AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಮಳೆ ಅವಘಡ ತಪ್ಪಿಸಲು ಕಂಟ್ರೋಲ್ ರೂಮ್ ಸ್ಥಾಪನೆಗೆ ಮುಂದಾದ ಬಿಬಿಎಂಪಿ

ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಹಲವೆಡೆ ಮಹಾ ಮಳೆಯಿಂದ ಅನೇಕ ಅವಘಡಗಳು ಸಂಭವಿಸಿವೆ. ಹೀಗಾಗಿ BBMP ನಗರದಾದ್ಯಂತ ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಮ್ ಸ್ಥಾಪಿಸಲು ಮುಂದಾಗಿದೆ.

BBMP: ಮಳೆ ಅವಘಡ ತಪ್ಪಿಸಲು ಕಂಟ್ರೋಲ್ ರೂಮ್ ಸ್ಥಾಪನೆಗೆ ಮುಂದಾದ ಬಿಬಿಎಂಪಿ
ಬಿಬಿಎಂಪಿ
ಆಯೇಷಾ ಬಾನು
|

Updated on:May 24, 2023 | 11:26 AM

Share

ಬೆಂಗಳೂರು: ನಗರದಾದ್ಯಂತ ವರುಣನ ಅಬ್ಬರ ಜೋರಾಗಿದ್ದು ಭಾರೀ ಅನಾಹುತಗಳು ಸಂಭವಿಸುತ್ತಿವೆ(Bengaluru Rain). ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಗರದಾದ್ಯಂತ ತಾತ್ಕಾಲಿಕ ಮಾನ್ಸೂನ್  ಕಂಟ್ರೋಲ್ ರೂಮ್ ಸ್ಥಾಪಿಸಲಿದೆ(Monsoon Control Rooms). ಈ ಕಂಟ್ರೋಲ್ ರೂಮ್​ಗಳು ಭಾರೀ ಮಳೆಯ ಸಮಯದಲ್ಲಿ ಜನರಿಗೆ ಸಹಾಯ ಮಾಡಲಿವೆ.

ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಹಲವೆಡೆ ಮಹಾ ಮಳೆಯಿಂದ ಅನೇಕ ಅವಘಡಗಳು ಸಂಭವಿಸಿವೆ. ಮರಗಳು, ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಮನೆಗಳಲ್ಲಿ ಮಳೆ ನೀರು ತುಂಬಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಕೆರೆಯಂತಾಗಿ ವಾಹನ ಸವಾರರು ಜೀವ ಕೈಯಲ್ಲಿಡಿದು ಸಂಚರಿಸುವಂತಾಗಿದೆ. ಹೀಗಾಗಿ ಮಳೆಯಿಂದಾದ ಸಮಸ್ಯೆಗಳನ್ನು ಕಡಿಮೆ ಮಾಡಲು ಮತ್ತು ಸಕಾಲಿಕ ಸಹಾಯವನ್ನು ನೀಡಲು ಬಿಬಿಎಂಪಿಯು ನಗರದಲ್ಲಿ ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಮ್ಗಳನ್ನು ಸ್ಥಾಪಿಸಲು ಮುಂದಾಗಿದೆ. ಪಾಲಿಕೆ ಉಪವಿಭಾಗ ಮಟ್ಟದಲ್ಲಿ 63 ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಮ್​ಗಳನ್ನು ಸ್ಥಾಪಿಸಲು ಸಿದ್ಧತೆ ನಡೆಯುತ್ತಿದೆ. ಜೂನ್ 1ಕ್ಕೆ ಈ ಕೊಠಡಿಗಳು ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rains: ರಾಜ್ಯದ ಈ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, 3 ದಿನ ಮಹಾ ಮಳೆಯ ಮುನ್ಸೂಚನೆ

ಬಿಬಿಎಂಪಿ ತಾತ್ಕಾಲಿಕ ಮಾನ್ಸೂನ್ ಕಂಟ್ರೋಲ್ ರೂಂಗಳ ಸ್ಥಾಪನೆಗೆ ಟೆಂಡರ್ ನಡೆಸಿದ್ದು, ಪ್ರತಿ ನಿಯಂತ್ರಣ ಕೊಠಡಿಗೆ ಸುಮಾರು 1.25 ಲಕ್ಷ ರೂ. ವೆಚ್ಚವಾಗಲಿದೆ. ನಿಯಂತ್ರಣ ಕೊಠಡಿಗಳು ವರ್ಷವಿಡೀ ವಲಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮಾನ್ಸೂನ್ ಸಮಯದಲ್ಲಿ, ನಾವು ಉಪ-ವಿಭಾಗ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುತ್ತೇವೆ. ಭಾರೀ ಮಳೆಯಿಂದ ಉಂಟಾಗುವ ತುರ್ತು ಸಂದರ್ಭಗಳಲ್ಲಿ ನಿಯಂತ್ರಣ ಕೊಠಡಿಯ ಮೂಲಕ ಸಮಸ್ಯೆಯ ಮಾಹಿತಿ ಕಲೆ ಹಾಕಿ ಸಮಸ್ಯೆಯನ್ನು ಪರಿಹರಿಸಲಾಗುತ್ತೆ ಎಂದು ಅಧಿಕಾರಿ ತಿಳಿಸಿದರು.”

ಪ್ರತಿಯೊಂದು ನಿಯಂತ್ರಣ ಕೊಠಡಿಯು ಎಲ್ಲಾ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸುವ ರೀತಿ ಸಂಪೂರ್ಣವಾಗಿ ಸಜ್ಜುಗೊಳಿಸಲಾಗುತ್ತದೆ ಮತ್ತು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೂಲಕ ಇದು ನಿರ್ವಹಿಸಲ್ಪಡುತ್ತದೆ. ಇದು ಐದು ಸಿಬ್ಬಂದಿ ತಂಡವಾಗಿರುತ್ತದೆ. ನಿಯಂತ್ರಣ ಕೊಠಡಿಗಳಲ್ಲಿ ಮರಗಳು ಬಿದ್ದ ಸಂದರ್ಭದಲ್ಲಿ ಮರ ಕಡಿಯುವ ಉಪಕರಣಗಳು, ಮುಳುಗಡೆಯ ಸಂದರ್ಭದಲ್ಲಿ 10 ಎಚ್‌ಪಿ ನೀರಿನ ಪಂಪ್‌ಗಳು, ಮಣ್ಣು ತೆಗೆಯುವ ಯಂತ್ರಗಳು ಮತ್ತು ಸಿಬ್ಬಂದಿಗೆ ತುರ್ತು ಸಹಾಯಕ್ಕಾಗಿ ಗಂಬೂಟ್ ಮತ್ತು ಜಾಕೆಟ್‌ಗಳನ್ನು ಬಳಸಿಕೊಳ್ಳಲು ಎಲ್ಲಾ ರೀತಿಯ ಉಪಕರಣಗಳು ಲಭ್ಯವಿರಲಿದೆ. ಸಮಸ್ಯೆ ಏನೆಂದು ತಿಳಿದು ಸಿಬ್ಬಂದಿ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುತ್ತಾರೆ. ಹೀಗಾಗಿ ಅವಶ್ಯಕ ಉಪಕರಣಗಳ ಖರೀದಿಗೆ ಸಿದ್ಧತೆ ನಡೆದಿದೆ ಎಂದರು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:24 am, Wed, 24 May 23

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?