AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರ್​ಐ

ಬಿಬಿಎಂಪಿ ಮಹದೇವಪುರ ಕಂದಾಯ ಇಲಾಖೆ ಮೇಲೆ ಲೋಕಾಯುಕ್ತ ದಾಳಿ ಅಧಿಕಾರಿಗಳು ದಾಳಿ ಮಾಡಿದ್ದು ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಬಿಬಿಎಂಪಿ ಕಂದಾಯ ನಿರೀಕ್ಷಕ (Revenue Inspector) ನಟರಾಜ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Bengaluru News: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಆರ್​ಐ
ಬಲೆಗೆ ಬಿದ್ದ ಕಂದಾಯ ನೀರಿಕ್ಷಕ
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 04, 2023 | 7:53 PM

Share

ಬೆಂಗಳೂರು, ಆ.4: ಬಿಬಿಎಂಪಿ ಮಹದೇವಪುರ ಕಂದಾಯ ಇಲಾಖೆ ಮೇಲೆ ಲೋಕಾಯುಕ್ತ ದಾಳಿ ಅಧಿಕಾರಿಗಳು ದಾಳಿ ಮಾಡಿದ್ದು ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಕಂದಾಯ ನಿರೀಕ್ಷಕ (Revenue Inspector) ನಟರಾಜ್​ ಲೋಕಾಯುಕ್ತ(Lokayukta)ಬಲೆಗೆ ಬಿದ್ದಿದ್ದಾರೆ. ಹೌದು, ಖಾಸಗಿ ವ್ಯಕ್ತಿ ಪವನ್ ಮೂಲಕ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಇನ್ನು ನಟರಾಜ್ ಫ್ಲ್ಯಾಟ್ ಖಾತೆ ಮಾಡಿಕೊಡಲು 1 ಫ್ಲ್ಯಾಟ್​ಗೆ 10 ಸಾವಿರದಂತೆ 79 ಫ್ಲ್ಯಾಟ್​ಗೆ 7.90 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದ. ಅದರಂತೆ ಮುಂಗಡವಾಗಿ 5 ಲಕ್ಷ ರೂ. ಲಂಚ ಪಡೆಯುವಾಗ ಬಿಬಿಎಂಪಿ ಆರ್​ಐ ನಟರಾಜ್, ಆರೋಪಿ ಪವನ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಫುಡ್ ಇನ್ಸ್ಪೆಕ್ಟರ್

ಕಳೆದ ಜುಲೈ 15 ರಂದು ಬೆಂಗಳೂರು ನಗರದ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಹಾರ ನಿರೀಕ್ಷಕ ಮಹಾಂತೇಗೌಡ ಬಿ ಕಡಬಾಳು ಎನ್ನುವವರು ರಂಗದಾಮಯ್ಯ ಎಂಬುವರ ಬಳಿ ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡ ಹಣ 43ಸಾವಿರ ನಗದನ್ನು ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರು. ಬಳಿಕ ತನ್ನ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆಂದು ತಿಳಿದ ಕೂಡಲೇ ತಮ್ಮ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದರು.

ಇದನ್ನೂ ಓದಿ:Revenge: ಅಯ್ಯೋ! ಇದೆಂಥಾ ರಿವೇಂಜ್, ಲಂಚ ಕೇಳಿದ್ದಕ್ಕೆ ಲೋಕಾಯುಕ್ತಕ್ಕೆ ಹಿಡಿದುಕೊಟ್ಟಿದ್ದರು, ಅದಕ್ಕೆ ನಿವೃತ್ತಿ ದಿನ ಶಿಕ್ಷಕಿಗೆ ಅವಮಾನಕರ ಸೆಂಡ್​ ಆಫ್​

ಚೇಸ್​ ಮಾಡಿ ಹಿಡಿದಿದ್ದ ಲೋಕಾಯುಕ್ತ ಅಧಿಕಾರಿಗಳು

ಇನ್ನು ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಫುಡ್ ಇನ್ಸ್ಪೆಕ್ಟರ್​ ಕಾರು ಹತ್ತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಸುಮಾರು 15 ಕಿ.ಮೀ ವರೆಗೆ ಹಿಂಬಾಲಿಸಿ ನೆಲಮಂಗಲದ ಸೊಂಡೆಕೊಪ್ಪ ರಸ್ತೆ ಬಳಿ ಲೋಕಾಯುಕ್ತ ಅಧಿಕಾರಿಗಳು ಸುತ್ತುವರೆದಿದ್ದರು. ಆದರೂ ಕೂಡ ಅಧಿಕಾರಿಗಳ ಮೇಲೆ ವಾಹನವನ್ನು ಚಲಾಯಿಸಲು ಪ್ರಯತ್ನಿಸಿದ್ದರು. ಕೊನೆಗೆ ಮತ್ತೊಂದು ಕಾರನ್ನು ಬಳಸಿ ಅವರನ್ನು ಹಿಡಿದ ಘಟನೆ ನಡೆದಿತ್ತು. ಇದೀಗ ಅದರ ಬೆನ್ನಲ್ಲೇ ಬಿಬಿಎಂಪಿ ಕಂದಾಯ ನಿರೀಕ್ಷಕ ಸಿಕ್ಕಿಬಿದ್ದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:11 pm, Fri, 4 August 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?