AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ BBMP; ಎಲ್ಲೆಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ?

ಬಿಬಿಎಂಪಿ ಗುರುತು ಮಾಡಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಒಂದು ವಲಯದಲ್ಲಿ 2 ಅಥವಾ 3 ಮೈದಾನದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಒಂದು ಮೈದಾನದಲ್ಲಿ 10 ಮಳಿಗೆಗಳನ್ನು ತೆರೆಯಬೇಕು. ಜೊತೆಗೆ ಪ್ರತಿ ಮಳಿಗೆಯ ನಡುವೆ ಮೂರರಿಂದ 4 ಅಡಿ ಅಂತರವಿದ್ದು, ಬೆಂಕಿ ನಂದಿಸುವ ಉಪಕರಣ ಕೂಡ ಕಡ್ಡಾಯವಾಗಿ ಇರಬೇಕು.

ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ BBMP; ಎಲ್ಲೆಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ?
ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ನೀಡಿದ ಬಿಬಿಎಂಪಿ
Poornima Agali Nagaraj
| Edited By: |

Updated on: Nov 02, 2023 | 4:37 PM

Share

ಬೆಂಗಳೂರು, ನ.02: ಅತ್ತಿಬೆಲೆ ಪಟಾಕಿ ದುರಂತ ಬಳಿಕ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದ್ದು, ದೀಪಾವಳಿ(Diwali) ಹಬ್ಬಕ್ಕೆ ಬಿಬಿಎಂಪಿ(BBMP) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೌದು, ಇತ್ತೀಚೆಗಷ್ಟೇ ಪಟಾಕಿ ಗೋಡೌನ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರು. ಈ ಹಿನ್ನಲೆ ಇದೀಗ ಧಾರ್ಮಿಕ ಮೈದಾನಗಳು, ಶಾಲಾ ಕಾಲೇಜಿನ ಮೈದಾನಗಳು, ಕೇಂದ್ರ-ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಡುವ ಕಾರ್ಖಾನೆ, ರಕ್ಷಣಾ ಇಲಾಖೆ ಮೈದಾನಗಳು ಸೇರಿದಂತೆ ಖಾಸಗಿ ಮೈದಾನಗಳಲ್ಲೂ ಪಟಾಕಿ ಮಾರಾಟವನ್ನು ನಿರ್ಬಂಧಿಸಲಾಗಿದೆ.

BBMP ಗುರುತಿಸಿದ ಮೈದಾನದಲ್ಲಿ ಪಟಾಕಿ ಮಾರಾಟಕ್ಕೆ ಅವಕಾಶ

ಹೌದು, ಬಿಬಿಎಂಪಿ ಗುರುತು ಮಾಡಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಒಂದು ವಲಯದಲ್ಲಿ 2 ಅಥವಾ 3 ಮೈದಾನದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಒಂದು ಮೈದಾನದಲ್ಲಿ 10 ಮಳಿಗೆಗಳನ್ನು ತೆರೆಯಬೇಕು. ಜೊತೆಗೆ ಪ್ರತಿ ಮಳಿಗೆಯ ನಡುವೆ ಮೂರರಿಂದ 4 ಅಡಿ ಅಂತರವಿದ್ದು, ಬೆಂಕಿ ನಂದಿಸುವ ಉಪಕರಣ ಕೂಡ ಕಡ್ಡಾಯವಾಗಿ ಇರಬೇಕು. ಪಟಾಕಿ ಮಾರುವವರು ಮಳಿಗೆಯ ಪರವಾನಗಿ ಪ್ರದರ್ಶಿಸಬೇಕು. ಯಾರಾದರೂ ಅವಧಿ ಮುಗಿದ ಪಟಾಕಿ ಮಾರಾಟ ಮಾಡಿದರೆ ದಂಡ ವಿಧಿಸುವಂತೆ ಸೂಚಿಸಿದೆ.

ಇದನ್ನೂ ಓದಿ:ರಸ್ತೆ ಗುಂಡಿ ಮುಚ್ಚಲು ಪ್ರತಿ ವಾರ್ಡ್​ಗೆ 15 ಲಕ್ಷ ರೂ ಬಿಡುಗಡೆ ಮಾಡಿದ ಬಿಬಿಎಂಪಿ, ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆ ಹಂಚಿಕೆ

70 ಮೈದಾನನದಲ್ಲಿ 426 ಪಟಾಕಿ ಮಳಿಗೆಗೆ ಒಪ್ಪಿಗೆ

ಇನ್ನು ದೀಪಾವಳಿ ಹಬ್ಬಕ್ಕೆ ಕೌಂಡ್ ಡೌನ್ ಆರಂಭವಾಗಿದೆ. ಪಟಾಕಿ ಮಾರಾಟ ವಿಚಾರಕ್ಕೆ ಕೆಲ ಪಾಲಿಕೆಯಿಂದ ಮುನ್ನೆಚ್ಚರಿಕೆಯಾಗಿ 70 ಮೈದಾನನದಲ್ಲಿ 426 ಪಟಾಕಿ ಮಳಿಗೆಗೆ ಒಪ್ಪಿಗೆ ದೊರೆತಿದೆ. ಆಯಾ ವಲಯ ಆಯುಕ್ತರು ಮತ್ತು ಜಂಟಿ ಆಯುಕ್ತರಿಂದ ಸುರಕ್ಷತೆ ಪರಿಶೀಲನೆ ನಡೆಸಿ ಮಳಿಗೆ ಸ್ಥಾಪನೆಗೆ ಅವಕಾಶ ನೀಡಲಾಗಿದೆ. ಕಳೆದ ವರ್ಷ 501 ಪಟಾಕಿ ಮಾರಾಟ ಮಳಿಗೆ ಸ್ಥಾಪನೆ ಮಾಡಲಾಗಿತ್ತು. ಆದರೆ, ಈ ಬಾರಿ‌ ಮಾರಾಟ ಮಳಿಗೆಯನ್ನು ಕಡಿಮೆ ಮಾಡಲಾಗಿದೆ.

ಪಟಾಕಿ ಮಳಿಗೆಗೆ ಎಲ್ಲಿ ಒಪ್ಪಿಗೆ ದೊರೆತಿದೆ

  • ದಕ್ಷಿಣ ವಲಯದ 9 ಮೈದಾನದಲ್ಲಿ 87 ಮಳಿಗೆ
  • ಮಹದೇವಪುರವಲಯದ 13 ಮೈದಾನ 50 ಮಳಿಗೆ
  • ಬೊಮ್ಮನಹಳ್ಳಿ ವಲಯದ 3 ಮೈದಾನ ಆರು‌ಮಳಿಗೆ
  • ಪಶ್ಚಿಮ ವಲಯದ ನಾಲ್ಕು ಮೈದಾನ 63 ಮಳಿಗೆ
  • ಪೂರ್ವ ವಲಯದ 23 ಮೈದಾನ101 ಮಳಿಗೆ
  • ದಾಸರಹಳ್ಳಿ ವಲಯದ ಎರಡು ಮೈದಾನ 18 ಮಳಿಗೆ

ಇನ್ನು ಇದರ ಜೊತೆಗೆ ಆರ್ ಆರ್ ನಗರ ವಲಯದಲ್ಲಿ 5 ಮೈದಾನವನ್ನು ಗುರುತಿಸಿ 62 ತಾತ್ಕಾಲಿಕ ಮಳಿಗೆಗೆ ಅವಕಾಶ ನೀಡಲಾಗಿದೆ. ಸದ್ಯ ಸುರಕ್ಷತೆ ಬಗ್ಗೆ ಪರಿಶೀಲನೆ ಮುಂದುವರೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?