Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಚ್ಛ ಬೆಂಗಳೂರಿಗಾಗಿ ವಿದೇಶಿ ಕಸ ಗುಡಿಸುವ ಯಂತ್ರ ಬಾಡಿಗೆ ಪಡೆಯಲು ಮುಂದಾದ ಬಿಬಿಎಂಪಿ: ಕೋಟ್ಯಂತರ ಖರ್ಚು

ಬೆಂಗಳೂರನ್ನು ಸ್ವಚ್ಛ ನಗರ ಮಾಡುತ್ತೇವೆ ಎಂದು ಹೊರಟಿರುವ ಬಿಬಿಎಂಪಿ ಇದೀಗ ಹೊಸ ಯೋಜನೆ ಮೂಲಕ ರಾಜಧಾನಿಯ ರಸ್ತೆಗಳನ್ನು ಸ್ವಚ್ಛಗೊಳಿಸಲು ಮುಂದಾಗಿದೆ. ಬೆಂಗಳೂರಿನ ರಸ್ತೆಗಳನ್ನ ಸ್ವಚ್ಛಗೊಳಿಸಲು ವಿದೇಶಿ ಯಂತ್ರಗಳ ಮೊರೆಹೋಗಿರುವ ಪಾಲಿಕೆ ಬರೋಬ್ಬರಿ 764 ಕೋಟಿ ರೂಪಾಯಿ ವೆಚ್ಚದಲ್ಲಿ ಕಸ ಗುಡಿಸುವ ಯಂತ್ರಗಳನ್ನು ಬಾಡಿಗೆಗೆ ಪಡೆಯಲು ಸಿದ್ಧವಾಗಿದೆ. ಇತ್ತ ಪಾಲಿಕೆ ನಡೆಗೆ ಇದೀಗ ಜನರಿಂದ ಅಸಮಾಧಾನ ವ್ಯಕ್ತವಾಗುತ್ತಿದೆ.

ಸ್ವಚ್ಛ ಬೆಂಗಳೂರಿಗಾಗಿ ವಿದೇಶಿ ಕಸ ಗುಡಿಸುವ ಯಂತ್ರ ಬಾಡಿಗೆ ಪಡೆಯಲು ಮುಂದಾದ ಬಿಬಿಎಂಪಿ: ಕೋಟ್ಯಂತರ ಖರ್ಚು
ಬಿಬಿಎಂಪಿ ಸ್ವೀಪಿಂಗ್ ಮಷಿನ್​ಗಳು (ಸಂಗ್ರಹ ಚಿತ್ರ)
Follow us
ಶಾಂತಮೂರ್ತಿ
| Updated By: Ganapathi Sharma

Updated on: Feb 06, 2025 | 9:59 AM

ಬೆಂಗಳೂರು, ಫೆಬ್ರವರಿ 6: ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಸ್ವಚ್ಛಗೊಳಿಸಲು ಹೊಸದೊಂದು ಯೋಜನೆಗೆ ಮುಂದಾಗಿರುವ ಬಿಬಿಎಂಪಿ, ‘ಕ್ಲೀನ್ ಸಿಟಿ’ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಖರ್ಚುಮಾಡಿ ಸ್ವೀಪಿಂಗ್ ಮಷಿನ್​ಗಳನ್ನು (ಕಸಗುಡಿಸುವ ಯಂತ್ರಗಳು) ಬಳಸಿಕೊಳ್ಳಲು ಮುಂದಾಗಿದೆ. ಮುಂದಿನ ಏಳು ವರ್ಷಗಳಲ್ಲಿ ರಾಜಧಾನಿಯನ್ನು ಧೂಳುಮುಕ್ತ ನಗರ ಮಾಡುವ ಉದ್ದೇಶದೊಂದಿಗೆ 764 ಕೋಟಿ ರೂಪಾಯಿ ವೆಚ್ಚದಲ್ಲಿ 20 ಸ್ವೀಪಿಂಗ್ ಮಷಿನ್​ಗಳನ್ನು ಆಮದು ಮಾಡಿಕೊಳ್ಳಲು ಯೋಜನೆ ರೂಪಿಸುತ್ತಿದೆ. ಈ ಬಗ್ಗೆ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.

2024-25ರ ಬಜೆಟ್‌ನಲ್ಲಿ ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿಯಲ್ಲಿ ಕಸ ಗುಡಿಸುವ ಯಂತ್ರಗಳಿಗಾಗಿ 30 ಕೋಟಿ ರೂಪಾಯಿ ಹಣ ಮೀಸಲಿಡಲಾಗಿದೆ. ಮುಂದಿನ ವರ್ಷಗಳಲ್ಲಿ ಈ ಹಣದ ಪ್ರಮಾಣ 30 ರಿಂದ 60 ಕೋಟಿ ರೂಪಾಯಿಗಳಷ್ಟು ಅಧಿಕವಾಗಲಿದೆ ಅಂತಾ ಅಂದಾಜಿಸಲಾಗಿದೆ.

ವಿದೇಶಗಳಿಂದ ಸ್ವೀಪಿಂಗ್ ಮಷಿನ್ ಬಾಡಿಗೆಗೆ ಪಡೆಯಲು ಚಿಂತನೆ

ಸದ್ಯ 2017-18ನೇ ಸಾಲಿನಲ್ಲಿ 26 ಯಂತ್ರಗಳನ್ನು ಖರೀದಿಸಿದ್ದ ಪಾಲಿಕೆ, ಇದೀಗ ವಿದೇಶಿ ಯಂತ್ರಗಳನ್ನು ಬಾಡಿಗೆಗೆ ಪಡೆಯಲು ಹೊರಟಿದೆ. ಇದಕ್ಕೆ ನಗರವಾಸಿಗಳ ವಿರೋಧವೂ ವ್ಯಕ್ತವಾಗಿದೆ. ಈಗಾಗಲೇ ಇರುವ ಕಸ ಗುಡಿಸುವ ಯಂತ್ರಗಳನ್ನು ಸಮರ್ಪಕವಾಗಿ ಬಳಸುವಲ್ಲಿ ಪಾಲಿಕೆ ವಿಫಲವಾಗಿದೆ ಎಂದು ಆರೋಪಿಸಿರುವ ಸಾರ್ವಜನಿಕರು, ಇದು ಹಣ ದೋಚುವ ತಂತ್ರವಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಟಿಕೆಟ್ ರೋಲ್ ಕದ್ದು ತರಕಾರಿ ಅಂಗಡಿಗೆ ಮಾರಿರುವ ಕಿಲಾಡಿಗಳು: ತರಕಾರಿ ಬಿಲ್ ನೀಡಲು ಬಳಕೆ!

ಸದ್ಯ ರಸ್ತೆಗಳ ಕಸ ಗುಡಿಸಲು ಬಿಬಿಎಂಪಿಯಲ್ಲಿ 17,000 ಪೌರಕಾರ್ಮಿಕರಿದ್ದಾರೆ. ಆದರೆ, ಇದೀಗ ವಿದೇಶಿ ಯಂತ್ರಗಳನ್ನು ಬಾಡಿಗೆಗೆ ಪಡೆಯುವುದರಿಂದ ನಗರವು ಎಷ್ಟರ ಮಟ್ಟಿಗೆ ಸ್ವಚ್ಛವಾಗಿರಲಿದೆ ಎಂಬುದನ್ನು ಪಾಲಿಕೆ ಪ್ರಯೋಗ ನಡೆಸಬೇಕಿದೆ. ಆದರೆ ಫಾರಿನ್ ಮಷಿನ್​ಗಳು ರಾಜಧಾನಿಯ ರಸ್ತೆಗಳಿಗೆ ಹೊಂದುಕೊಳ್ಳುತ್ತದೆಯೋ ಇಲ್ಲವೇ ಎಂಬುದನ್ನು ಪರಾಮರ್ಶೆ ಮಾಡದೇ ಕೋಟಿ ಕೋಟಿ ಹಣ ಸುರಿಯಲು ಪಾಲಿಕೆ ಸಜ್ಜಾಗಿರುವುದಂತೂ ನಿಜ. ಬಿಬಿಎಂಪಿಯ ಈ ಹೊಸ ಪ್ಲಾನ್ ರಾಜಧಾನಿಯನ್ನು ಎಷ್ಟರಮಟ್ಟಿಗೆ ಸ್ವಚ್ಛ ನಗರವಾಗಿ ಮಾಡಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ