AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಕನ್ನಡ ನಾಮಫಲಕ ಅಳವಡಿಕೆಗೆ ಸೈ ಎಂದ ಬೆಂಗಳೂರಿನ ಅಂಗಡಿ, ವಾಣಿಜ್ಯ ಮಳಿಗೆಗಳು

ಬೆಂಗಳೂರಿನ ಬಹುತೇಕ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಮಾಲ್​ಗಳು ಕೊನೆಗೂ ಕನ್ನಡ ನಾಮಫಲಕ ಕಾನೂನಿಗೆ ತಲೆಬಾಗಿವೆ. ನಿಯಮ ಅನುಸರಿಸದ ಕಾರಣಕ್ಕಾಗಿ ನೋಟಿಸ್ ಪಡೆದಿದ್ದ ಒಟ್ಟು ಸಂಸ್ಥೆಗಳ ಪೈಕಿ ಈವರೆಗೆ ಎಷ್ಟು ಮಂದಿ ಕನ್ನಡ ನಾಮಫಲಕ ಅಳವಡಿಸಿದ್ದಾರೆ ಎಂಬ ಮಾಹಿತಿಯನ್ನು ಬಿಬಿಎಂಪಿ ಬಹಿರಂಗಪಡಿಸಿದೆ. ಆ ವಿವರ ಇಲ್ಲಿದೆ.

ಕೊನೆಗೂ ಕನ್ನಡ ನಾಮಫಲಕ ಅಳವಡಿಕೆಗೆ ಸೈ ಎಂದ ಬೆಂಗಳೂರಿನ ಅಂಗಡಿ, ವಾಣಿಜ್ಯ ಮಳಿಗೆಗಳು
ಬಿಬಿಎಂಪಿ
ಗಣಪತಿ ಶರ್ಮಾ
|

Updated on: Mar 14, 2024 | 7:00 AM

Share

ಬೆಂಗಳೂರು, ಮಾರ್ಚ್​ 14: ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ (Kannada) ಒಳಗೊಳ್ಳುವಂತೆ ನೋಡಿಕೊಳ್ಳದ ಕಾರಣಕ್ಕೆ ನೋಟಿಸ್‌ ಪಡೆದಿರುವ ಬೆಂಗಳೂರಿನ (Bengaluru) 49,732 ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳು ಹೊಸ ನಿಯಮ ಪಾಲಿಸಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಬುಧವಾರ ತಿಳಿಸಿದೆ. ಆದರೆ, 625 ಅಂಗಡಿಗಳು ಇನ್ನೂ ನಿಯಮವನ್ನು ಪಾಲಿಸಿಲ್ಲ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ನಾಮಫಲಕದಲ್ಲಿ ಶೇ 60ರಷ್ಟು ಕನ್ನಡ ಇರುವಂತೆ ನೋಡಿಕೊಳ್ಳಲು ಬಿಬಿಎಂಪಿ ಫೆಬ್ರವರಿ 28 ಕೊನೆಯ ಗಡುವು ವಿಧಿಸಿತ್ತು ಆದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗಡುವನ್ನು ಎರಡು ವಾರಗಳ ಕಾಲ ವಿಸ್ತರಿಸಿದ್ದರು.

ಹೆಚ್ಚಿನ ಸಂಖ್ಯೆಯ ಅಂಗಡಿ ಮಾಲೀಕರು ನಿಯಮವನ್ನು ಪಾಲಿಸಿದ್ದಾರೆಂದು ತೋರುತ್ತದೆ. ಆದರೆ, ಇನ್ನು ಕೆಲವರು ನಾಮ ಫಲಕಗಳಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಮಾಡಿರುತ್ತಾರೆ ಎಂದು ಬಿಬಿಎಂಪಿ ಹೇಳಿದೆ.

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯಗೊಳಿಸುವ ಸಂಬಂಧ ಮಸೂದೆಯನ್ನು ಕರ್ನಾಟಕ ಸರ್ಕಾರ ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದಲ್ಲಿ ಮಂಡನೆ ಮಾಡಿ ಅನುಮೋದನೆ ಪಡೆದಿತ್ತು. ಅದಕ್ಕೂ ಮುನ್ನ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಆದರೆ, ಇನ್ನೇನು ಕೆಲವೇ ದಿನಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ ಎಂಬ ಕಾರಣಕ್ಕೆ ಅದಕ್ಕೆ ಸಹಿ ಹಾಕಲು ರಾಜ್ಯಪಾಲರು ನಿರಾಕರಿಸಿದ್ದರು. ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದ್ದರು. ನಂತರ ಅದೇ ರೀತಿ ಸರ್ಕಾರ ಅನುಮೋದನೆ ಪಡೆದಿತ್ತು.

ಎರಡು ವಾರಗಳ ಹಿಂದಷ್ಟೇ ಕನ್ನಡ ನಾಮಫಲಕ ವಿಚಾರದಲ್ಲಿ ರಾಜ್ಯ ಸರ್ಕಾರ ಮಾತು ತಪ್ಪಿದರೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಬೆಳಗಾವಿಯಲ್ಲಿ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ:​​ ಬೆಂಗಳೂರಿನ ಕಲ್ಯಾಣ ಮಂಟಪಗಳಿಗೂ ತಟ್ಟಿದ ನೀರಿನ ಅಭಾವ: ಮದುವೆಗಳಿಗೆ ನೀರು ಹೊಂದಿಸಲು‌ ಮಾಲೀಕರ ಪರದಾಟ

ಈ ಮಧ್ಯೆ, ಕಾಯ್ದೆಯ ಅನುಷ್ಠಾನಕ್ಕೆ ಸಂಬಂಧಿಸಿ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದರು. ‘ಕನ್ನಡ ಕಣ್ಗಾವಲು’ ಹೆಸರಿನ ಮೊಬೈಲ್ ಆ್ಯಪ್ ಕನ್ನಡ ಬೋರ್ಡ್​ ಅಳವಡಿಸದವರ ಮೇಲೆ ಕಣ್ಗಾವಲಿಡಲಿದೆ. ಇಷ್ಟೇ ಅಲ್ಲದೆ, ಕಾನೂನು ಜಾರಿಗೆ ಕಾರ್ಯಪಡೆಯೊಂದನ್ನೂ ರಚಿಸಲಾಗುವುದು ಎಂದು ಅವರು ಹೇಳಿದ್ದರು.

ರಾಜ್ಯದ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್