AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಅಮಾನತು ಶಿಕ್ಷೆ, ಬಿಬಿಎಂಪಿಯ ಇಇ ಎಂ.ಜಿ.ನಾಗರಾಜು ಅಮಾನತು

ರಸ್ತೆ ಗುಂಡಿಗಳನ್ನ ಮುಚ್ಚಲು ಸೂಚಿಸಿದ್ರು ಸಹ ರಸ್ತೆ ಗುಂಡಿಗಳನ್ನ ಮುಚ್ಚದೆ ಕರ್ತವ್ಯ ಲೋಪ ಎಸಗಿದ ಕಾರಣ ಹಾಗೂ ಸಾರ್ವಜನಿಕರ ಹಿತಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಹಿನ್ನೆಲೆ ನಾಗರಾಜು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಆದೇಶ ಹೊರಡಿಸಿದ್ದಾರೆ.

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಅಮಾನತು ಶಿಕ್ಷೆ, ಬಿಬಿಎಂಪಿಯ ಇಇ ಎಂ.ಜಿ.ನಾಗರಾಜು ಅಮಾನತು
ಎಂ.ಜಿ.ನಾಗರಾಜು
TV9 Web
| Edited By: |

Updated on: Nov 09, 2021 | 7:41 AM

Share

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಬಿಬಿಎಂಪಿ ಅಮಾನತುಗೊಳಿಸಿ ಶಿಕ್ಷೆ ನೀಡಿದೆ. ಇದೇ ಮೊದಲ ಬಾರಿಗೆ ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರ ಅಮಾನತುಗೊಳಿಸಿ ಆದೇಶ ನೀಡಲಾಗಿದೆ.

ಬಿಬಿಎಂಪಿ ಪೂರ್ವ ವಲಯದ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಇಇ ಎಂ.ಜಿ.ನಾಗರಾಜು ಅಮಾನತುಗೊಳಿಸಲಾಗಿದೆ. ರಸ್ತೆ ಗುಂಡಿಗಳನ್ನ ಮುಚ್ಚಲು ಸೂಚಿಸಿದ್ರು ಸಹ ರಸ್ತೆ ಗುಂಡಿಗಳನ್ನ ಮುಚ್ಚದೆ ಕರ್ತವ್ಯ ಲೋಪ ಎಸಗಿದ ಕಾರಣ ಹಾಗೂ ಸಾರ್ವಜನಿಕರ ಹಿತಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಹಿನ್ನೆಲೆ ನಾಗರಾಜು ಅಮಾನತು ಮಾಡಿ ಬಿಬಿಎಂಪಿ ವಿಶೇಷ ಆಯುಕ್ತ ಆದೇಶ ಹೊರಡಿಸಿದ್ದಾರೆ.

ಹೇಳಿದ್ದು 2 ಸಾವಿರ ರಸ್ತೆ ಗುಂಡಿ, ಆದ್ರೆ ಮುಚ್ಚಿದ್ದು 31 ಸಾವಿರ ಗುತ್ತಿಗೆದಾರನದ್ದು ಒಂದು ಲೆಕ್ಕವಾದ್ರೆ ಬಿಬಿಎಂಪಿದೊಂದು ಲೆಕ್ಕವಾಗಿದೆ. ಈ ಎರಡು ಲೆಕ್ಕಾಚಾರಕ್ಕೆ ಎಲ್ಲೂ ತಾಳೆಯೇ ಆಗುತ್ತಿಲ್ಲ. ಲೆಕ್ಕಾಚಾರದಲ್ಲಿ ಅಜಗಜಾಂತರ ಹೇಗೆ ಆಯಿತೆಂಬ ಪ್ರಶ್ನೆ ಉದ್ಭವಿಸಿದೆ. ನಗರದಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ, JMC ಕಂಪನಿಗೆ ಗುತ್ತಿಗೆ ನೀಡಿತ್ತು. ಹೀಗಾಗಿ 2 ತಿಂಗಳಲ್ಲಿ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದಾಗಿ JMC ಕಂಪನಿ ಲೆಕ್ಕ ನೀಡಿದೆ. ಆದ್ರೆ ಬೆಂಗಳೂರಿನಲ್ಲಿ ಕೇವಲ ಒಂದೆರಡು ಸಾವಿರ ರಸ್ತೆ ಗುಂಡಿಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಸದ್ಯ ಈಗ ಗುಂಡಿಗಳ ಲೆಕ್ಕಚಾರದಲ್ಲಿ ಗೊಂದಲ ಉಂಟಾಗಿದೆ.

JMC ಕಂಪನಿ ಆಗಸ್ಟ್ ತಿಂಗಳ ಅಂತ್ಯದಿಂದ ಗುಂಡಿ ಮುಚ್ಚುವ ಕಾರ್ಯ ಶುರು ಮಾಡಿದ್ದು ಈವರೆಗೆ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದಾಗಿ ಲೆಕ್ಕ ನೀಡಿದೆ. ಆದ್ರೆ ಬಿಬಿಎಂಪಿ ಹೇಳಿರುವುದು ಕೇವಲ ಒಂದೆರಡು ಸಾವಿರ ಲೆಕ್ಕ. ನಗರದಲ್ಲಿ 1-2 ಸಾವಿರ ರಸ್ತೆ ಗುಂಡಿ ಇದೆ ಎಂದು ಸೆಪ್ಟೆಂಬರ್‌ನಲ್ಲಿ BBMP ಲೆಕ್ಕ ಕೊಟ್ಟಿತ್ತು. ಬಿಬಿಎಂಪಿ ಪ್ರಕಾರ ರಸ್ತೆ ಗುಂಡಿ ಇರೋದು 1-2 ಸಾವಿರ. ಆದ್ರೆ ಗುತ್ತಿಗೆದಾರ 31 ಸಾವಿರ ರಸ್ತೆ ಗುಂಡಿ ಮುಚ್ಚಿದ್ದು ಹೇಗೆ? ರಸ್ತೆ ಗುಂಡಿ ಲೆಕ್ಕ ತಪ್ಪಾಗಿ ನೀಡುತ್ತಿರುವುದು ಯಾರೆಂಬ ಪ್ರಶ್ನೆ ಎದುರಾಗಿದೆ. ರಸ್ತೆ ಗುಂಡಿ ಮುಚ್ಚಲು 760 ಲೋಡ್ ಟಾರ್ ಬಳಸಿದ್ದ ಲೆಕ್ಕ ನೀಡಲಾಗಿದ್ದು ಗುತ್ತಿಗೆದಾರನ ಬಳಿ 7 ಕೋಟಿ ರೂಪಾಯಿ ಬಿಲ್ ಲೆಕ್ಕ ಇದೆ.

ಇದನ್ನೂ ಓದಿ: ರಸ್ತೆ, ಪಾರ್ಕ್​, ಮೈದಾನಕ್ಕೆ ಪುನೀತ್​ ಹೆಸರು; ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಹೇಳೋದೇನು?

ಲೆಕ್ಕಚಾರದಲ್ಲಿ ಗೊಂದಲ! ಹೇಳಿದ್ದು 2 ಸಾವಿರ ರಸ್ತೆ ಗುಂಡಿ, ಆದ್ರೆ ಮುಚ್ಚಿದ್ದು 31 ಸಾವಿರ; 7 ಕೋಟಿ ಬಿಲ್ ನೋಡಿ ತಲೆ ಮೇಲೆ ಕೈ ಹೊತ್ತ ಬಿಬಿಎಂಪಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!