ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ BBMP; ಎಲ್ಲೆಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ?

ಬಿಬಿಎಂಪಿ ಗುರುತು ಮಾಡಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಒಂದು ವಲಯದಲ್ಲಿ 2 ಅಥವಾ 3 ಮೈದಾನದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಒಂದು ಮೈದಾನದಲ್ಲಿ 10 ಮಳಿಗೆಗಳನ್ನು ತೆರೆಯಬೇಕು. ಜೊತೆಗೆ ಪ್ರತಿ ಮಳಿಗೆಯ ನಡುವೆ ಮೂರರಿಂದ 4 ಅಡಿ ಅಂತರವಿದ್ದು, ಬೆಂಕಿ ನಂದಿಸುವ ಉಪಕರಣ ಕೂಡ ಕಡ್ಡಾಯವಾಗಿ ಇರಬೇಕು.

ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ BBMP; ಎಲ್ಲೆಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ?
ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ನೀಡಿದ ಬಿಬಿಎಂಪಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 02, 2023 | 4:37 PM

ಬೆಂಗಳೂರು, ನ.02: ಅತ್ತಿಬೆಲೆ ಪಟಾಕಿ ದುರಂತ ಬಳಿಕ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದ್ದು, ದೀಪಾವಳಿ(Diwali) ಹಬ್ಬಕ್ಕೆ ಬಿಬಿಎಂಪಿ(BBMP) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೌದು, ಇತ್ತೀಚೆಗಷ್ಟೇ ಪಟಾಕಿ ಗೋಡೌನ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರು. ಈ ಹಿನ್ನಲೆ ಇದೀಗ ಧಾರ್ಮಿಕ ಮೈದಾನಗಳು, ಶಾಲಾ ಕಾಲೇಜಿನ ಮೈದಾನಗಳು, ಕೇಂದ್ರ-ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಡುವ ಕಾರ್ಖಾನೆ, ರಕ್ಷಣಾ ಇಲಾಖೆ ಮೈದಾನಗಳು ಸೇರಿದಂತೆ ಖಾಸಗಿ ಮೈದಾನಗಳಲ್ಲೂ ಪಟಾಕಿ ಮಾರಾಟವನ್ನು ನಿರ್ಬಂಧಿಸಲಾಗಿದೆ.

BBMP ಗುರುತಿಸಿದ ಮೈದಾನದಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ

ಹೌದು, ಬಿಬಿಎಂಪಿ ಗುರುತು ಮಾಡಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಒಂದು ವಲಯದಲ್ಲಿ 2 ಅಥವಾ 3 ಮೈದಾನದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಒಂದು ಮೈದಾನದಲ್ಲಿ 10 ಮಳಿಗೆಗಳನ್ನು ತೆರೆಯಬೇಕು. ಜೊತೆಗೆ ಪ್ರತಿ ಮಳಿಗೆಯ ನಡುವೆ ಮೂರರಿಂದ 4 ಅಡಿ ಅಂತರವಿದ್ದು, ಬೆಂಕಿ ನಂದಿಸುವ ಉಪಕರಣ ಕೂಡ ಕಡ್ಡಾಯವಾಗಿ ಇರಬೇಕು. ಪಟಾಕಿ ಮಾರುವವರು ಮಳಿಗೆಯ ಪರವಾನಗಿ ಪ್ರದರ್ಶಿಸಬೇಕು. ಯಾರಾದರೂ ಅವಧಿ ಮುಗಿದ ಪಟಾಕಿ ಮಾರಾಟ ಮಾಡಿದರೆ ದಂಡ ವಿಧಿಸುವಂತೆ ಸೂಚಿಸಿದೆ.

ಇದನ್ನೂ ಓದಿ:ರಸ್ತೆ ಗುಂಡಿ ಮುಚ್ಚಲು ಪ್ರತಿ ವಾರ್ಡ್​ಗೆ 15 ಲಕ್ಷ ರೂ ಬಿಡುಗಡೆ ಮಾಡಿದ ಬಿಬಿಎಂಪಿ, ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆ ಹಂಚಿಕೆ

70 ಮೈದಾನನದಲ್ಲಿ 426 ಪಟಾಕಿ ಮಳಿಗೆಗೆ ಒಪ್ಪಿಗೆ

ಇನ್ನು ದೀಪಾವಳಿ ಹಬ್ಬಕ್ಕೆ ಕೌಂಡ್ ಡೌನ್ ಆರಂಭವಾಗಿದೆ. ಪಟಾಕಿ ಮಾರಾಟ ವಿಚಾರಕ್ಕೆ ಕೆಲ ಪಾಲಿಕೆಯಿಂದ ಮುನ್ನೆಚ್ಚರಿಕೆಯಾಗಿ 70 ಮೈದಾನನದಲ್ಲಿ 426 ಪಟಾಕಿ ಮಳಿಗೆಗೆ ಒಪ್ಪಿಗೆ ದೊರೆತಿದೆ. ಆಯಾ ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರಿಂದ ಸುರಕ್ಷತೆ ಪರಿಶೀಲನೆ ನಡೆಸಿ ಮಳಿಗೆ ಸ್ಥಾಪನೆಗೆ ಅವಕಾಶ ನೀಡಲಾಗಿದೆ. ಕಳೆದ ವರ್ಷ 501 ಪಟಾಕಿ ಮಾರಾಟ ಮಳಿಗೆ ಸ್ಥಾಪನೆ ಮಾಡಲಾಗಿತ್ತು. ಆದರೆ, ಈ ಬಾರಿ‌ ಮಾರಾಟ ಮಳಿಗೆಯನ್ನು ಕಡಿಮೆ ಮಾಡಲಾಗಿದೆ.

ಪಟಾಕಿ ಮಳಿಗೆಗೆ ಎಲ್ಲಿ ಒಪ್ಪಿಗೆ ದೊರೆತಿದೆ

  • ದಕ್ಷಿಣ ವಲಯದ 9 ಮೈದಾನದಲ್ಲಿ 87 ಮಳಿಗೆ
  • ಮಹದೇವಪುರವಲಯದ 13 ಮೈದಾನ 50 ಮಳಿಗೆ
  • ಬೊಮ್ಮನಹಳ್ಳಿ ವಲಯದ 3 ಮೈದಾನ ಆರು‌ಮಳಿಗೆ
  • ಪಶ್ಚಿಮ ವಲಯದ ನಾಲ್ಕು ಮೈದಾನ 63 ಮಳಿಗೆ
  • ಪೂರ್ವ ವಲಯದ 23 ಮೈದಾನ101 ಮಳಿಗೆ
  • ದಾಸರಹಳ್ಳಿ ವಲಯದ ಎರಡು ಮೈದಾನ 18 ಮಳಿಗೆ

ಇನ್ನು ಇದರ ಜೊತೆಗೆ ಆರ್ ಆರ್ ನಗರ ವಲಯದಲ್ಲಿ 5 ಮೈದಾನವನ್ನು ಗುರುತಿಸಿ 62 ತಾತ್ಕಾಲಿಕ ಮಳಿಗೆಗೆ ಅವಕಾಶ ನೀಡಲಾಗಿದೆ. ಸದ್ಯ ಸುರಕ್ಷತೆ ಬಗ್ಗೆ ಪರಿಶೀಲನೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ