AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯಿಂದ ಮನೆ ಮನೆ ಸರ್ವೆ ಕಾರ್ಯ ಆರಂಭ: ಪ್ರತಿ ಮನೆಗೆ 25,000 ರೂ. ಪರಿಹಾರ ಘೋಷಿಸಿರುವ ಸಿಎಂ

ಮನೆಯಲ್ಲಿ ಯಾವೆಲ್ಲ ವಸ್ತುಗಳು ಜಲಾವೃತಗೊಂಡಿವೆ ಎಂದು ಫೋಟೊ ಸಮೇತ ನಿವಾಸಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಬಳಿಕ ಬಿಬಿಎಂಪಿ ಸಿಬ್ಬಂದಿಗಳು ಪೋಟೊ ಸಮೇತ ಬಿಬಿಎಂಪಿ ಲಿಂಕ್ ಮೂಲಕ ಮಾಹಿತಿ ಅಪ್ಲೋಡ್ ಮಾಡಲಾಗುವುದು. 

ಬಿಬಿಎಂಪಿಯಿಂದ ಮನೆ ಮನೆ ಸರ್ವೆ ಕಾರ್ಯ ಆರಂಭ: ಪ್ರತಿ ಮನೆಗೆ 25,000 ರೂ. ಪರಿಹಾರ ಘೋಷಿಸಿರುವ ಸಿಎಂ
ಬಿಬಿಎಂಪಿ ಕಚೇರಿ
TV9 Web
| Edited By: |

Updated on: May 20, 2022 | 12:04 PM

Share

ಬೆಂಗಳೂರು: ಹೊರಮಾವು ಸಾಯಿ ಬಡಾವಣೆ ಮಳೆ ಪೀಡಿತ ಪ್ರದೇಶಗಳಿಗೆ ಬಿಬಿಎಂಪಿ ಸಿಬ್ಬಂದಿಗಳು ಭೇಟಿ ನೀಡಿದ್ದು, ಮನೆ ಮನೆ ಸರ್ವೆ ಕಾರ್ಯ ಆರಂಭ ಮಾಡಿದ್ದಾರೆ. ಮಳೆ ಹಾನಿಯಾದ ಪ್ರತಿ ಮನೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ 25 ಸಾವಿರ ಪರಿಹಾರ ಘೋಷಣೆ ಹಿನ್ನಲೆ ಬಿಬಿಎಂಪಿ ಸಿಬ್ಬಂದಿಗಳು ಮಾಹಿತಿ ಪಡೆಯುತ್ತಿದ್ದಾರೆ. ಹಾನಿಗೊಳಗಾಗಿರುವ ಮನೆಗಳಿಗೆ ಭೇಟಿ ನೀಡಿದ್ದು, ಪರಿಹಾರ ಒದಗಿಸಲು ಬಿಬಿಎಂಪಿಯಿಂದ ಸರ್ವೆ ಮಾಡಲಾಗಿದೆ. ಮನೆಯಲ್ಲಿ ಯಾವೆಲ್ಲ ವಸ್ತುಗಳು ಜಲಾವೃತಗೊಂಡಿವೆ ಎಂದು ಫೋಟೊ ಸಮೇತ ನಿವಾಸಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಬಳಿಕ ಬಿಬಿಎಂಪಿ ಸಿಬ್ಬಂದಿಗಳು ಪೋಟೊ ಸಮೇತ ಬಿಬಿಎಂಪಿ ಲಿಂಕ್ ಮೂಲಕ ಮಾಹಿತಿ ಅಪ್ಲೋಡ್ ಮಾಡಲಾಗುವುದು.

ಮಳೆಯಿಂದ ಹೈರಾಣಾದ ಹೊರಮಾವು ಜನ

ನಗರದಲ್ಲಿ ಭಾರಿ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಹೊರಮಾವಿನಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಮನೆಯಿಂದ ಹೊರಗೆ ಬರಲಾಗದ ಹಿನ್ನೆಲೆ ಜನರಿಗೆ ಬಿಬಿಎಂಪಿ ಅಧಿಕಾರಿಗಳು ಫುಡ್​ ಸಪ್ಲೈ ಮಾಡಿದ್ದಾರೆ. ಹೊರಮಾವಿನ ಸಾಯಿ ಲೇಔಟ್​ನಲ್ಲಿ ಮಳೆ ನಿಂತರು ನೀರು ಮಾತ್ರ ಕಮ್ಮಿ ಆಗಿಲ್ಲ. ಮೊನ್ನೆ ಸುರಿದ ಮಳೆಯಿಂದ ನೀರು ತುಂಬಿಕೊಂಡಿದೆ. ಇನ್ನೂ ಎರಡು ಅಡಿಯಷ್ಟು ನೀರು ನಿಂತುಕೊಂಡಿದ್ದು, ನೀರು ಹೋಗಲು ಯಾವುದೇ ವ್ಯವಸ್ಥೆ ಮಾಡಿಲ್ಲ. ಮನೆಯ ನೀರಿನ ಸಂಪ್​ನಲ್ಲಿ ತುಂಬಾ ಕೊಳಚೆ ನೀರು ತುಂಬಿಕೊಂಡಿದೆ. ಬಳಕೆ ಮಾಡಲು, ಕುಡಿಯಲು ನೀರಿಲ್ಲ. ಐದು ಜನಕ್ಕೆ ಒಂದು ಬಾಟಲ್ ನೀರು ಕೊಟ್ಟಿದ್ದಾರೆ. ಯಾವುದೇ ರೀತಿಯ ವ್ಯವಸ್ಥೆ ಮಾಡಿಲ್ಲ ಎಂದು ಸಾಯಿ ಲೇಔಟ್ ನಿವಾಸಿಗಳು ಹೇಳಿದ್ದಾರೆ.

ಇದನ್ನೂ ಓದಿ: Faf du Plessis: ಫಾಪ್ ಡುಪ್ಲೆಸಿಸ್ ಪಂದ್ಯ ಮುಗಿದ ಬಳಿಕ ವಿರಾಟ್ ಕೊಹ್ಲಿ ಬಗ್ಗೆ ಏನು ಹೇಳಿದ್ರು ಗೊತ್ತೇ?

ಸಿಎಂ ವೀಕ್ಷಣೆ ಹಿನ್ನೆಲೆ ಅಧಿಕಾರಿಗಳ ದೌಡು

ಸಾಯಿ ಲೇಔಟ್ ಗೆಸಿಎಂ ವೀಕ್ಷಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಓಡೋಡಿ ಬಂದಿದ್ದು, ಎದ್ದು ಬಿದ್ದು ನೀರು ಖಾಲಿ‌ ಮಾಡಿಸಲು ಮಾಡಲು ಮುಂದಾಗಿದ್ದರು. ದೊಡ್ಡ ದೊಡ್ಡ ಮೋಟಾರುಗಳ ಮೂಲಕ ಲೇಔಟ್​ನಿಂದ ನೀರು ಹೊರ ಹಾಕ್ತಿದ್ದಾರೆ. ಬಿಬಿಎಂಪಿ ಬಿಡಬ್ಲೂಎಸ್ಎಸ್ಬಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಏರಿಯಾ ಮುಂಭಾದಲ್ಲಿ ತುಂಬಿದ್ದ ನೀರನ್ನು ಖಾಲಿ ಮಾಡಲಾಗಿದೆ. ಒಳಗಿನ ಕ್ರಾಸ್​ಗಳಲ್ಲಿ ಇನ್ನೂ ಎರಡರಿಂದ ಮೂರು ಅಡಿಗಳಷ್ಟು ನೀರು ನಿಂತಿದೆ. ಆ ನೀರನ್ನು ಖಾಲಿ ಮಾಡಲು ವಾಟರ್ ಮೋಟಾರು ಮೂಲಕ ಹೊರ ಹಾಕಲು ಮುಂದಾಗಿದ್ದಾರೆ. ಇದನ್ನು ಮೊದಲೇ ಮಾಡಿದ್ರೆ ನೀರು ಖಾಲಿ ಆಗ್ತಿತ್ತು. ಆದರೆ ಅದನ್ನು ಮಾಡಿಲ್ಲ ಈಗ ಸಿಎಂ ಬರ್ತಾರೆ ಎಂದು ಮೋಟಾರು ಮೂಲಕ ನೀರು ಖಾಲಿ ಮಾಡಿಸ್ತಿದ್ದಾರೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

ಬಿಬಿಎಂಪಿ, ಜಲಮಂಡಳಿ ಅಧಿಕಾರಿಗಳ ವಿರುದ್ಧ ಸಂತ್ರಸ್ತರು ಗರಂ ಆಗಿದ್ದು, ನಮ್ಮ ಮನೆ ಬಳಿ ಇನ್ನೂ 2 ಅಡಿ ಎತ್ತರಕ್ಕೆ ನೀರು ನಿಂತಿದೆ. ನಾವಿನ್ನೂ ತಿಂಡಿ ತಿಂದಿಲ್ಲ, ಕುಡಿಯಲು ನೀರಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ, ಮೊನ್ನೆ ಯಂತ್ರಗಳನ್ನು ತಂದಿದ್ದರೆ ನೀರು ಖಾಲಿ ಆಗುತ್ತಿತ್ತು. ಮನೆಯಿಂದ ಹೊರಬರಲು ಆಗ್ತಿಲ್ಲ, ಕೆಲಸಕ್ಕೆ ಹೋಗುವುದು ಹೇಗೆ? ಸಿಎಂ ಬಳಿಗೆ ಜನರನ್ನು ಬಿಡದೆ ಅಧಿಕಾರಿಗಳು ಬ್ಯಾರಿಕೇಡ್​ ಹಾಕಿದ್ದಾರೆ. ಏರಿಯಾದಿಂದ ಜನರು ಹೊರಬರದಂತೆ ತಡೆಯಲು ಪ್ರಯತ್ನ ಮಾಡಲಾಗಿದೆ. ಪೊಲೀಸರು, ಅಧಿಕಾರಿಗಳ ನಡೆಯನ್ನು ನಿವಾಸಿಗಳು ಖಂಡಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ