AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯಿಂದ ಮನೆ ಮನೆ ಸರ್ವೆ ಕಾರ್ಯ ಆರಂಭ: ಪ್ರತಿ ಮನೆಗೆ 25,000 ರೂ. ಪರಿಹಾರ ಘೋಷಿಸಿರುವ ಸಿಎಂ

ಮನೆಯಲ್ಲಿ ಯಾವೆಲ್ಲ ವಸ್ತುಗಳು ಜಲಾವೃತಗೊಂಡಿವೆ ಎಂದು ಫೋಟೊ ಸಮೇತ ನಿವಾಸಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಬಳಿಕ ಬಿಬಿಎಂಪಿ ಸಿಬ್ಬಂದಿಗಳು ಪೋಟೊ ಸಮೇತ ಬಿಬಿಎಂಪಿ ಲಿಂಕ್ ಮೂಲಕ ಮಾಹಿತಿ ಅಪ್ಲೋಡ್ ಮಾಡಲಾಗುವುದು. 

ಬಿಬಿಎಂಪಿಯಿಂದ ಮನೆ ಮನೆ ಸರ್ವೆ ಕಾರ್ಯ ಆರಂಭ: ಪ್ರತಿ ಮನೆಗೆ 25,000 ರೂ. ಪರಿಹಾರ ಘೋಷಿಸಿರುವ ಸಿಎಂ
ಬಿಬಿಎಂಪಿ ಕಚೇರಿ
TV9 Web
| Edited By: |

Updated on: May 20, 2022 | 12:04 PM

Share

ಬೆಂಗಳೂರು: ಹೊರಮಾವು ಸಾಯಿ ಬಡಾವಣೆ ಮಳೆ ಪೀಡಿತ ಪ್ರದೇಶಗಳಿಗೆ ಬಿಬಿಎಂಪಿ ಸಿಬ್ಬಂದಿಗಳು ಭೇಟಿ ನೀಡಿದ್ದು, ಮನೆ ಮನೆ ಸರ್ವೆ ಕಾರ್ಯ ಆರಂಭ ಮಾಡಿದ್ದಾರೆ. ಮಳೆ ಹಾನಿಯಾದ ಪ್ರತಿ ಮನೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ 25 ಸಾವಿರ ಪರಿಹಾರ ಘೋಷಣೆ ಹಿನ್ನಲೆ ಬಿಬಿಎಂಪಿ ಸಿಬ್ಬಂದಿಗಳು ಮಾಹಿತಿ ಪಡೆಯುತ್ತಿದ್ದಾರೆ. ಹಾನಿಗೊಳಗಾಗಿರುವ ಮನೆಗಳಿಗೆ ಭೇಟಿ ನೀಡಿದ್ದು, ಪರಿಹಾರ ಒದಗಿಸಲು ಬಿಬಿಎಂಪಿಯಿಂದ ಸರ್ವೆ ಮಾಡಲಾಗಿದೆ. ಮನೆಯಲ್ಲಿ ಯಾವೆಲ್ಲ ವಸ್ತುಗಳು ಜಲಾವೃತಗೊಂಡಿವೆ ಎಂದು ಫೋಟೊ ಸಮೇತ ನಿವಾಸಿಗಳಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ಬಳಿಕ ಬಿಬಿಎಂಪಿ ಸಿಬ್ಬಂದಿಗಳು ಪೋಟೊ ಸಮೇತ ಬಿಬಿಎಂಪಿ ಲಿಂಕ್ ಮೂಲಕ ಮಾಹಿತಿ ಅಪ್ಲೋಡ್ ಮಾಡಲಾಗುವುದು.

ಮಳೆಯಿಂದ ಹೈರಾಣಾದ ಹೊರಮಾವು ಜನ

ನಗರದಲ್ಲಿ ಭಾರಿ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಹೊರಮಾವಿನಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಮನೆಯಿಂದ ಹೊರಗೆ ಬರಲಾಗದ ಹಿನ್ನೆಲೆ ಜನರಿಗೆ ಬಿಬಿಎಂಪಿ ಅಧಿಕಾರಿಗಳು ಫುಡ್​ ಸಪ್ಲೈ ಮಾಡಿದ್ದಾರೆ. ಹೊರಮಾವಿನ ಸಾಯಿ ಲೇಔಟ್​ನಲ್ಲಿ ಮಳೆ ನಿಂತರು ನೀರು ಮಾತ್ರ ಕಮ್ಮಿ ಆಗಿಲ್ಲ. ಮೊನ್ನೆ ಸುರಿದ ಮಳೆಯಿಂದ ನೀರು ತುಂಬಿಕೊಂಡಿದೆ. ಇನ್ನೂ ಎರಡು ಅಡಿಯಷ್ಟು ನೀರು ನಿಂತುಕೊಂಡಿದ್ದು, ನೀರು ಹೋಗಲು ಯಾವುದೇ ವ್ಯವಸ್ಥೆ ಮಾಡಿಲ್ಲ. ಮನೆಯ ನೀರಿನ ಸಂಪ್​ನಲ್ಲಿ ತುಂಬಾ ಕೊಳಚೆ ನೀರು ತುಂಬಿಕೊಂಡಿದೆ. ಬಳಕೆ ಮಾಡಲು, ಕುಡಿಯಲು ನೀರಿಲ್ಲ. ಐದು ಜನಕ್ಕೆ ಒಂದು ಬಾಟಲ್ ನೀರು ಕೊಟ್ಟಿದ್ದಾರೆ. ಯಾವುದೇ ರೀತಿಯ ವ್ಯವಸ್ಥೆ ಮಾಡಿಲ್ಲ ಎಂದು ಸಾಯಿ ಲೇಔಟ್ ನಿವಾಸಿಗಳು ಹೇಳಿದ್ದಾರೆ.

ಇದನ್ನೂ ಓದಿ: Faf du Plessis: ಫಾಪ್ ಡುಪ್ಲೆಸಿಸ್ ಪಂದ್ಯ ಮುಗಿದ ಬಳಿಕ ವಿರಾಟ್ ಕೊಹ್ಲಿ ಬಗ್ಗೆ ಏನು ಹೇಳಿದ್ರು ಗೊತ್ತೇ?

ಸಿಎಂ ವೀಕ್ಷಣೆ ಹಿನ್ನೆಲೆ ಅಧಿಕಾರಿಗಳ ದೌಡು

ಸಾಯಿ ಲೇಔಟ್ ಗೆಸಿಎಂ ವೀಕ್ಷಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಓಡೋಡಿ ಬಂದಿದ್ದು, ಎದ್ದು ಬಿದ್ದು ನೀರು ಖಾಲಿ‌ ಮಾಡಿಸಲು ಮಾಡಲು ಮುಂದಾಗಿದ್ದರು. ದೊಡ್ಡ ದೊಡ್ಡ ಮೋಟಾರುಗಳ ಮೂಲಕ ಲೇಔಟ್​ನಿಂದ ನೀರು ಹೊರ ಹಾಕ್ತಿದ್ದಾರೆ. ಬಿಬಿಎಂಪಿ ಬಿಡಬ್ಲೂಎಸ್ಎಸ್ಬಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಏರಿಯಾ ಮುಂಭಾದಲ್ಲಿ ತುಂಬಿದ್ದ ನೀರನ್ನು ಖಾಲಿ ಮಾಡಲಾಗಿದೆ. ಒಳಗಿನ ಕ್ರಾಸ್​ಗಳಲ್ಲಿ ಇನ್ನೂ ಎರಡರಿಂದ ಮೂರು ಅಡಿಗಳಷ್ಟು ನೀರು ನಿಂತಿದೆ. ಆ ನೀರನ್ನು ಖಾಲಿ ಮಾಡಲು ವಾಟರ್ ಮೋಟಾರು ಮೂಲಕ ಹೊರ ಹಾಕಲು ಮುಂದಾಗಿದ್ದಾರೆ. ಇದನ್ನು ಮೊದಲೇ ಮಾಡಿದ್ರೆ ನೀರು ಖಾಲಿ ಆಗ್ತಿತ್ತು. ಆದರೆ ಅದನ್ನು ಮಾಡಿಲ್ಲ ಈಗ ಸಿಎಂ ಬರ್ತಾರೆ ಎಂದು ಮೋಟಾರು ಮೂಲಕ ನೀರು ಖಾಲಿ ಮಾಡಿಸ್ತಿದ್ದಾರೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

ಬಿಬಿಎಂಪಿ, ಜಲಮಂಡಳಿ ಅಧಿಕಾರಿಗಳ ವಿರುದ್ಧ ಸಂತ್ರಸ್ತರು ಗರಂ ಆಗಿದ್ದು, ನಮ್ಮ ಮನೆ ಬಳಿ ಇನ್ನೂ 2 ಅಡಿ ಎತ್ತರಕ್ಕೆ ನೀರು ನಿಂತಿದೆ. ನಾವಿನ್ನೂ ತಿಂಡಿ ತಿಂದಿಲ್ಲ, ಕುಡಿಯಲು ನೀರಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ, ಮೊನ್ನೆ ಯಂತ್ರಗಳನ್ನು ತಂದಿದ್ದರೆ ನೀರು ಖಾಲಿ ಆಗುತ್ತಿತ್ತು. ಮನೆಯಿಂದ ಹೊರಬರಲು ಆಗ್ತಿಲ್ಲ, ಕೆಲಸಕ್ಕೆ ಹೋಗುವುದು ಹೇಗೆ? ಸಿಎಂ ಬಳಿಗೆ ಜನರನ್ನು ಬಿಡದೆ ಅಧಿಕಾರಿಗಳು ಬ್ಯಾರಿಕೇಡ್​ ಹಾಕಿದ್ದಾರೆ. ಏರಿಯಾದಿಂದ ಜನರು ಹೊರಬರದಂತೆ ತಡೆಯಲು ಪ್ರಯತ್ನ ಮಾಡಲಾಗಿದೆ. ಪೊಲೀಸರು, ಅಧಿಕಾರಿಗಳ ನಡೆಯನ್ನು ನಿವಾಸಿಗಳು ಖಂಡಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​