Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತಾ ಅಭಿಯಾನದ ಜತೆಗೆ ಬೆಂಗಳೂರು ಆಸ್ತಿ ಮಾಲೀಕರಿಗೆ ಶಾಕ್ ನೀಡಲು ಮುಂದಾದ ಬಿಬಿಎಂಪಿ

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ-ಖಾತಾ ಮಾಡಿಸಲು ಸೂಚಿಸಿದ್ದ ಬಿಬಿಎಂಪಿ, ಇದೀಗ ಇದುವರೆಗೂ ಖಾತಾ ಮಾಡಿಸದ ಮಾಲೀಕರಿಗೆ ಶಾಕ್ ನೀಡಲು ಮುಂದಾಗಿದೆ. ಈ ಹಿಂದೆ ಹಲವು ಬಾರೀ ಖಾತಾ ಮಾಡಿಸಲು ಅವಕಾಶ ನೀಡಿದ್ದರೂ ಮಾಡಿಸದ ಆಸ್ತಿ ಮಾಲೀಕರಿಗೆ ಇದೀಗ ಕೊನೆಬಾರಿಗೆ ಅವಕಾಶ ಕೊಡಲು ಹೊರಟಿರುವ ಪಾಲಿಕೆ, ಅದರ ಜತೆಗೆ ಆಸ್ತಿ ಮಾಲೀಕರಿಗೆ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಖಾತಾ ಅಭಿಯಾನದ ಜತೆಗೆ ಬೆಂಗಳೂರು ಆಸ್ತಿ ಮಾಲೀಕರಿಗೆ ಶಾಕ್ ನೀಡಲು ಮುಂದಾದ ಬಿಬಿಎಂಪಿ
ಬಿಬಿಎಂಪಿ
Follow us
ಶಾಂತಮೂರ್ತಿ
| Updated By: Ganapathi Sharma

Updated on: Feb 20, 2025 | 8:14 AM

ಬೆಂಗಳೂರು, ಫೆಬ್ರವರಿ 20: ಬೆಂಗಳೂರಿನ ಆಸ್ತಿ ಮಾಲೀಕರು ಇ-ಖಾತಾ ಮಾಡಿಸುವುದು ಕಡ್ಡಾಯ ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಅದಾದ ಬಳಿಕ ಬಿಬಿಎಂಪಿಯ ಕಚೇರಿಗಳು, ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ ಖಾತಾ ಮಾಡಿಸಲು ಅವಕಾಶ ಕೂಡ ನೀಡಲಾಗಿತ್ತು. ಎಷ್ಟೇ ಬಾರಿ ಅವಕಾಶ ನೀಡಿದರೂ ಆಸ್ತಿಗಳಿಗೆ ಇ ಖಾತಾ ಮಾಡಿಸದ ಮಾಲೀಕರಿಗೆ ಬಿಸಿ ಮುಟ್ಟಿಸಲು ಇದೀಗ ಬಿಬಿಎಂಪಿ ಹೊಸ ಪ್ಲಾನ್​​ಗೆ ಸಿದ್ಧವಾಗಿದೆ. ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿ 45 ದಿನಗಳ ವಿಶೇಷ ಅಭಿಯಾನ ನಡೆಸಲು ಸಜ್ಜಾಗಿರುವ ಪಾಲಿಕೆ, ಆ ಮೂಲಕ ಎಲ್ಲಾ ಆಸ್ತಿಗಳಿಗೂ ಇ ಖಾತಾ ನೀಡಲು ತಯಾರಿ ನಡೆಸಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 1 ಲಕ್ಷ ಖಾತಾ ಮಾಡಿಸುವ ಗುರಿ ಇಟ್ಟುಕೊಂಡಿರುವ ಬಿಬಿಎಂಪಿ, ಸ್ಪೆಷಲ್ ಡ್ರೈವ್ ಬಳಿಕ ತನ್ನ ಆದಾಯ ಹೆಚ್ಚಿಸಿಕೊಳ್ಳಲು ಪ್ಲಾನ್ ರೂಪಿಸಿದೆ.

ಖಾತಾ ಮಾಡಿದ ಬಳಿಕ ತೆರಿಗೆ ವಸೂಲಿ: ಪಾವತಿಸಿದರಷ್ಟೇ ಖಾತಾ ಡೌನ್​ಲೋಡ್​ಗೆ ಅವಕಾಶ

ಪಾಲಿಕೆ ವ್ಯಾಪ್ತಿಯ ಆಸ್ತಿಗಳ ಖಾತಾ ಮಾಡಿದ ಬಳಿಕ ಆಯಾ ಆಸ್ತಿಗಳ ಮಾಲೀಕರ ಬಳಿ ಆಸ್ತಿ ತೆರಿಗೆ ವಸೂಲಿಗೆ ಸಜ್ಜಾಗಿರುವ ಬಿಬಿಎಂಪಿ, ಆಸ್ತಿ ತೆರಿಗೆ ಪಾವತಿಸಿದರಷ್ಟೇ ಖಾತಾ ಡೌನ್ ಲೋಡ್​ಗೆ ಅವಕಾಶ ನೀಡುವ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿದೆ. ಸದ್ಯ 1 ಲಕ್ಷ ಖಾತಾ ಮಾಡಿಸುವ ಗುರಿ ಹೊಂದಿರುವ ಪಾಲಿಕೆ, ಈ ಖಾತಾಗಳಿಂದ ಬರೋಬ್ಬರಿ 100 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಇಟ್ಟುಕೊಂಡಿದೆ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಸುರಂಗ ಮಾರ್ಗ, ಮೇಲ್ಸೇತುವೆ ಬೇಕಿಲ್ಲ ಎಂದ ನಾಗರಿಕರ ವೇದಿಕೆ: ಹೀಗೆನ್ನಲು ಇದೆ ಕಾರಣ!

ಸದ್ಯ ಈಗಾಗಲೇ ಇ-ಖಾತಾ ಕಡ್ಡಾಯದ ಬಳಿಕ ಹಲವು ಗೊಂದಲಗಳಿಂದ ಸುಸ್ತಾಗಿದ್ದ ಆಸ್ತಿ ಮಾಲೀಕರಿಗೆ ಇದೀಗ ಪಾಲಿಕೆಯೇ ಖಾತಾ ವಿತರಿಸಲು ಸಜ್ಜಾಗಿರುವುದು ಸಮಾಧಾನ ತಂದಿದ್ದರೆ, ಮತ್ತೊಂದೆಡೆ ಇಷ್ಟು ದಿನ ಆಸ್ತಿ ತೆರಿಗೆ ಕಟ್ಟದೇ, ಖಾತಾ ಮಾಡಿಸದೇ ಕಳ್ಳಾಟ ಆಡುತ್ತಿದ್ದ ಆಸ್ತಿ ಮಾಲೀಕರಿಗೆ ಪಾಲಿಕೆಯ ಈ ಉಪಾಯ ಬಿಸಿತುಪ್ಪವಾಗಿ ಪರಿಣಮಿಸುವ ಭೀತಿ ಎದುರಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್