಕು. ಪಟಾಕಿ ಮಾರುವವರು ಮಳಿಗೆಯ ಪರವಾನಗಿ ಪ್ರದರ್ಶಿಸಬೇಕು. ಯಾರಾದರೂ ಅವಧಿ ಮುಗಿದ ಪಟಾಕಿ ಮಾರಾಟ ಮಾಡಿದರೆ ದಂಡ ವಿಧಿಸುವಂತೆ ಸೂಚಿಸಿದೆ.

ಇದನ್ನೂ ಓದಿ:ರಸ್ತೆ ಗುಂಡಿ ಮುಚ್ಚಲು ಪ್ರತಿ ವಾರ್ಡ್​ಗೆ 15 ಲಕ್ಷ ರೂ ಬಿಡುಗಡೆ ಮಾಡಿದ ಬಿಬಿಎಂಪಿ, ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆ ಹಂಚಿಕೆ

70 ಮೈದಾನನದಲ್ಲಿ 426 ಪಟಾಕಿ ಮಳಿಗೆಗೆ ಒಪ್ಪಿಗೆ

ಇನ್ನು ದೀಪಾವಳಿ ಹಬ್ಬಕ್ಕೆ ಕೌಂಡ್ ಡೌನ್ ಆರಂಭವಾಗಿದೆ. ಪಟಾಕಿ ಮಾರಾಟ ವಿಚಾರಕ್ಕೆ ಕೆಲ ಪಾಲಿಕೆಯಿಂದ ಮುನ್ನೆಚ್ಚರಿಕೆಯಾಗಿ 70 ಮೈದಾನನದಲ್ಲಿ 426 ಪಟಾಕಿ ಮಳಿಗೆಗೆ ಒಪ್ಪಿಗೆ ದೊರೆತಿದೆ. ಆಯಾ ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರಿಂದ ಸುರಕ್ಷತೆ ಪರಿಶೀಲನೆ ನಡೆಸಿ ಮಳಿಗೆ ಸ್ಥಾಪನೆಗೆ ಅವಕಾಶ ನೀಡಲಾಗಿದೆ. ಕಳೆದ ವರ್ಷ 501 ಪಟಾಕಿ ಮಾರಾಟ ಮಳಿಗೆ ಸ್ಥಾಪನೆ ಮಾಡಲಾಗಿತ್ತು. ಆದರೆ, ಈ ಬಾರಿ‌ ಮಾರಾಟ ಮಳಿಗೆಯನ್ನು ಕಡಿಮೆ ಮಾಡಲಾಗಿದೆ.

ಪಟಾಕಿ ಮಳಿಗೆಗೆ ಎಲ್ಲಿ ಒಪ್ಪಿಗೆ ದೊರೆತಿದೆ

  • ದಕ್ಷಿಣ ವಲಯದ 9 ಮೈದಾನದಲ್ಲಿ 87 ಮಳಿಗೆ
  • ಮಹದೇವಪುರವಲಯದ 13 ಮೈದಾನ 50 ಮಳಿಗೆ
  • ಬೊಮ್ಮನಹಳ್ಳಿ ವಲಯದ 3 ಮೈದಾನ ಆರು‌ಮಳಿಗೆ
  • ಪಶ್ಚಿಮ ವಲಯದ ನಾಲ್ಕು ಮೈದಾನ 63 ಮಳಿಗೆ
  • ಪೂರ್ವ ವಲಯದ 23 ಮೈದಾನ101 ಮಳಿಗೆ
  • ದಾಸರಹಳ್ಳಿ ವಲಯದ ಎರಡು ಮೈದಾನ 18 ಮಳಿಗೆ

ಇನ್ನು ಇದರ ಜೊತೆಗೆ ಆರ್ ಆರ್ ನಗರ ವಲಯದಲ್ಲಿ 5 ಮೈದಾನವನ್ನು ಗುರುತಿಸಿ 62 ತಾತ್ಕಾಲಿಕ ಮಳಿಗೆಗೆ ಅವಕಾಶ ನೀಡಲಾಗಿದೆ. ಸದ್ಯ ಸುರಕ್ಷತೆ ಬಗ್ಗೆ ಪರಿಶೀಲನೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ