AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಶಾಲಾ ಮಕ್ಕಳಿಗೆ ಇನ್ನೂವರೆಗೂ ವಿತರಣೆಯಾಗದ ಶೂ, ಸಮವಸ್ತ್ರ: ಕಾರಣ ರಿವೀಲ್

ಬಿಬಿಎಂಪಿ ಶಾಲೆಗಳಲ್ಲಿ 22,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮವಸ್ತ್ರ ಮತ್ತು ಶೂಗಳಿಗಾಗಿ ಕಾಯುತ್ತಿದ್ದಾರೆ. ಜೂನ್‌ನಲ್ಲಿ ಆರಂಭವಾದ ಟೆಂಡರ್ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದಾಗಿ ಶಾಲೆಗಳು ಆರಂಭವಾದ ಒಂದು ತಿಂಗಳಾದರೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಬೂಟುಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಪಾಲಿಕೆ ಅಧಿಕಾರಿಗಳು ಶೀಘ್ರದಲ್ಲೇ ವಿತರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಬಿಬಿಎಂಪಿ ಶಾಲಾ ಮಕ್ಕಳಿಗೆ ಇನ್ನೂವರೆಗೂ ವಿತರಣೆಯಾಗದ ಶೂ, ಸಮವಸ್ತ್ರ: ಕಾರಣ ರಿವೀಲ್
ಸಾಂದರ್ಭಿಕ ಚಿತ್ರ
ಶಾಂತಮೂರ್ತಿ
| Edited By: |

Updated on:Jul 07, 2025 | 8:12 AM

Share

ಬೆಂಗಳೂರು, ಜುಲೈ 07: ಬೇಸಿಗೆ ಕಳೆದು ಶಾಲೆಗಳು ಆರಂಭವಾಗಿ ಒಂದು ತಿಂಗಳು ಕಳೆದರೂ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಶಾಲೆ ಮಕ್ಕಳಿಗೆ ಸಮವಸ್ತ್ರ (Uniform), ಶೂ ಇನ್ನೂವರೆಗೂ ವಿತರಣೆಯಾಗಿಲ್ಲ. ಇದಕ್ಕೆ ಕಾರಣ ಟೆಂಡರ್​ ಪ್ರಕ್ರಿಯೆ ಪೂರ್ಣಗೊಳ್ಳದೆ ಇರುವುದು. ಬಿಬಿಎಂಪಿ ಶೂ ಮತ್ತು ಸಮವಸ್ತ್ರದ ಟೆಂಡರ್ ಜೂನ್​ನಲ್ಲೇ ಕರೆದಿದೆ. ಈ ಟೆಂಡರ್ ಪಡೆಯಲು ಕಂಪನಿಗಳು ಮುಂದೆ ಬಂದಿವೆ. ಆದರೆ, ಯಾವ ಕಂಪನಿಗೆ ಟೆಂಡರ್ ನೀಡಬೇಕೆಂದು ಬಿಬಿಎಂಪಿ ಇನ್ನೂ ಅಂತಿಮಗೊಳಿಸಿಲ್ಲ. ಹೀಗಾಗಿ, ಬಿಬಿಎಂಪಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಶೂ ವಿತರಣೆಯಾಗಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರ ಹಾಗೂ ಶೂಗಾಗಿ ಇನ್ನೊಂದು ತಿಂಗಳು ಕಾಯಬೇಕಾಗಿದೆ. ಸದ್ಯ, ವಿದ್ಯಾರ್ಥಿಗಳು ಹಳೆಯ ಶೂ ಮತ್ತು ಸಮವಸ್ತ್ರ ಧರಿಸಿಕೊಂಡು ಶಾಲೆಗೆ ಬರುತ್ತಿದ್ದಾರೆ.

ಬಿಬಿಎಂಪಿಯ 93 ಶಿಶುವಿಹಾರ, 17 ಪ್ರಾಥಮಿಕ ಶಾಲೆ, 35 ಪ್ರೌಢಶಾಲೆ, 20 ಪಿಯು ಕಾಲೇಜು, 6 ಸ್ನಾತಕೋತ್ತರ ಪದವಿ ಕಾಲೇಜುಗಳಿವೆ. ಬಿಬಿಎಂಪಿ ಶಾಲೆಗಳಿಗೆ ಪ್ರಸಕ್ತ ವರ್ಷ 22 ಸಾವಿರಕ್ಕೂ ಅಧಿಕ ಮಕ್ಕಳು ದಾಖಲಾತಿ ಪಡೆದುಕೊಂಡಿದ್ದಾರೆ. ಈಗಾಗಲೇ ಶಾಲೆಗಳು ಆರಂಭಗೊಂಡು 35 ದಿನ ಕಳೆದಿವೆ. ಆದರೂ ಕೂಡ ಬಿಬಿಎಂಪಿಯ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಣೆಯಾಗಿಲ್ಲ. ಪ್ರತಿಬಾರಿ ಸಮವಸ್ತ್ರ, ಶೂ ವಿತರಣೆಯಲ್ಲಿ ವಿಳಂಬ ಮಾಡುತ್ತಿದ್ದ ಪಾಲಿಕೆ ಈ ಬಾರಿಯೂ ಕೂಡ ತನ್ನ ಹಳೇ ಚಾಳಿ ಮುಂದುವರಿಸಿದೆ. ವಿದ್ಯಾರ್ಥಿಗಳು ಹೊಸ ಶೂ, ಸಮವಸ್ತ್ರ ಧರಿಸಲು ಇನ್ನೂ ಒಂದು ತಿಂಗಳು ಕಾಯಬೇಕಾಗಿದೆ.

ಇದನ್ನೂ ಓದಿ: ಬೆಂಗಳೂರು ಹೊರವಲಯದ ಪಾರ್ಟಿಗಳ ಮೇಲೆ ಪೊಲೀಸ್ ಹದ್ದಿನ ಕಣ್ಣು: ಡ್ರಗ್ಸ್ ಕಂಡುಬಂದರೆ ರೆಸಾರ್ಟ್, ಹೋಂ ಸ್ಟೇ ಮಾಲೀಕರ ಮೇಲೂ ಕೇಸ್

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಚೀಟಿ ಪಂಗನಾಮ: 40 ಕೋಟಿ ರೂ.ನೊಂದಿಗೆ ದಂಪತಿ ಎಸ್ಕೇಪ್‌
Image
ಪರಿಶಿಷ್ಟ ಜಾತಿ ಅಲೆಮಾರಿ ಮುಖಂಡರ ಸಭೆಯಲ್ಲಿ ಗಲಾಟೆ:ಸೀರೆ ಎಳೆದು ಹಲ್ಲೆ ಆರೋಪ
Image
ನೈಸ್ ಯೋಜನೆಗಾಗಿ 300 ಎಕರೆಗೂ ಹೆಚ್ಚಿನ ಕೆಐಎಡಿಬಿ ಭೂಸ್ವಾಧೀನ ರದ್ದು
Image
ಜುಲೈ 8 ರಂದು ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್​..!

ಬಿಬಿಎಂಪಿಯ ಶಾಲಾ-ಕಾಲೇಜಿಗೆ ಜುಲೈ 31ರವರೆಗೆ ದಾಖಲಾತಿಗೆ ಅವಕಾಶ ಇದೆ. ಇನ್ನೂ ಸಾಕಷ್ಟು ವಿದ್ಯಾರ್ಥಿಗಳು ದಾಖಲಾಗುವ ಸಾಧ್ಯತೆ ಇದೆ. ಕಂಪನಿಗಳಿಂದ ಶೂ, ಸಮವಸ್ತ್ರಗಳ ಸ್ಯಾಂಪಲ್ ಪಡೆಯಲಾಗಿದೆ. ಸಮಿತಿ ನೇತೃತ್ವದಲ್ಲಿ ಯಾವ ಕಂಪನಿಗೆ ಟೆಂಡರ್​ ನೀಡಬೇಕು ಎಂದು ಫೈನಲ್ ಮಾಡಿದ ಮೇಲೆ ಸಮವಸ್ತ್ರ, ಶೂ ಖರೀದಿಸಲಾಗುತ್ತದೆ ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

ಈಗಾಗಲೇ ಬಿಬಿಎಂಪಿಯ ಶಾಲೆಗಳಲ್ಲಿ 22 ಸಾವಿರ ವಿದ್ಯಾರ್ಥಿಗಳು ದಾಖಲಾಗಿದ್ದು, ಬಿಬಿಎಂಪಿ ಆದಷ್ಟು ಬೇಗ ವಿದ್ಯಾರ್ಥಿಗಳಿಗೆ ಶೂ, ಸಮವಸ್ತ್ರ ವಿತರಿಸುತ್ತಾ ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 am, Mon, 7 July 25

Follow Us
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್