AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Reservation: ಬಿಬಿಎಂಪಿ ವಾರ್ಡ್​ವಾರು ಮೀಸಲಾತಿ ಪಟ್ಟಿ ಪ್ರಕಟ, ಕಾಂಗ್ರೆಸ್​ಗೆ ಆಘಾತ

ಹಲವು ವಾರ್ಡ್​ಗಳಲ್ಲಿ ಮೀಸಲಾತಿ ಬದಲಾವಣೆಯಾಗಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ನಾಯಕರಿಗೆ ಆಘಾತ ಎದುರಾಗಿದೆ.

BBMP Reservation: ಬಿಬಿಎಂಪಿ ವಾರ್ಡ್​ವಾರು ಮೀಸಲಾತಿ ಪಟ್ಟಿ ಪ್ರಕಟ, ಕಾಂಗ್ರೆಸ್​ಗೆ ಆಘಾತ
ಕಾಂಗ್ರೆಸ್, ಬಿಜೆಪಿ ಪಕ್ಷದ ಚಿಹ್ನೆಗಳು
TV9 Web
| Edited By: |

Updated on: Aug 04, 2022 | 2:47 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ವಾರ್ಡ್​ವಾರು ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಹಲವು ವಾರ್ಡ್​ಗಳಲ್ಲಿ ಮೀಸಲಾತಿ ಬದಲಾವಣೆಯಾಗಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ನಾಯಕರಿಗೆ ಆಘಾತ ಎದುರಾಗಿದೆ. ಹಲವು ಪ್ರಮುಖ ಕಾಂಗ್ರೆಸ್​​ ನಾಯಕರ ವಾರ್ಡ್​ಗಳಿಗೆ ಮಹಿಳಾ ಮೀಸಲಾತಿ ಬಂದಿದೆ.

ಬಿಬಿಎಂಪಿಯಲ್ಲಿ ಆಡಳಿತ ಪಕ್ಷದ ಮಾಜಿ ನಾಯಕರಾಗಿದ್ದ ಶಿವರಾಜ್ ಅವರ ವಾರ್ಡ್​ಗೆ ಎಸ್​ಸಿ ಮೀಸಲಾತಿ ಬಂದಿದೆ. ಈ ಹಿಂದೆ ಇಲ್ಲಿ ಬಿಸಿಎ ಮೀಸಲಾತಿ ಇತ್ತು. ಅಕ್ಕಪಕ್ಕದ ವಾರ್ಡ್​ಗಳಲ್ಲೂ ಇವರಿಗೆ ಸ್ಪರ್ಧಿಸಲು ಸಾಧ್ಯವಾಗದಂತೆ ಮಹಿಳಾ ಮೀಸಲಾತಿ ಘೋಷಿಸಲಾಗಿದೆ. ಮಾಜಿ ಮೇಯರ್ ಪದ್ಮಾವತಿ ವಾರ್ಡ್​ಗೆ ಬಿಸಿಎ ಮೀಸಲಾತಿ ಇತ್ತು. ಈ ಹಿಂದೆ ಇಲ್ಲಿ ಬಿಸಿಬಿ ಮೀಸಲಾತಿಯಿತ್ತು. ಪದ್ಮಾವತಿ ಸ್ಪರ್ಧಿಸಲು ಅವಕಾಶ ಸಿಗಬಾರದು ಎನ್ನುವ ಕಾರಣಕ್ಕೆ ಹೀಗೆ ಮೀಸಲಾತಿ ನಿಗದಿಪಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಶಂಕರಮಠ ವಾರ್ಡ್​ನಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಎಂ.ಶಿವರಾಜು ಸ್ಪರ್ಧಿಸುವ ಸಾಧ್ಯತೆಯಿತ್ತು. ಅಲ್ಲಿ ಸಾಮಾನ್ಯ ವರ್ಗಕ್ಕಿದ್ದ ಮೀಸಲಾತಿಯನ್ನು ತೆಗೆದು ಎಸ್​ಸಿಗೆ ನಿಗದಿಪಡಿಸಲಾಗಿದೆ. ಇದು ಸಚಿವ ಹಾಗೂ ಕ್ಷೇತ್ರ ಶಾಸಕ ಕೆ.ಗೋಪಾಲಯ್ಯ ಅವರ ರಾಜಕೀಯ ಚಾಣಾಕ್ಷ ನಡೆ ಎಂದೇ ಹೇಳಲಾಗುತ್ತಿದೆ.

ಹೆಬ್ಬಾಳದ ಮನೋರಾಯನಪಾಳ್ಯ ವಾರ್ಡ್​ನ ಅಬ್ದುಲ್ ವಾಜೀದ್ ಅವರಿಗೂ ಸ್ಪರ್ಧೆಗೆ ಅವಕಾಶವಿಲ್ಲದಂತಾಗಿದೆ. ಆ ವಾರ್ಡ್​ ಅನ್ನು ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲಿರಿಸಲಾಗಿದೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜಯಮಹಲ್ ವಾರ್ಡ್​ನಿಂದ ಸ್ಪರ್ಧಿಸುತ್ತಿದ್ದ ಗುಣಶೇಖರ್​ಗೆ ಸ್ಪರ್ಧಿಸುವ ಅವಕಾಶ ನಿರಾಕರಿಸಲಾಗಿದೆ. ಅವರ ವಾರ್ಡ್ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.

ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಪರಮಾಪ್ತ ಮಡಿವಾಳ ವಾರ್ಡ್​ನ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ರೆಡ್ಡಿ ವಾರ್ಡ್​ ಅನ್ನು ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಪ್ರಕಾಶ್ ನಗರ ವಾರ್ಡ್​ನಿಂದ ಸ್ಪರ್ಧಿಸುತ್ತಿದ್ದ ಮಾಜಿ ಮೇಯರ್ ಪದ್ಮಾವತಿ ವಾರ್ಡ್​ನ ಮೀಸಲಾತಿಯನ್ನು ಹಿಂದುಳಿದ ವರ್ಗಕ್ಕೆ (ಎ) ಬದಲಿಸಲಾಗಿದೆ.

ಜಯನಗರ ವಿಧಾನಸಭಾ ಕ್ಷೇತ್ರದ ಜಯನಗರ ವಾರ್ಡ್​ನ ಮತ್ತೋರ್ವ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರಿಗೆ ವಾರ್ಡ್​ ಸಿಗದಂತೆ ಮಾಡಲಾಗಿದೆ. ಭೈರಸಂದ್ರ ವಾರ್ಡ್​ನಿಂದ ಸ್ಪರ್ಧಿಸುವ ಆಸೆ ಇರಿಸಿಕೊಂಡಿದ್ದ ನಾಗರಾಜ್ ಅವರಿಗೂ ಅವಕಾಶ ಇಲ್ಲವಾಗಿದೆ. ಗುರಪ್ಪನಪಾಳ್ಯ ವಾರ್ಡ್​ನಿಂದ ಆಯ್ಕೆಯಾಗುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿ ಮಹಮದ್ ರಿಜ್ವಾನ್​ಗೂ ಈ ಬಾರಿ ಟಿಕೆಟ್ ಸಿಗುವ ಸಾಧ್ಯತೆಯೇ ಇಲ್ಲದಂತಾಗಿದೆ.

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​