AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಅಮಾನತು ಶಿಕ್ಷೆ, ಬಿಬಿಎಂಪಿಯ ಇಇ ಎಂ.ಜಿ.ನಾಗರಾಜು ಅಮಾನತು

ರಸ್ತೆ ಗುಂಡಿಗಳನ್ನ ಮುಚ್ಚಲು ಸೂಚಿಸಿದ್ರು ಸಹ ರಸ್ತೆ ಗುಂಡಿಗಳನ್ನ ಮುಚ್ಚದೆ ಕರ್ತವ್ಯ ಲೋಪ ಎಸಗಿದ ಕಾರಣ ಹಾಗೂ ಸಾರ್ವಜನಿಕರ ಹಿತಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಹಿನ್ನೆಲೆ ನಾಗರಾಜು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಆದೇಶ ಹೊರಡಿಸಿದ್ದಾರೆ.

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಅಮಾನತು ಶಿಕ್ಷೆ, ಬಿಬಿಎಂಪಿಯ ಇಇ ಎಂ.ಜಿ.ನಾಗರಾಜು ಅಮಾನತು
ಎಂ.ಜಿ.ನಾಗರಾಜು
TV9 Web
| Edited By: |

Updated on: Nov 09, 2021 | 7:41 AM

Share

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಬಿಬಿಎಂಪಿ ಅಮಾನತುಗೊಳಿಸಿ ಶಿಕ್ಷೆ ನೀಡಿದೆ. ಇದೇ ಮೊದಲ ಬಾರಿಗೆ ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರ ಅಮಾನತುಗೊಳಿಸಿ ಆದೇಶ ನೀಡಲಾಗಿದೆ.

ಬಿಬಿಎಂಪಿ ಪೂರ್ವ ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಇಇ ಎಂ.ಜಿ.ನಾಗರಾಜು ಅಮಾನತುಗೊಳಿಸಲಾಗಿದೆ. ರಸ್ತೆ ಗುಂಡಿಗಳನ್ನ ಮುಚ್ಚಲು ಸೂಚಿಸಿದ್ರು ಸಹ ರಸ್ತೆ ಗುಂಡಿಗಳನ್ನ ಮುಚ್ಚದೆ ಕರ್ತವ್ಯ ಲೋಪ ಎಸಗಿದ ಕಾರಣ ಹಾಗೂ ಸಾರ್ವಜನಿಕರ ಹಿತಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಹಿನ್ನೆಲೆ ನಾಗರಾಜು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಆದೇಶ ಹೊರಡಿಸಿದ್ದಾರೆ.

ಹೇಳಿದ್ದು 2 ಸಾವಿರ ರಸ್ತೆ ಗುಂಡಿ, ಆದ್ರೆ ಮುಚ್ಚಿದ್ದು 31 ಸಾವಿರ ಗುತ್ತಿಗೆದಾರನದ್ದು ಒಂದು ಲೆಕ್ಕವಾದ್ರೆ ಬಿಬಿಎಂಪಿದೊಂದು ಲೆಕ್ಕವಾಗಿದೆ. ಈ ಎರಡು ಲೆಕ್ಕಾಚಾರಕ್ಕೆ ಎಲ್ಲೂ ತಾಳೆಯೇ ಆಗುತ್ತಿಲ್ಲ. ಲೆಕ್ಕಾಚಾರದಲ್ಲಿ ಅಜಗಜಾಂತರ ಹೇಗೆ ಆಯಿತೆಂಬ ಪ್ರಶ್ನೆ ಉದ್ಭವಿಸಿದೆ. ನಗರದಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ, JMC ಕಂಪನಿಗೆ ಗುತ್ತಿಗೆ ನೀಡಿತ್ತು. ಹೀಗಾಗಿ 2 ತಿಂಗಳಲ್ಲಿ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದಾಗಿ JMC ಕಂಪನಿ ಲೆಕ್ಕ ನೀಡಿದೆ. ಆದ್ರೆ ಬೆಂಗಳೂರಿನಲ್ಲಿ ಕೇವಲ ಒಂದೆರಡು ಸಾವಿರ ರಸ್ತೆ ಗುಂಡಿಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಸದ್ಯ ಈಗ ಗುಂಡಿಗಳ ಲೆಕ್ಕಚಾರದಲ್ಲಿ ಗೊಂದಲ ಉಂಟಾಗಿದೆ.

JMC ಕಂಪನಿ ಆಗಸ್ಟ್ ತಿಂಗಳ ಅಂತ್ಯದಿಂದ ಗುಂಡಿ ಮುಚ್ಚುವ ಕಾರ್ಯ ಶುರು ಮಾಡಿದ್ದು ಈವರೆಗೆ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದಾಗಿ ಲೆಕ್ಕ ನೀಡಿದೆ. ಆದ್ರೆ ಬಿಬಿಎಂಪಿ ಹೇಳಿರುವುದು ಕೇವಲ ಒಂದೆರಡು ಸಾವಿರ ಲೆಕ್ಕ. ನಗರದಲ್ಲಿ 1-2 ಸಾವಿರ ರಸ್ತೆ ಗುಂಡಿ ಇದೆ ಎಂದು ಸೆಪ್ಟೆಂಬರ್‌ನಲ್ಲಿ BBMP ಲೆಕ್ಕ ಕೊಟ್ಟಿತ್ತು. ಬಿಬಿಎಂಪಿ ಪ್ರಕಾರ ರಸ್ತೆ ಗುಂಡಿ ಇರೋದು 1-2 ಸಾವಿರ. ಆದ್ರೆ ಗುತ್ತಿಗೆದಾರ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದು ಹೇಗೆ? ರಸ್ತೆ ಗುಂಡಿ ಲೆಕ್ಕ ತಪ್ಪಾಗಿ ನೀಡುತ್ತಿರುವುದು ಯಾರೆಂಬ ಪ್ರಶ್ನೆ ಎದುರಾಗಿದೆ. ರಸ್ತೆ ಗುಂಡಿ ಮುಚ್ಚಲು 760 ಲೋಡ್ ಟಾರ್ ಬಳಸಿದ್ದ ಲೆಕ್ಕ ನೀಡಲಾಗಿದ್ದು ಗುತ್ತಿಗೆದಾರನ ಬಳಿ 7 ಕೋಟಿ ರೂಪಾಯಿ ಬಿಲ್ ಲೆಕ್ಕ ಇದೆ.

ಇದನ್ನೂ ಓದಿ: ರಸ್ತೆ, ಪಾರ್ಕ್​, ಮೈದಾನಕ್ಕೆ ಪುನೀತ್​ ಹೆಸರು; ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಹೇಳೋದೇನು?

ಲೆಕ್ಕಚಾರದಲ್ಲಿ ಗೊಂದಲ! ಹೇಳಿದ್ದು 2 ಸಾವಿರ ರಸ್ತೆ ಗುಂಡಿ, ಆದ್ರೆ ಮುಚ್ಚಿದ್ದು 31 ಸಾವಿರ; 7 ಕೋಟಿ ಬಿಲ್ ನೋಡಿ ತಲೆ ಮೇಲೆ ಕೈ ಹೊತ್ತ ಬಿಬಿಎಂಪಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್