AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಬರ್ತಾರೆಂದು 23 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿದ್ದ ರಸ್ತೆ ಅಧೋಗತಿಗೆ! ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಪ್ರಧಾನಿ ಕಚೇರಿ

ಬಿಬಿಎಂಪಿ ಡಾಂಬರ್ ರಸ್ತೆ ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿದ್ದು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿ ಸೂಚನೆ ನೀಡಿದೆ. 

ಮೋದಿ ಬರ್ತಾರೆಂದು 23 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿದ್ದ ರಸ್ತೆ ಅಧೋಗತಿಗೆ! ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ ಪ್ರಧಾನಿ ಕಚೇರಿ
ಮೋದಿ ಬರ್ತಾರೆಂದು 23 ಕೋಟಿ ರೂ ಖರ್ಚು ಮಾಡಿ ನಿರ್ಮಿಸಿದ್ದ ರಸ್ತೆ ಅಧೋಗತಿಗೆ
TV9 Web
| Edited By: ಆಯೇಷಾ ಬಾನು|

Updated on:Jun 23, 2022 | 7:59 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(Narendra Modi) ಜೂನ್ 20ರಂದು ಬೆಂಗಳೂರಿಗೆ ಬಂದಾಗ, ಅವರು ಸಂಚರಿಸುವ ರಸ್ತೆಗಳು ಲಕಲಕ ಅಂತ ಹೊಳೆಯುತ್ತಿದ್ವು. ಆದ್ರೆ ಮೋದಿ ವಾಪಸ್ ಹೋದ್ಮೇಲೆ ತರಾತುರಿಯಲ್ಲಿ ಮಾಡಿದ್ದ ರಸ್ತೆಗಳು ಅದ್ವಾನ ಎದ್ದುಹೋಗಿವೆ. 23 ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ ರಸ್ತೆಯ ಸ್ಥಿತಿ ನೋಡುವಂತಿಲ್ಲ. ಸದ್ಯ ಬಿಬಿಎಂಪಿ(BBMP) ಡಾಂಬರ್ ರಸ್ತೆ ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿದ್ದು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿ ಸೂಚನೆ ನೀಡಿದೆ.

ಮೂರೇ ದಿನಕ್ಕೆ ಬಯಲಾಯ್ತು ಬಿಬಿಎಂಪಿ ‘ಕಳಪೆ’ ಮುಖ ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ಕೊಟ್ಟು ಕೇವಲ ಮೂರು ದಿನ ಮಾತ್ರ ಕಳೆದಿದೆ. ತರಾತುರಿಯಲ್ಲಿ ಬಿಬಿಎಂಪಿ ನಿರ್ಮಿಸಿದ ರಸ್ತೆಯ ಕಳಪೆ ಮುಖ ಬಯಲಾಗಿದೆ. ಸ್ವತಃ ಪ್ರಧಾನಿಯವ್ರೇ ಶಾಕ್ ಆಗುವಂತೆ ಬಿಬಿಎಂಪಿ ಕೆಲವೇ ದಿನಗಳಲ್ಲಿ ಕಾಮಗಾರಿ ಮುಗಿಸಿತ್ತು. ಬೆಂಗಳೂರು ವಿವಿ, ಕೊಮ್ಮಘಟ್ಟ ಸೇರಿದಂತೆ ಮೋದಿ ಸಂಚರಿಸೋ ಮಾರ್ಗದಲ್ಲಿ ಲಕಲಕ ಹೊಳೆಯುವಂತೆ ರಸ್ತೆ ಮಾಡಲಾಗಿತ್ತು. ಇದಕ್ಕೆ ಬರೋಬ್ಬರಿ 23 ಕೋಟಿ ರೂಪಾಯಿ ಖರ್ಚು ಮಾಡಲಾಗಿತ್ತು. ಆದ್ರೀಗ ಬಿಬಿಎಂಪಿಯ ನಿರ್ಮಿಸಿದ್ದ ರಸ್ತೆಯ ಅಸಲಿಯತ್ತು ಬಯಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ಸಂಚರಿಸುವ ರಸ್ತೆ ಕಾಮಗಾರಿಗೆ ಬಿಬಿಎಂಪಿ ಖರ್ಚು ಮಾಡಿದ್ದು ಎಷ್ಟು ಕೋಟಿ ರೂ. ಗೊತ್ತಾ?

ಬೆಂಗಳೂರಿನ ವಿವಿಯಿಂದ ಮರಿಯಪ್ಪನಪಾಳ್ಯದ ಕಡೆ ಹೋಗುವ ರಸ್ತೆಯಲ್ಲಿ ಮೋದಿ ಬರ್ತಾರೆ ಅನ್ನೋ ಕಾರಣಕ್ಕೆ ಡಾಂಬರೀಕರಣ ಮಾಡಿದ್ರು. ಆದ್ರೆ, ಮೂರೇ ದಿನಕ್ಕೆ ಡಾಂಬರ್ ಕಿತ್ಕೊಂಡು ಬರ್ತಿದೆ. ಪ್ರಧಾನಿ ಭೇಟಿ ಕೊಟ್ಟ ಅಂಬೇಡ್ಕರ್ ಎಕನಾಮಿಕ್ ಕಾಲೇಜಿನ ರಸ್ತೆಯಲ್ಲೂ ಬೃಹತ್ ಗುಂಡಿ ಬಿದ್ದಿದೆ. ಅಂಬೇಡ್ಕರ್ ಕಾಲೇಜಿಗೆ ಮೋದಿ ಭೇಟಿ ಕೊಡ್ತಾರೆ ಅಂತಾ ಗುಂಡಿಗಳನ್ನ ಮುಚ್ಚಲಾಗಿತ್ತು. ಆದ್ರೀಗ ಮುಚ್ಚಿದ ಗುಂಡಿ ಕೂಡಾ ಬಾಯಿತೆರೆದಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರನ್ನ ಕೇಳಿದ್ರೆ, ಮಳೆ ಬಂದ ಕಾರಣ ಹೀಗೆ ಆಗಿದೆ ಸರಿ ಮಾಡ್ತೇವೆ ಅಂತಾ ಸಬೂಬು ಹೇಳ್ತಾರೆ. ಸದ್ಯ ಬಿಬಿಎಂಪಿ ಡಾಂಬರ್ ರಸ್ತೆ ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿದ್ದು ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿ ಸೂಚನೆ ನೀಡಿದೆ.

Published On - 7:59 pm, Thu, 23 June 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ