AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತಾ ಅಭಿಯಾನದ ಜತೆಗೆ ಬೆಂಗಳೂರು ಆಸ್ತಿ ಮಾಲೀಕರಿಗೆ ಶಾಕ್ ನೀಡಲು ಮುಂದಾದ ಬಿಬಿಎಂಪಿ

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಇ-ಖಾತಾ ಮಾಡಿಸಲು ಸೂಚಿಸಿದ್ದ ಬಿಬಿಎಂಪಿ, ಇದೀಗ ಇದುವರೆಗೂ ಖಾತಾ ಮಾಡಿಸದ ಮಾಲೀಕರಿಗೆ ಶಾಕ್ ನೀಡಲು ಮುಂದಾಗಿದೆ. ಈ ಹಿಂದೆ ಹಲವು ಬಾರೀ ಖಾತಾ ಮಾಡಿಸಲು ಅವಕಾಶ ನೀಡಿದ್ದರೂ ಮಾಡಿಸದ ಆಸ್ತಿ ಮಾಲೀಕರಿಗೆ ಇದೀಗ ಕೊನೆಬಾರಿಗೆ ಅವಕಾಶ ಕೊಡಲು ಹೊರಟಿರುವ ಪಾಲಿಕೆ, ಅದರ ಜತೆಗೆ ಆಸ್ತಿ ಮಾಲೀಕರಿಗೆ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.

ಖಾತಾ ಅಭಿಯಾನದ ಜತೆಗೆ ಬೆಂಗಳೂರು ಆಸ್ತಿ ಮಾಲೀಕರಿಗೆ ಶಾಕ್ ನೀಡಲು ಮುಂದಾದ ಬಿಬಿಎಂಪಿ
ಬಿಬಿಎಂಪಿ
ಶಾಂತಮೂರ್ತಿ
| Edited By: |

Updated on: Feb 20, 2025 | 8:14 AM

Share

ಬೆಂಗಳೂರು, ಫೆಬ್ರವರಿ 20: ಬೆಂಗಳೂರಿನ ಆಸ್ತಿ ಮಾಲೀಕರು ಇ-ಖಾತಾ ಮಾಡಿಸುವುದು ಕಡ್ಡಾಯ ಎಂದು ಸರ್ಕಾರ ಆದೇಶ ಹೊರಡಿಸಿತ್ತು. ಅದಾದ ಬಳಿಕ ಬಿಬಿಎಂಪಿಯ ಕಚೇರಿಗಳು, ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ ಖಾತಾ ಮಾಡಿಸಲು ಅವಕಾಶ ಕೂಡ ನೀಡಲಾಗಿತ್ತು. ಎಷ್ಟೇ ಬಾರಿ ಅವಕಾಶ ನೀಡಿದರೂ ಆಸ್ತಿಗಳಿಗೆ ಇ ಖಾತಾ ಮಾಡಿಸದ ಮಾಲೀಕರಿಗೆ ಬಿಸಿ ಮುಟ್ಟಿಸಲು ಇದೀಗ ಬಿಬಿಎಂಪಿ ಹೊಸ ಪ್ಲಾನ್​​ಗೆ ಸಿದ್ಧವಾಗಿದೆ. ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿ 45 ದಿನಗಳ ವಿಶೇಷ ಅಭಿಯಾನ ನಡೆಸಲು ಸಜ್ಜಾಗಿರುವ ಪಾಲಿಕೆ, ಆ ಮೂಲಕ ಎಲ್ಲಾ ಆಸ್ತಿಗಳಿಗೂ ಇ ಖಾತಾ ನೀಡಲು ತಯಾರಿ ನಡೆಸಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 1 ಲಕ್ಷ ಖಾತಾ ಮಾಡಿಸುವ ಗುರಿ ಇಟ್ಟುಕೊಂಡಿರುವ ಬಿಬಿಎಂಪಿ, ಸ್ಪೆಷಲ್ ಡ್ರೈವ್ ಬಳಿಕ ತನ್ನ ಆದಾಯ ಹೆಚ್ಚಿಸಿಕೊಳ್ಳಲು ಪ್ಲಾನ್ ರೂಪಿಸಿದೆ.

ಖಾತಾ ಮಾಡಿದ ಬಳಿಕ ತೆರಿಗೆ ವಸೂಲಿ: ಪಾವತಿಸಿದರಷ್ಟೇ ಖಾತಾ ಡೌನ್​ಲೋಡ್​ಗೆ ಅವಕಾಶ

ಪಾಲಿಕೆ ವ್ಯಾಪ್ತಿಯ ಆಸ್ತಿಗಳ ಖಾತಾ ಮಾಡಿದ ಬಳಿಕ ಆಯಾ ಆಸ್ತಿಗಳ ಮಾಲೀಕರ ಬಳಿ ಆಸ್ತಿ ತೆರಿಗೆ ವಸೂಲಿಗೆ ಸಜ್ಜಾಗಿರುವ ಬಿಬಿಎಂಪಿ, ಆಸ್ತಿ ತೆರಿಗೆ ಪಾವತಿಸಿದರಷ್ಟೇ ಖಾತಾ ಡೌನ್ ಲೋಡ್​ಗೆ ಅವಕಾಶ ನೀಡುವ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿದೆ. ಸದ್ಯ 1 ಲಕ್ಷ ಖಾತಾ ಮಾಡಿಸುವ ಗುರಿ ಹೊಂದಿರುವ ಪಾಲಿಕೆ, ಈ ಖಾತಾಗಳಿಂದ ಬರೋಬ್ಬರಿ 100 ಕೋಟಿ ರೂ. ಆದಾಯ ಬರುವ ನಿರೀಕ್ಷೆ ಇಟ್ಟುಕೊಂಡಿದೆ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಸುರಂಗ ಮಾರ್ಗ, ಮೇಲ್ಸೇತುವೆ ಬೇಕಿಲ್ಲ ಎಂದ ನಾಗರಿಕರ ವೇದಿಕೆ: ಹೀಗೆನ್ನಲು ಇದೆ ಕಾರಣ!

ಸದ್ಯ ಈಗಾಗಲೇ ಇ-ಖಾತಾ ಕಡ್ಡಾಯದ ಬಳಿಕ ಹಲವು ಗೊಂದಲಗಳಿಂದ ಸುಸ್ತಾಗಿದ್ದ ಆಸ್ತಿ ಮಾಲೀಕರಿಗೆ ಇದೀಗ ಪಾಲಿಕೆಯೇ ಖಾತಾ ವಿತರಿಸಲು ಸಜ್ಜಾಗಿರುವುದು ಸಮಾಧಾನ ತಂದಿದ್ದರೆ, ಮತ್ತೊಂದೆಡೆ ಇಷ್ಟು ದಿನ ಆಸ್ತಿ ತೆರಿಗೆ ಕಟ್ಟದೇ, ಖಾತಾ ಮಾಡಿಸದೇ ಕಳ್ಳಾಟ ಆಡುತ್ತಿದ್ದ ಆಸ್ತಿ ಮಾಲೀಕರಿಗೆ ಪಾಲಿಕೆಯ ಈ ಉಪಾಯ ಬಿಸಿತುಪ್ಪವಾಗಿ ಪರಿಣಮಿಸುವ ಭೀತಿ ಎದುರಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!