AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ನಾಮಫಲಕ ಹಾಕದವರಿಗೆ ಬಿಸಿ ಮುಟ್ಟಿಸಿದ ಬಿಬಿಎಂಪಿ: ನೋಟಿಸ್​ ನೀಡಿ ಲೈಸೆನ್ಸ್​ ರದ್ದು

ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಇರಬೇಕು ಅಂತ ನೀಡಿದ್ದ 2 ತಿಂಗಳ ಗಡುವು ಮುಗಿದು ಹೋಗಿದೆ. ಆದರೆ ಕನ್ನಡ ನಾಮಫಲಕ ಹಾಕದವರಿಗೆ ಬಿಬಿಎಂಪಿ ಶಾಕ್​ ನೀಡಿದೆ. ನೋಟಿಸ್ ನೀಡಿ ಇಂದು ಟ್ರೇಡ್ ಲೈಸೆನ್ಸ್ ರದ್ದು ಮಾಡಿದೆ. ಕಾಲಾವಕಾಶ ನೀಡಿದರೂ ಕ್ಯಾರೆ ಎನ್ನದ ಅಂಗಡಿ ಮಾಲೀಕರಿಗೆ ಪಾಲಿಕೆ ಬಿಸಿ ಮುಟ್ಟಿಸಿದೆ.

ಕನ್ನಡ ನಾಮಫಲಕ ಹಾಕದವರಿಗೆ ಬಿಸಿ ಮುಟ್ಟಿಸಿದ ಬಿಬಿಎಂಪಿ: ನೋಟಿಸ್​ ನೀಡಿ ಲೈಸೆನ್ಸ್​ ರದ್ದು
ಬಿಬಿಎಂಪಿ
ಗಂಗಾಧರ​ ಬ. ಸಾಬೋಜಿ
|

Updated on: Mar 14, 2024 | 6:48 PM

Share

ಬೆಂಗಳೂರು, ಮಾರ್ಚ್​​ 14: ಕನ್ನಡ ನಾಮಫಲಕ (Kannada nameplate) ಹಾಕದವರ ಟ್ರೇಡ್ ಲೈಸೆನ್ಸ್​ ರದ್ದು ಮಾಡುವ ಮೂಲಕ ಕನ್ನಡ ನಾಮಫಲಕ ಹಾಕದವರಿಗೆ ಬಿಬಿಎಂಪಿ ಶಾಕ್​ ನೀಡಿದೆ. ನೋಟಿಸ್ ನೀಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಂದು ಟ್ರೇಡ್ ಲೈಸೆನ್ಸ್ ರದ್ದು ಮಾಡಿದೆ. ಮಾಲ್ ಆಫ್ ಏಷ್ಯಾದ ಕೆಲವು ಮಳಿಗೆಗಳಿಗೆ ಬೀಗ ಹಾಕಲಾಗಿದೆ. ಕಾಲಾವಕಾಶ ನೀಡಿದರೂ ಉದ್ದಿಮೆದಾರರು ಕ್ಯಾರೆ ಎನ್ನದ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರಿಗೆ ಪಾಲಿಕೆ ಬಿಸಿ ಮುಟ್ಟಿಸಿದೆ.

ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಇರಬೇಕು ಅಂತ ನೀಡಿದ್ದ 2 ತಿಂಗಳ ಗಡುವು ಮುಗಿದು ಹೋಗಿದೆ. ಶೇ.60ರಷ್ಟು ಕನ್ನಡರಷ್ಟು ಕನ್ನಡವಿರದ ನಾಮಫಲಕಗಳನ್ನ ಹಾಕಿದವರ ವಿರುದ್ಧ ಇತ್ತೀಚೆಗೆ ರಾಜ್ಯಾದ್ಯಂತ ಎಲ್ಲ ನಗರಗಳಲ್ಲೂ ಕ್ರಮಕೈಗೊಳ್ಳಬೇಕಿತ್ತು. ಇದಕ್ಕಾಗಿ ಬೆಂಗಳೂರು ಸೇರಿ ಎಲ್ಲ ನಗರಗಳಲ್ಲೂ ಅಧಿಕಾರಿಗಳು ಸಿದ್ಧತೆ ನಡೆಸಿದ್ದರು. ಅಲ್ಲದೇ ಕನ್ನಡ ಪರ ಸಂಘಟನೆಗಳು ಪ್ರತಿಭಟಿಸಲು ಸಿದ್ಧತೆ ನಡೆಸಿದ್ದವು. ಆದರೆ, ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಮತ್ತೆ 2 ವಾರಗಳ ಗಡುವು ನೀಡಿ ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: ಕೊನೆಗೂ ಕನ್ನಡ ನಾಮಫಲಕ ಅಳವಡಿಕೆಗೆ ಸೈ ಎಂದ ಬೆಂಗಳೂರಿನ ಅಂಗಡಿ, ವಾಣಿಜ್ಯ ಮಳಿಗೆಗಳು

ಈ ಬಗ್ಗೆ ಕನ್ನಡ ಚಳವಳಿ ವಾಟಾಳ್‌ ನಾಗರಾಜ್‌ ಅನ್ಯ ಭಾಷೆಯ ನಾಮಫಲಕಗಳನ್ನ ಕಿತ್ತು ಹಾಕುವುದಾಗಿ ಗುಡುಗಿದರೆ, ಕರವೇ ಅಧ್ಯಕ್ಷ ನಾರಾಯಣಗೌಡರು ಮಾರ್ಚ್‌ 5ರಂದು ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದರು. ಕನ್ನಡ ನಾಮಫಲಕ ಹಾಕದ ಅಂಗಡಿ-ಮುಂಗಟ್ಟುಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸುತ್ತೋಲೆ ಹೊರಡಿಸಿದ್ದರು.

ಕನ್ನಡ ನಾಮಫಲಕ ಇಲ್ಲದಿದ್ರೆ ಲೈಸನ್ಸ್ ರದ್ದು

ಕನ್ನಡ ನಾಮಫಲಕ ಅಳವಡಿಸದವರಿಗೆ ಬಿಬಿಎಂಪಿ ಈ ಹಿಂದೆ ಶಾಕ್ ನೀಡಿತ್ತು. ಶೇ. 60ರಷ್ಟು ಕನ್ನಡ ನಾಮಫಲಕ ಅಳವಡಿಸದಿದ್ದರೆ ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿತ್ತು. ಈ ಸಂಬಂಧ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದರು. ಅಂಗಡಿ ಲೈಸೆನ್ಸ್ ರದ್ದು ಮಾಡಿ ಬೀಗ ಹಾಕುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ: ಫೆ. 28ರೊಳಗೆ ಎಲ್ಲಾ ನಾಮಫಲಕ ಕನ್ನಡದಲ್ಲಿರಬೇಕು, ಇಲ್ಲದಿದ್ರೆ ಕ್ರಮ: ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ

ಶೇ.60ರಷ್ಟು ಕನ್ನಡ ಬರಹವುಳ್ಳ ನಾಮಫಲಕ ಅಳವಡಿಸದ ಅಂಗಡಿ, ಮಳಿಗೆಗಳಿಗೆ ಬೆಳಗಾವಿ ಮಹಾನಗರ ಪಾಲಿಕೆ ನೋಟಿಸ್ ಜಾರಿ ಮಾಡಿದೆ. ಖಡೇಬಜಾರ್, ರವಿವಾರಪೇಟೆಯಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಪಾಲಿಕೆ ನೋಟಿಸ್ ನೀಡಿದೆ. ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಪಾಲಿಕೆ ಸಿಬ್ಬಂದಿ ಸೂಚಿಸಿದ್ದಾರೆ.

ವರದಿ: ಶಾಂತಮೂರ್ತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!