AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮಾದರಿಯಂತೆ ಬೆಂಗಳೂರಿನ ಅಂಡರ್​ಪಾಸ್ ರಸ್ತೆಗಳಿಗೆ ಹೈಟೆಕ್ ಟಚ್​ ನೀಡಲು ಬಿಬಿಎಂಪಿ ಚಿಂತನೆ: ದಿಲ್ಲಿಯಲ್ಲಿ ಹೇಗಿವೆ? ಇಲ್ಲಿದೆ ವಿವರ

ಬೆಂಗಳೂರು ನಗರದ ಅಂಡರ್​ಪಾಸ್​ನಲ್ಲಿ ನೀರು ತುಂಬಿಕೊಂಡಿದ್ದರ ಪರಿಣಾಮ ಅಮಾಯಕರ ಜೀವ ಬಲಿಯಾದ ಬೆನ್ನಲ್ಲೇ, ಬಿಬಿಎಂಪಿ ಎಚ್ಚೆತ್ತುಕೊಂಡಿದ್ದು, ದೆಹಲಿ ಮಾದರಿ ಅಂಡರ್​ಪಾಸ್ ನಿರ್ಮಾಣಕ್ಕೆ ಬಿಬಿಎಂಪಿ ಸಜ್ಜಾಗಿದೆ. ಏನಿದು ದೆಹಲಿ ಮಾದರಿ ಅಂಡರ್​ಪಾಸ್? ವಿಶೇಷತೆ ಏನು? ಇಲ್ಲಿದೆ ವಿವರ

ದೆಹಲಿ ಮಾದರಿಯಂತೆ ಬೆಂಗಳೂರಿನ ಅಂಡರ್​ಪಾಸ್ ರಸ್ತೆಗಳಿಗೆ ಹೈಟೆಕ್ ಟಚ್​ ನೀಡಲು ಬಿಬಿಎಂಪಿ ಚಿಂತನೆ: ದಿಲ್ಲಿಯಲ್ಲಿ ಹೇಗಿವೆ? ಇಲ್ಲಿದೆ ವಿವರ
ಬೆಂಗಳೂರು ಅಂಡರ್​ಪಾಸ್ ರಸ್ತೆ
ರಮೇಶ್ ಬಿ. ಜವಳಗೇರಾ
|

Updated on: May 23, 2023 | 10:33 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಅಂಡರ್​ಪಾಸ್​ ರಸ್ತೆಗಳಲ್ಲಿ (Bengaluru Underpass) ನೀರು ತುಂಬಿಕೊಂಡಿದ್ದರ ಪರಿಣಾಮ ಅಮಾಯಕರ ಜೀವ ಬಲಿಯಾದ ಬೆನ್ನಲ್ಲೇ, ಬಿಬಿಎಂಪಿ ಅಲರ್ಟ್ ಆಗಿದೆ. ದೆಹಲಿ ಮಾಡಲ್ ಮೊರೆ ಹೋಗಿರುವ ಪಾಲಿಕೆ, ಬೆಂಗಳೂರಿನ ಅಂಡರ್ ಪಾಸ್​ಗಳಿಗೆ ದೆಹಲಿ ಅಂಡರ್​ಪಾಸ್​ಗಳಂತೆ ಹೈಟೆಕ್ ಟಚ್ ಕೊಡಲು ಮುಂದಾಗಿವೆ. ದೆಹಲಿಯಲ್ಲಿರುವ ಅಂಡರ್ ಪಾಸ್ ರಸ್ತೆಗಳನ್ನು ಹೈಟೆಕ್ ಟಚ್ ಮೂಲಕ ನಿರ್ಮಾಣ ಮಾಡಲಾಗಿದೆ. ಹೀಗಾಗಿ ಮಳೆ ನೀರು ಶೇಖರಣೆಯಾಗದೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಇದೆ. ಹೀಗಾಗಿ ಬಿಬಿಎಂಪಿ ಸಹ ದೆಹಲಿ ಮಾಡಲ್ ಫಾಲೋ ಮಾಡಲು ಚಿಂತನೆ ನಡೆಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿವೆ ಯಮರೂಪಿ ಅಂಡರ್ ಪಾಸ್​ಗಳು; ಮಳೆ ಬಂದಾಗ ವಾಹನ ಸವಾರರೆ ಜಾಗ್ರತೆ

ದೆಹಲಿ ಅಂಡರ್​ಪಾಸ್​ಗಳ ವಿಶೇಷತೆ ಏನು?

ರಾಜಧಾನಿ ದೆಹಲಿಯ ಅಂಡರ್ ಪಾಸ್​ಗಳಲ್ಲಿ ಇದೇ ಸಮಸ್ಯೆ ಇತ್ತು. ಮಳೆ ಬಂದರೆ ಸಾಕು ಅಂಡರ್​ಪಾಸ್​ಗಳು ಜಲಾವೃತವಾಗುತ್ತಿದ್ದವು. ಬಳಿಕ ದೆಹಲಿಯ ಅಂಡರ್ ಪಾಸ್ ಗಳಲ್ಲಿ ತಂತ್ರಜ್ಞಾನದ ಸಾಹಾಯದಿಂದ ಅಂಡರ್ ಪಾಸ್ ಗೆ ಹೈಟೆಕ್ ಟಚ್ ನೀಡಲಾಗಿದೆ. ಈಗ ಎಷ್ಟೇ ದೊಡ್ಡ ಮಳೆ ಬಂದು ನೀರು ನುಗ್ಗಿದರೂ ಅಂಡರ್ ಪಾಸ್ ನಲ್ಲಿ ಶೇಖರಣೆಯಾಗದೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಇದೆ. ಜೊತೆಗೆ ಹೈಟೆಕ್ ಟಚ್ ನಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ.

ಅಂಡರ್​ಪಾಸ್ ಸುತ್ತಲ್ಲಿನ ಪ್ರದೇಶವನ್ನ ಎತ್ತರಿಸುವುದು. ಅಂಡರ್ ಪಾಸ್​ಗೆ ಹೊರ ಭಾಗದಿಂದ ನೀರು ಶೇಖರಣೆಯಾಗದಂತೆ ತಡೆ ನಿರ್ಮಾಣ ಮಾಡೋದು. ಅಂಡರ್​ಪಾಸ್​ಗೆ ನುಗ್ಗುವ ನೀರು ಹೀರಿಕೊಳ್ಳಲು ದೊಡ್ಡ ಗಾತ್ರದ ಇಂಗು ಗುಂಡಿ ನಿರ್ಮಿಸೋದು. ನೀರು ಹೊರ ಹಾಕಲು ಸ್ವಯಂ ಚಾಲಿತ ಪಂಪ್ ಸೆಟ್ ಅಳವಡಿಸೋದು, ಹೆವಿ ಡ್ಯೂಟಿ ಸಾಮರ್ಥ್ಯದ ಮೋಟಾರ್ ಅಳವಡಿಸೋದು. ಮಳೆಗಾಲದ ಸಮಯದಲ್ಲಿ ಅಂಡರ್ ಪಾಸ್ ನಿಗಾವಹಿಸಲು ಸಿಸಿಟಿವಿ ಅಳವಡಿಸಿದ್ದಾರೆ.

ಇದನ್ನೂ ಒದಿ: Underpasses in Bengaluru: ಬೆಂಗಳೂರಿನಲ್ಲೆಷ್ಟಿವೆ ಅಂಡರ್​ಪಾಸ್​ಗಳು? ಇಲ್ಲಿದೆ ವಿವರ

ಬಿಬಿಎಂಪಿ ಸಿದ್ಧತೆಗಳು ಏನು.?

  1. ಕೆ.ಆರ್. ಸರ್ಕಲ್​ನ ಇಳಿಜಾರಿನಲ್ಲಿ ನಿರ್ಮಿಸಿರುವ 4 ರಸ್ತೆಗಳ ಮತ್ತು ಕೆ.ಆರ್.ವೃತ್ತದ ರಸ್ತೆ ಮೇಲೆ ಮೇಲೆ ಬೀಳುವ ಎಲ್ಲಾ ಮಳೆ ನೀರು ಕೆಳಸೇತುವೆಯ ಚರಂಡಿಗೆ ಆಗಮಿಸುತ್ತಿದ್ದು, ಸದರಿ ಚರಂಡಿ ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತಿದೆ. ಪ್ರಸ್ತುತ ಬೆಂಗಳೂರು ನಗರದಲ್ಲಿ ಕಡಿಮೆ ಅವಧಿಯಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ಎಲ್ಲಾ ಮಳೆ ನೀರು ಕೆಳಸೇತುವೆಗೆ ಹೋಗದಂತೆ, ಕೆಳಸೇತುವೆಯ ಏರುವ ಮತ್ತು ಇಳಿಯುವ ಱಂಪ್​ ಮುಂಭಾಗದಲ್ಲಿ ಪ್ರತ್ಯೇಕ ಚರಂಡಿ ನಿರ್ಮಿಸಿ, ನೇರವಾಗಿ ರಾಜಕಾಲುವೆಗೆ ಸಂಪರ್ಕ ಕಲ್ಪಿಸಲು ಮುಂದಾಗಿದೆ.
  2. ರಸ್ತೆಯ ಮೇಲ್ಭಾಗದಿಂದ ಮಳೆ ನೀರು ಕೆಳಸೇತುವೆಗೆ ಹೋಗದಂತೆ ಱಂಪ್​ ಮುಂಭಾಗದಲ್ಲಿ ಪ್ರತ್ಯೇಕವಾಗಿ ಚರಂಡಿ ನಿರ್ಮಿಸುವ ಜೊತೆಗೆ ಒಂದು ರಸ್ತೆ ಉಬ್ಬರ ಸಹ ನಿರ್ಮಿಸಲು ಉದ್ದೇಶಿಸಲಾಗಿದೆ.
  3. ಕೆಳಸೇತುವೆಯ ಕೆಳಭಾಗದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನ ಅಳವಡಿಸುವುದರ ಜೊತೆಗೆ, Vertical Clearance Gauge Beam ಅನ್ನು ಆಳವಡಿಸುವುದು. ಅತೀ ಪ್ರವಾಹ ಉಂಟಾದ ತುರ್ತು ಸಂದರ್ಭಗಳಲ್ಲಿ ಒಂದು Boom Barrier ಅನ್ನು ಸಹ ನಿರ್ಮಿಸಿ ಕೆಳಸೇತುವೆಯ ವಾಹನ ನಿರ್ಬಂಧ ಪಡಿಸುವ ಕ್ರಮವನ್ನು ಸಂಚಾರಿ ಪೊಲೀಸ್​ ಇಲಾಖೆಯ ಸಹಯೋಗದಿಂದ ನಿರ್ವಹಣೆ ಮಾಡಲು ಉದ್ದೇಶಿಸಲಾಗಿದೆ.

ಅಂಡರ್​ಪಾಸ್​ನಲ್ಲಿ ಸಿಸಿ ಕ್ಯಾಮರಾ ಕಣ್ಗಾವಲು

ರಸ್ತೆಯ ಮೇಲ್ಭಾಗದಿಂದ ಮಳೆ ನೀರು ಕೆಳಸೇತುವೆಗೆ ಹೋಗದಂತೆ ಱಂಪ್​ ಮುಂಭಾಗದಲ್ಲಿ ಪ್ರತ್ಯೇಕವಾಗಿ ಚರಂಡಿ ನಿರ್ಮಿಸುವ ಜೊತೆಗೆ ಒಂದು ರಸ್ತೆ ಉಬ್ಬರ ಸಹ ನಿರ್ಮಿಸಲು ಉದ್ದೇಶಿಸಲಾಗಿದೆ. ಕೆಳಸೇತುವೆಯ ಕೆಳಭಾಗದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನ ಅಳವಡಿಸುವುದರ ಜೊತೆಗೆ, Vertical Clearance Gauge Beam ಅನ್ನು ಆಳವಡಿಸುವುದು. ಅತೀ ಪ್ರವಾಹ ಉಂಟಾದ ತುರ್ತು ಸಂದರ್ಭಗಳಲ್ಲಿ ಒಂದು Boom Barrier ಅನ್ನು ಸಹ ನಿರ್ಮಿಸಿ ಕೆಳಸೇತುವೆಯ ವಾಹನ ನಿರ್ಬಂಧ ಪಡಿಸುವ ಕ್ರಮವನ್ನು ಸಂಚಾರಿ ಪೊಲೀಸ್​ ಇಲಾಖೆಯ ಸಹಯೋಗದಿಂದ ನಿರ್ವಹಣೆ ಮಾಡಲು ಉದ್ದೇಶಿಸಲಾಗಿದೆ.

ಒಟ್ಟಿನಲ್ಲಿ ಮಳೆ ಬಂದರೆ ಕೆರೆಯಂತಾಗೋ ಬಿಬಿಎಂಪಿ ಅಂಡರ್​ಪಾಸ್​ಗಳಿಂದ ಮುಕ್ತಿ ಹೊಂದಲು, ಈ ಮೂರು ಕ್ರಮಗಳನ್ನು 15 ದಿನಗಳಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲು ಬಿಬಿಎಂಪಿ ಉದ್ದೇಶಿದೆ. ಆದರೆ ಈ ಯೋಜನೆ ಎಷ್ಟು ಬೇಗ ಬೆಂಗಳೂರಿನಲ್ಲಿ ಜಾರಿಯಾಗುತ್ತೆ..? ಅದು ಎಷ್ಟರ ಮಟ್ಟಿಗೆ ಗುಣಮಟ್ಟದಿಂದ ಕೂಡಿರುತ್ತೆ ಎನ್ನುವುದನ್ನು ನೋಡಬೇಕಿದೆ.

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್