ಬಿಬಿಎಂಪಿ ಕಾಮಗಾರಿ ತನಿಖೆಗೆ ರಚಿಸಿದ್ದ ಎಸ್​ಐಟಿ ಹಿಂಪಡೆದ ರಾಜ್ಯ ಸರ್ಕಾರ

ನಾಲ್ಕು ಎಸ್ಐಟಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆ ಬಿಬಿಎಂಪಿ ಕಾಮಗಾರಿ ತನಿಖೆಗೆ ರಚಿಸಿದ್ದ ಎಸ್​ಐಟಿ ತಂಡಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. SIT ಬದಲು ನಾಗಮೋಹನದಾಸ್ ಕಮಿಟಿಯಿಂದ ಮಾತ್ರ ತನಿಖೆ ನಡೆಸಲು ಸೂಚನೆ ನೀಡಲಾಗಿದೆ.

ಬಿಬಿಎಂಪಿ ಕಾಮಗಾರಿ ತನಿಖೆಗೆ ರಚಿಸಿದ್ದ ಎಸ್​ಐಟಿ ಹಿಂಪಡೆದ ರಾಜ್ಯ ಸರ್ಕಾರ
ಬಿಬಿಎಂಪಿ
Edited By:

Updated on: Dec 18, 2023 | 3:33 PM

ಬೆಂಗಳೂರು, ಡಿಸೆಂಬರ್​​ 18: ನಾಲ್ಕು ಎಸ್ಐಟಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆ ಬಿಬಿಎಂಪಿ (BBMP) ಕಾಮಗಾರಿ ತನಿಖೆಗೆ ರಚಿಸಿದ್ದ ಎಸ್​ಐಟಿ ತಂಡಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. SIT ಬದಲು ನಾಗಮೋಹನದಾಸ್ ಕಮಿಟಿಯಿಂದ ಮಾತ್ರ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. 4 SIT ತನಿಖಾ ತಂಡ ಸಂಗ್ರಹಿಸಿದ ಮಾಹಿತಿಯನ್ನು ನಾಗಮೋಹನದಾಸ್ ಆಯೋಗಕ್ಕೆ ಮಾಹಿತಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಆಗಸ್ಟ್ ತಿಂಗಳಿನಲ್ಲಿ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿತ್ತು. 2019ರಿಂದ 2023ರವರೆಗಿನ ಬಿಬಿಎಂಪಿ ವ್ಯಾಪ್ತಿಯ ಯೋಜನೆ, ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾಗಿದ್ದ ಅಕ್ರಮದ ಬಗ್ಗೆ ತನಿಖೆಗೆ ವಿಶೇಷ ತನಿಖಾ ತಂಡವನ್ನು ಸರ್ಕಾರ ರಚಿಸಿತ್ತು. ಸದ್ಯ ಹೈಕೋರ್ಟ್​​ನಲ್ಲಿ ಹಿನ್ನಡೆ ಹಿನ್ನೆಲೆ SIT ತಂಡ ಹಿಂಪಡೆದು ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಆಸ್ತಿ ತೆರಿಗೆ ವಸೂಲಿಗೆ ಹೊಸ ಪ್ಲಾನ್; ಚರಾಸ್ತಿ ಜಪ್ತಿ ಮಾಡಿ ಹರಾಜು ಹಾಕಲು ಮುಂದಾದ ಬಿಬಿಎಂಪಿ

ಟೆಂಡರ್ ಪ್ರಕ್ರಿಯೆ ನಿಯಮಗಳ ಉಲ್ಲಂಘನೆ, ನಿರ್ದಿಷ್ಟ ಗುತ್ತಿಗೆದಾರರನ್ನು ಬಿಟ್ಟು ನಕಲಿ ಗುತ್ತಿಗೆದಾರರಿಗೆ ಹಣ ಪಾವತಿ ಆರೋಪ, ನಕಲಿ ಬಿಲ್ ಸೃಷ್ಟಿ, ಕಾಮಗಾರಿ ನಡೆಸದೆಯೇ ಬಿಲ್‌ ಪಾವತಿ, ಗುಣಮಟ್ಟ ಕಾಪಾಡದಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿದ್ದರಿಂದ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚಿಸಲಾಗಿತ್ತು.

ಟೆಂಡರ್ ಆಗದಿದ್ದರೂ ಕಾಮಗಾರಿ

ಅಕ್ರಮಗಳ ಆರೋಪದ ಬಗ್ಗೆ ಮಾತನಾಡಿದ ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಆರೋಪದ ಬಗ್ಗೆ ತನಿಖೆ ಮಾಡಿಸೋಣ. ನನ್ನ ವಿರುದ್ಧ ತನಿಖೆ ಮಾಡಿಸಬೇಕೆಂದು ಡಾ.ಅಶ್ವತ್ಥ ನಾರಾಯಣ ಹೇಳಿದ್ದರು. ಮುನಿರತ್ನ ವಿರುದ್ಧದ ಆರೋಪ ಬಗ್ಗೆ ತನಿಖೆ ಮಾಡಿಸಿ ಎಂದಿದ್ದರು. ಬಿಬಿಎಂಪಿಯಲ್ಲಿ ನಡೆದ ಅಕ್ರಮಗಳ ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಕಾಮಗಾರಿ ನಡೆಸದೇ 118 ಕೋಟಿ ರೂ. ನಕಲಿ ಬಿಲ್ ಸೃಷ್ಟಿ: 11 ಅಧಿಕಾರಿಗಳು ಅಮಾನತು

ಬಿಬಿಎಂಪಿಯಲ್ಲಿ ಕೆಲಸ ಯಾರು ಕೊಟ್ಟರು ಗೊತ್ತಿಲ್ಲ, ಟೆಂಡರ್ ಆಗಿಲ್ಲ ಆದರೂ ಕಾಮಗಾರಿ ಮಾಡಿದ್ದಾರೆ. 25 ದಿನಕ್ಕೆ, 15 ದಿನಕ್ಕೆ ಬಿಲ್ ಆಗಿಡುತ್ತದಯೇ? ಹದಿನೈದೇ ದಿನಕ್ಕೆ ಇಲ್ಲಿ ಕೆಲಸ ಆಗಿಬಿಡತ್ತಾ? ಈ ಅನುಮಾನ ಹಿನ್ನೆಲೆ ಪರಿಶೀಲನೆಗೆ ಅಧಿಕಾರಿಗಳನ್ನು ಹಾಕಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us