AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿಬಿಎಂಪಿ ಇ ಖಾತಾ ಪಡೆಯಲು ಸುಸ್ತಾದವರಿಗೆ ಪಾಲಿಕೆ ಗುಡ್ ನ್ಯೂಸ್

ಬೆಂಗಳೂರಿನ ಬಿಬಿಎಂಪಿ ಇ ಖಾತಾ ಪಡೆಯಲು ಸುಸ್ತಾದವರಿಗೆ ಪಾಲಿಕೆ ಶುಭ ಸುದ್ದಿ ಕೊಟ್ಟಿದೆ. ಇ ಖಾತಾ ಮಾಡಿಸಲು ಸೈಬರ್​ಗಳಿಗೆ ಹೋಗಿ ಗಂಟೆಗಟ್ಟಲೇ ಕಾದು ಸುಸ್ತಾದವರಿಗೆ ಪಾಲಿಕೆ ಬೇರೊಂದು ಆಯ್ಕೆ ಕೊಟ್ಟಿದೆ. ಸದ್ಯ ಬಿಬಿಎಂಪಿಯ ಕಚೇರಿಗಳಲ್ಲಿ ಹಾಗೂ ವೆಬ್ ಸೈಟ್​​ಗಳಲ್ಲಿ ಇ ಖಾತಾ ಮಾಡಿಸುತ್ತಿದ್ದವರು, ಇನ್ಮುಂದೆ ಬೆಂಗಳೂರು ಒನ್ ನಾಗರೀಕ ಕೇಂದ್ರಗಳಲ್ಲಿ ಕೂಡ ಇ-ಖಾತಾ ತೆರೆಯಲು ಪಾಲಿಕೆ ಹಸಿರು ನಿಶಾನೆ ತೋರಿದೆ.

ಬೆಂಗಳೂರು: ಬಿಬಿಎಂಪಿ ಇ ಖಾತಾ ಪಡೆಯಲು ಸುಸ್ತಾದವರಿಗೆ ಪಾಲಿಕೆ ಗುಡ್ ನ್ಯೂಸ್
ಬಿಬಿಎಂಪಿ ಇ ಖಾತಾ ಪಡೆಯಲು ಸುಸ್ತಾದವರಿಗೆ ಪಾಲಿಕೆ ಗುಡ್ ನ್ಯೂಸ್
ಶಾಂತಮೂರ್ತಿ
| Edited By: |

Updated on:Nov 12, 2024 | 10:13 AM

Share

ಬೆಂಗಳೂರು, ನವೆಂಬರ್ 12: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯುವವರಿಗೆ ಪಾಲಿಕೆ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೇ ವೆಬ್ ಸೈಟ್​ಗಳ ಮೂಲಕ ಇ-ಖಾತಾ ಪಡೆಯುವುದಕ್ಕೂ ಅವಕಾಶ ನೀಡಲಾಗಿತ್ತು. ಆದರೆ ಕೆಲ ಸೈಬರ್​​ಗಳಲ್ಲಿ ಮನಬಂದಂತೆ ಹಣ ವಸೂಲಿ ಮಾಡುತ್ತಿರುವ ದೂರುಗಳು ಕೇಳಿಬಂದ ಬೆನ್ನಲ್ಲೆ ಬಿಬಿಎಂಪಿ ಇದೀಗ ಹೊಸ ಯೋಜನೆ ಹಾಕಿಕೊಂಡಿದೆ. ಈಗಾಗಲೇ ಬಿಬಿಎಂಪಿ ಕಚೇರಿಗಳಲ್ಲಿ ಇ-ಖಾತಾಗೆ ಕೌಂಟರ್ ತೆರೆಯಲು ಸೂಚಿಸಿದ್ದ ಪಾಲಿಕೆ, ಇದೀಗ ಬೆಂಗಳೂರು ಒನ್ ನಾಗರೀಕ ಕೇಂದ್ರಗಳಲ್ಲೂ ಇ-ಖಾತಾ ಪಡೆಯಲು ಅವಕಾಶ ಕಲ್ಪಿಸಿಕೊಟ್ಟಿದೆ

ಇ-ಖಾತಾ ಬಗ್ಗೆ ಈಗಾಗಲೇ ಬೆಂಗಳೂರು ಒನ್ ಸಿಬ್ಬಂದಿಗೆ ತರಬೇತಿ ನೀಡಿರುವ ಪಾಲಿಕೆ, ಸದ್ಯ ಇ-ಖಾತಾ ಮಾಡಿಕೊಡಲು 45 ರೂಪಾಯಿ ದರ ನಿಗದಿ ಮಾಡಿದೆ. ಬೇಕಾಬಿಟ್ಟಿ ಹಣ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕಲು ಈ ಪ್ಲಾನ್ ಮಾಡಿರುವ ಬಿಬಿಎಂಪಿ, ಇದೀಗ ಜನರು ತಮ್ಮ ಹತ್ತಿರದ ಬೆಂಗಳೂರು ಒನ್ ಕೇಂದ್ರಗಳಲ್ಲಿ ದಾಖಲೆಗಳನ್ನು ಸಲ್ಲಿಸಿ ಶೀಘ್ರವಾಗಿ ಇ-ಖಾತಾ ಪಡೆಯಲು ಅವಕಾಶ ಕಲ್ಪಿಸಿಕೊಟ್ಟಿದೆ.

ಇದನ್ನೂ ಓದಿ: ಇನ್ಮುಂದೆ ಇ-ಖಾತಾ ಪಡೆಯುವುದು ಬಲು ಸುಲಭ: ಇಲ್ಲಿದೆ ಹಂತ ಹಂತದ ಮಾಹಿತಿ

ಇ ಖಾತಾ ಪಡೆಯುವುದು ಹೇಗೆ?

ನಾಗರೀಕರು ಇ-ಖಾತಾವನ್ನು ಹೇಗೆ ಪಡೆಯಬೇಕು ಎಂಬ ವಿಡಿಯೋ ಬಿಡುಗಡೆ ಮಾಡಿರುವ ಪಾಲಿಕೆ, ಈ ವಿಡಿಯೋ ನೋಡಿಕೊಂಡು ಸುಲಭವಾಗಿ ಅಪ್ ಲೋಡ್ ಮಾಡುವುದಕ್ಕೆ ನೆರವಾಗಲು ಹೊರಟಿದೆ. ಸದ್ಯ ಪಾಲಿಕೆಯ ಯೂಟ್ಯೂಬ್ ಚಾನೆಲ್​ನಲ್ಲಿ ಕನ್ನಡ ಹಾಗೂ ಇಂಗ್ಲೀಷ್​ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಆ ಮೂಲಕ ಇ-ಖಾತಾ ಬಗ್ಗೆ ಜನರಿಗಿರುವ ಗೊಂದಲಗಳನ್ನು ನಿವಾರಿಸಲು ಪಾಲಿಕೆ ಮುಂದಾಗಿದೆ.

ಇದನ್ನೂ ಓದಿ: ಆನ್​ಲೈನ್​ನಲ್ಲಿ ಬಿಬಿಎಂಪಿ ಇ ಖಾತಾ ಪಡೆಯವುದು ಹೇಗೆ? ಇಲ್ಲಿದೆ ಸರಳ ಮಾರ್ಗ !

ಒಟ್ಟಿನಲ್ಲಿ ವಲಯವಾರು ಸಹಾಯವಾಣಿ, ಪಾಲಿಕೆ ಕಚೇರಿಗಳಲ್ಲಿ ನೆರವು ಕೇಂದ್ರಗಳು ಹೀಗೆ ಹಲವು ಪ್ಲಾನ್​ಗಳ ಮೂಲಕ ಇ-ಖಾತಾ ಪಡೆಯುವುದನ್ನು ಸುಲಭ ಮಾಡಲು ಹೊರಟಿದ್ದ ಪಾಲಿಕೆ, ಇದೀಗ ಬೆಂಗಳೂರು ಒನ್ ಕೇಂದ್ರದಲ್ಲೂ ಇ-ಖಾತಾ ಪಡೆಯಲು ಅವಕಾಶ ಕೊಟ್ಟಿರುವುದು ನಗರವಾಸಿಗಳಿಗೆ ಸಂತಸ ತಂದಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:40 am, Tue, 12 November 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ