AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಅಮಾನತು ಶಿಕ್ಷೆ, ಬಿಬಿಎಂಪಿಯ ಇಇ ಎಂ.ಜಿ.ನಾಗರಾಜು ಅಮಾನತು

ರಸ್ತೆ ಗುಂಡಿಗಳನ್ನ ಮುಚ್ಚಲು ಸೂಚಿಸಿದ್ರು ಸಹ ರಸ್ತೆ ಗುಂಡಿಗಳನ್ನ ಮುಚ್ಚದೆ ಕರ್ತವ್ಯ ಲೋಪ ಎಸಗಿದ ಕಾರಣ ಹಾಗೂ ಸಾರ್ವಜನಿಕರ ಹಿತಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಹಿನ್ನೆಲೆ ನಾಗರಾಜು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಆದೇಶ ಹೊರಡಿಸಿದ್ದಾರೆ.

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಅಮಾನತು ಶಿಕ್ಷೆ, ಬಿಬಿಎಂಪಿಯ ಇಇ ಎಂ.ಜಿ.ನಾಗರಾಜು ಅಮಾನತು
ಎಂ.ಜಿ.ನಾಗರಾಜು
TV9 Web
| Updated By: ಆಯೇಷಾ ಬಾನು|

Updated on: Nov 09, 2021 | 7:41 AM

Share

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಬಿಬಿಎಂಪಿ ಅಮಾನತುಗೊಳಿಸಿ ಶಿಕ್ಷೆ ನೀಡಿದೆ. ಇದೇ ಮೊದಲ ಬಾರಿಗೆ ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರ ಅಮಾನತುಗೊಳಿಸಿ ಆದೇಶ ನೀಡಲಾಗಿದೆ.

ಬಿಬಿಎಂಪಿ ಪೂರ್ವ ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಇಇ ಎಂ.ಜಿ.ನಾಗರಾಜು ಅಮಾನತುಗೊಳಿಸಲಾಗಿದೆ. ರಸ್ತೆ ಗುಂಡಿಗಳನ್ನ ಮುಚ್ಚಲು ಸೂಚಿಸಿದ್ರು ಸಹ ರಸ್ತೆ ಗುಂಡಿಗಳನ್ನ ಮುಚ್ಚದೆ ಕರ್ತವ್ಯ ಲೋಪ ಎಸಗಿದ ಕಾರಣ ಹಾಗೂ ಸಾರ್ವಜನಿಕರ ಹಿತಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಹಿನ್ನೆಲೆ ನಾಗರಾಜು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಆದೇಶ ಹೊರಡಿಸಿದ್ದಾರೆ.

ಹೇಳಿದ್ದು 2 ಸಾವಿರ ರಸ್ತೆ ಗುಂಡಿ, ಆದ್ರೆ ಮುಚ್ಚಿದ್ದು 31 ಸಾವಿರ ಗುತ್ತಿಗೆದಾರನದ್ದು ಒಂದು ಲೆಕ್ಕವಾದ್ರೆ ಬಿಬಿಎಂಪಿದೊಂದು ಲೆಕ್ಕವಾಗಿದೆ. ಈ ಎರಡು ಲೆಕ್ಕಾಚಾರಕ್ಕೆ ಎಲ್ಲೂ ತಾಳೆಯೇ ಆಗುತ್ತಿಲ್ಲ. ಲೆಕ್ಕಾಚಾರದಲ್ಲಿ ಅಜಗಜಾಂತರ ಹೇಗೆ ಆಯಿತೆಂಬ ಪ್ರಶ್ನೆ ಉದ್ಭವಿಸಿದೆ. ನಗರದಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ, JMC ಕಂಪನಿಗೆ ಗುತ್ತಿಗೆ ನೀಡಿತ್ತು. ಹೀಗಾಗಿ 2 ತಿಂಗಳಲ್ಲಿ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದಾಗಿ JMC ಕಂಪನಿ ಲೆಕ್ಕ ನೀಡಿದೆ. ಆದ್ರೆ ಬೆಂಗಳೂರಿನಲ್ಲಿ ಕೇವಲ ಒಂದೆರಡು ಸಾವಿರ ರಸ್ತೆ ಗುಂಡಿಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಸದ್ಯ ಈಗ ಗುಂಡಿಗಳ ಲೆಕ್ಕಚಾರದಲ್ಲಿ ಗೊಂದಲ ಉಂಟಾಗಿದೆ.

JMC ಕಂಪನಿ ಆಗಸ್ಟ್ ತಿಂಗಳ ಅಂತ್ಯದಿಂದ ಗುಂಡಿ ಮುಚ್ಚುವ ಕಾರ್ಯ ಶುರು ಮಾಡಿದ್ದು ಈವರೆಗೆ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದಾಗಿ ಲೆಕ್ಕ ನೀಡಿದೆ. ಆದ್ರೆ ಬಿಬಿಎಂಪಿ ಹೇಳಿರುವುದು ಕೇವಲ ಒಂದೆರಡು ಸಾವಿರ ಲೆಕ್ಕ. ನಗರದಲ್ಲಿ 1-2 ಸಾವಿರ ರಸ್ತೆ ಗುಂಡಿ ಇದೆ ಎಂದು ಸೆಪ್ಟೆಂಬರ್‌ನಲ್ಲಿ BBMP ಲೆಕ್ಕ ಕೊಟ್ಟಿತ್ತು. ಬಿಬಿಎಂಪಿ ಪ್ರಕಾರ ರಸ್ತೆ ಗುಂಡಿ ಇರೋದು 1-2 ಸಾವಿರ. ಆದ್ರೆ ಗುತ್ತಿಗೆದಾರ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದು ಹೇಗೆ? ರಸ್ತೆ ಗುಂಡಿ ಲೆಕ್ಕ ತಪ್ಪಾಗಿ ನೀಡುತ್ತಿರುವುದು ಯಾರೆಂಬ ಪ್ರಶ್ನೆ ಎದುರಾಗಿದೆ. ರಸ್ತೆ ಗುಂಡಿ ಮುಚ್ಚಲು 760 ಲೋಡ್ ಟಾರ್ ಬಳಸಿದ್ದ ಲೆಕ್ಕ ನೀಡಲಾಗಿದ್ದು ಗುತ್ತಿಗೆದಾರನ ಬಳಿ 7 ಕೋಟಿ ರೂಪಾಯಿ ಬಿಲ್ ಲೆಕ್ಕ ಇದೆ.

ಇದನ್ನೂ ಓದಿ: ರಸ್ತೆ, ಪಾರ್ಕ್​, ಮೈದಾನಕ್ಕೆ ಪುನೀತ್​ ಹೆಸರು; ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಹೇಳೋದೇನು?

ಲೆಕ್ಕಚಾರದಲ್ಲಿ ಗೊಂದಲ! ಹೇಳಿದ್ದು 2 ಸಾವಿರ ರಸ್ತೆ ಗುಂಡಿ, ಆದ್ರೆ ಮುಚ್ಚಿದ್ದು 31 ಸಾವಿರ; 7 ಕೋಟಿ ಬಿಲ್ ನೋಡಿ ತಲೆ ಮೇಲೆ ಕೈ ಹೊತ್ತ ಬಿಬಿಎಂಪಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!