BBMP Budget 2023: ಇಂದು ಬಿಬಿಎಂಪಿ ಬಜೆಟ್ ಮಂಡನೆ, ಜನಪರ ಯೋಜನೆಗಳಿಗೆ ಆಧ್ಯತೆ

ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯಪುರ ಇಂದು ಬೆಳಿಗ್ಗೆ 11:30ಕ್ಕೆ ಬಜೆಟ್​​ ಮಂಡಿಸಲಿದ್ದಾರೆ.

BBMP Budget 2023: ಇಂದು ಬಿಬಿಎಂಪಿ ಬಜೆಟ್ ಮಂಡನೆ, ಜನಪರ ಯೋಜನೆಗಳಿಗೆ ಆಧ್ಯತೆ
ಬಿಬಿಎಂಪಿ
Follow us
|

Updated on:Mar 02, 2023 | 8:26 AM

ಬೆಂಗಳೂರು: ಬಿಬಿಎಂಪಿಯು(BBMP) ಇಂದು 2023-24ನೇ ಸಾಲಿನ ಬಿಬಿಎಂಪಿ ಬಜೆಟ್ ಮಂಡಿಸುತ್ತಿದೆ(BBMP Budget 2023). ಬೆಂಗಳೂರಿನ ಟೌನ್​ಹಾಲ್​ನಲ್ಲಿ(Townhall) ಬಿಬಿಎಂಪಿ ಬಜೆಟ್ ಮಂಡನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಚುನಾವಣೆ(Karnataka Assembly Elections 2023) ಸಮೀಪಿಸುತ್ತಿರುವ ಹಿನ್ನೆಲೆ ನಿರೀಕ್ಷೆಯಂತೆ ಸರಕಾರದ ಆಣತಿಯಂತೆ ಜನಪರ ಯೋಜನೆಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡುವ ಸಾಧ್ಯತೆಗಳು ಹೆಚ್ಚಿವೆ.

ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯಪುರ ಇಂದು ಬೆಳಿಗ್ಗೆ 11:30ಕ್ಕೆ ಬಜೆಟ್​​ ಮಂಡಿಸಲಿದ್ದಾರೆ. ಸುಮಾರು 10 ಸಾವಿರ ಕೋಟಿ ಆಯವ್ಯಯ ಮಂಡನೆ ಸಾಧ್ಯತೆ ಇದೆ. ವೃದ್ಧರಿಗೆ ಆಶ್ರಯ ನೀಡುವ ಶ್ರವಣ ವಸತಿ ಯೋಜನೆ, ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಕಲ್ಪಿಸಲು ಸಾವಿತ್ರಿಬಾಯಿ ಫುಲೆ ಹೆಸರಲ್ಲಿ ಯೋಜನೆ ಜಾರಿ ಸಾಧ್ಯತೆ. ಇಂದಿರಾ ಕ್ಯಾಂಟೀನ್ ಗೆ ಅನುದಾನ ಮೀಸಲಿಡುವ ಸಾಧ್ಯತೆ ಇದೆ. ಹಾಗೂ ನೂತನ ಫ್ಲೈಓವರ್, ಒಂಟಿ ಮನೆ ಯೋಜನೆ, ಬಿಬಿಎಂಪಿ ಶಾಲಾ ಕಾಲೇಜು ಅಭಿವೃದ್ಧಿ, ನೂತನ ರಸ್ತೆಗೆ ಹಣ ಮೀಸಲು ಬಗ್ಗೆ ಬಜೆಟ್​ನಲ್ಲಿ ಘೋಷಣೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆ: ಇಂದು ಆಯೋಗದ ಪಿಐಎಲ್​ ವಿಚಾರಣೆ ನಡೆಸಲಿರುವ ಹೈಕೋರ್ಟ್

2022-23ನೇ ಸಾಲಿನಲ್ಲಿ ಮಾ. 31ರ ರಾತ್ರಿ 10,484.28 ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಆನಂತರ ಸರಕಾರ ಆಯವ್ಯಯದ ಗಾತ್ರವನ್ನು 377.5 ಕೋಟಿಗಳಷ್ಟು ಹೆಚ್ಚಿಸಿ ಒಪ್ಪಿಗೆ ನೀಡಿತ್ತು. ಈ ಬಾರಿ ಸಹ ಅಧಿಕಾರಿಗಳೇ ಬಜೆಟ್ ಮಂಡನೆ ಮಾಡಲಿದ್ದು, ಸುಮಾರು 10 ಸಾವಿರ ಕೋಟಿ ರೂ. ಆಯವ್ಯಯ ಮಂಡನೆ ಸಾಧ್ಯತೆ ಇದ್ದು, ಚುನಾವಣೆಗೆ ಪೂರಕವಾದ ಯೋಜನೆಗಳು ಘೋಷಣೆಯಾಗುವ ನಿರೀಕ್ಷೆಗಳಿವೆ.

ಹಲವು ನಿರೀಕ್ಷೆಗಳು

ವೃದ್ಧವರಿಗೆ ಆಶ್ರಯ ನೀಡುವ ಶ್ರವಣ ವಸತಿ ಯೋಜನೆ, ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಕಲ್ಪಿಸಲಿ ಸಾವಿತ್ರಿಬಾಯಿ ಫುಲೆ ಹೆಸರಲ್ಲಿ ಯೋಜನೆ ಜಾರಿ ಸಾಧ್ಯತೆ ಇದೆ. ಇನ್ನು ಇಂದಿರಾ ಕ್ಯಾಂಟೀನ್​ಗೂ ಅನುದಾನ ಮೀಸಲಿಡುವ ಸಾಧ್ಯತೆಗಳಿವೆ. ಕೇಂದ್ರ ಮತ್ತು ರಾಜ್ಯ ಬಜೆಟ್‌ಗಳನ್ನು ಮಂಡಿಸಿರುವ ಬಿಜೆಪಿ, ಬೆಂಗಳೂರಿಗರನ್ನು ಒಲಿಸಿಕೊಳ್ಳಲು ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸುವ ನಿರೀಕ್ಷೇಯಿದ. ಶಿಕ್ಷಣ, ಆರೋಗ್ಯ ಮತ್ತು ಕಲ್ಯಾಣ ಕ್ರಮಗಳ ಮೇಲೆ ಬಜೆಟ್ ಒತ್ತು ನೀಡಿದರೆ ಆಸ್ತಿ ತೆರಿಗೆಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ. ಕಳೆದ ವರ್ಷದ ಕೆಲವು ಯೋಜನೆಗಳನ್ನು ಉಳಿಸಿಕೊಳ್ಳಲು ಬಿಬಿಎಂಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:26 am, Thu, 2 March 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ