AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಟ್ಯಾಂಕರ್​​​​ಗಳಿಗೆ ಬಿಬಿಎಂಪಿ ಶಾಕ್; ದರ ನಿಗದಿಗೆ ಚಿಂತನೆ

ಟ್ಯಾಂಕರ್​​​ ಮಾಫಿಯಾಗೆ ಕಡಿವಾಣ ಹಾಕಲು ಬಿಬಿಎಂಪಿ ಮುಂದಾಗಿದ್ದು ದರ ನಿಗದಿ ಮಾಡುವ ಬಗ್ಗೆ ತಯಾರಿ ನಡೆಸಿದೆ. ಪಾಲಿಕೆ ಮುಖ್ಯ ಆಯುಕ್ತರು ಟ್ಯಾಂಕರ್ ಮಾಫಿಯಾ ಪರಿಶೀಲನೆಗೆ ಮುಂದಾಗಿದ್ದಾರೆ. ಒಂದು ವೇಳೆ ಹೆಚ್ಚು ದರ ವಸೂಲಿ ಮಾಡಿದ್ರೆ ಟ್ರೇಡ್ ಲೈಸೆನ್ಸ್ ರದ್ದು ಮಾಡಲು ಚಿಂತನೆ ನಡೆದಿದೆ ಎಂದು ಟಿವಿ9ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​​ ಗಿರಿನಾಥ್ ತಿಳಿಸಿದ್ದಾರೆ.

ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಟ್ಯಾಂಕರ್​​​​ಗಳಿಗೆ ಬಿಬಿಎಂಪಿ ಶಾಕ್; ದರ ನಿಗದಿಗೆ ಚಿಂತನೆ
ಬಿಬಿಎಂಪಿ
TV9 Web
| Edited By: |

Updated on: Feb 18, 2024 | 11:52 AM

Share

ಬೆಂಗಳೂರು, ಫೆ.18: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ‌.‌ ಈ ಬಿಸಿಲಿನಿಂದಾಗಿ ಜನರು ರೋಸಿಹೋಗ್ತಿದ್ದು, ಕೆಲವೊಂದು ಏರಿಯಾಗಳಲ್ಲಿ ನೀರಿನ ಸಮಸ್ಯೆಯು ಕಾಡುವುದಕ್ಕೆ ಶುರುವಾಗಿದೆ (Drinking Water Crisis). ಬೇಸಿಗೆಯನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಟ್ಯಾಂಕರ್ (Water Tank) ಮಾಲೀಕರು ದುಪ್ಪಟ್ಟು ಹಣ ವಸೂಲಿಗೆ ಮುಂದಾಗಿವೆ. ಹೀಗಾಗಿ ನೀರು ಪೂರೈಸುವ ಖಾಸಗಿ ಟ್ಯಾಂಕರ್​​​​ಗಳಿಗೆ ಬಿಬಿಎಂಪಿ (BBMP) ಶಾಕ್ ಕೊಟ್ಟಿದೆ.

ಟ್ಯಾಂಕರ್​​​ ಮಾಫಿಯಾಗೆ ಕಡಿವಾಣ ಹಾಕಲು ಬಿಬಿಎಂಪಿ ತಯಾರಿ ನಡೆಸಿದೆ. ನಗರದಲ್ಲಿ ಕುಡಿಯೋ ನೀರಿನ ಅಭಾವ ಹೆಚ್ಚಾಗ್ತಿದೆ. ಇತ್ತ ನಗರದ ಬಹುತೇಕ ಕಡೆ ನೀರಿಗೆ ಹಾಹಾಕಾರ ಶುರುವಾಗಿದೆ. ನಗರದ ಕೆಲ ಪ್ರದೇಶಗಳಲ್ಲಿ ಟ್ಯಾಂಕರ್ ನೀರೆ ಗತಿಯಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಟ್ಯಾಂಕರ್ ಮಾಲೀಕರು ಹಣ ಮಾಡಲು ಮುಂದಾಗಿವೆ. ಬೇಕಾಬಿಟ್ಟಿ ರೇಟ್ ಪಡೆದು ಟ್ಯಾಂಕರ್ ನೀರು ಸರಬರಾಜು ಮಾಡ್ತಿದ್ದಾರೆ. 500-600 ರೂಪಾಯಿ ಇದ್ದ ಟ್ಯಾಂಕರ್ ನೀರು ಈಗ ಗಗನಕ್ಕೆ ಏರಿಕೆಯಾಗಿದೆ. ಇಂದಿರಾನಗರ, ರಾಜಾಜಿನಗರ, ಸುಂಕದಕಟ್ಟೆಯಲ್ಲಿ ಹೆಚ್ಚು ಬೆಲೆಗೆ ನೀರು ಮಾರಾಟ ಮಾಡಲಾಗುತ್ತಿದೆ. 20 ಸಾವಿರ ಲೀಟರ್ ನೀರಿಗೆ ₹6,500 ಪಡೆಯುತ್ತಿದ್ದಾರೆ. 5 ಸಾವಿರ ಲೀಟರ್ ನೀರಿಗೆ 1000 ದಿಂದ 6 ಸಾವಿರ ರೂ.ವರೆಗೆ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ: ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿಗೆ ಪ್ರತಿ ತಾಲೂಕಿಗೆ 50 ಲಕ್ಷ, ಟ್ಯಾಂಕರ್ ನೀರು ಪೂರೈಕೆಗೆ 45 ಲಕ್ಷ ರೂ. ಮೀಸಲಿಟ್ಟ ಜಿಲ್ಲಾಡಳಿತ

ಈ ಮೊದಲು ಬಿಬಿಎಂಪಿ 5 ಸಾವಿರ ಲೀಟರ್ ಟ್ಯಾಂಕರ್​ಗೆ 540 ರೂ., 12 ಸಾವಿರ ಲೀಟರ್ ನೀರಿಗೆ 1 ಸಾವಿರ ರೂ. ನಿಗದಿ ಮಾಡಿತ್ತು. ಆದರೆ ಬೇಸಿಗೆ ಆರಂಭಕ್ಕೂ ಮೊದಲೇ ಟ್ಯಾಂಕರ್ ಮಾಲೀಕರು ವಸೂಲಿಗೆ ಮುಂದಾಗಿವೆ. ಈ ಸಂಬಂಧ ಸಾರ್ವಜನಿಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆ ನೀರು ಪೂರೈಸುವ ಖಾಸಗಿ ಟ್ಯಾಂಕರ್ ಮಾಲೀಕರಿಗೆ ದರ ನಿಗದಿಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಸಾರ್ವಜನಿಕರ ಅನುಕೂಲಕ್ಕೆ ದರ ನಿಗದಿ ಮಾಡಲು ಬಿಬಿಎಂಪಿ ಮುಂದಾಗಿದೆ. ಆಯಾ ವಲಯಗಳ ವಲಯ ಆಯುಕ್ತರಿಗೆ ಈ ಬಗ್ಗೆ ಸೂಚನೆ ನೀಡಿದೆ.

ಪಾಲಿಕೆ ಮುಖ್ಯ ಆಯುಕ್ತರು ಟ್ಯಾಂಕರ್ ಮಾಫಿಯಾ ಪರಿಶೀಲನೆಗೆ ಮುಂದಾಗಿದ್ದಾರೆ. ಒಂದು ವೇಳೆ ಹೆಚ್ಚು ದರ ವಸೂಲಿ ಮಾಡಿದ್ರೆ ಟ್ರೇಡ್ ಲೈಸೆನ್ಸ್ ರದ್ದು ಮಾಡಲು ಚಿಂತನೆ ನಡೆದಿದೆ. ಅಧಿಕ ದರ ಪೀಕುತ್ತಿರೋ ಟ್ಯಾಂಕರ್ ಗಳನ್ನ ಮುಟ್ಟುಗೋಲು ಹಾಕಲು ಚಿಂತನೆ ನಡೆದಿದೆ. ಈಗಾಗಲೇ ಜಿಲ್ಲಾಡಳಿತ ಜೊತೆ ಸಭೆ ನಡೆಸಿ ಅಧಿಕಾರಿಗಳು ಖಾಸಗಿ ಟ್ಯಾಂಕರ್ ಗಳ ಸರ್ವೆ ನಡೆಸಿದ್ದಾರೆ. ಮುಂದಿನ ವಾರ ಹೊಸ ದರ ನಿಗದಿ ಮಾಡಿ ಸಾರ್ವಜನಿಕವಾಗಿ ಪ್ರಕಟಣೆಗೆ ಪ್ಲಾನ್ ಮಾಡಿದ್ದೇವೆ ಎಂದು ಟಿವಿ9ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​​ ಗಿರಿನಾಥ್ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್