AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಬಳಿ ಸೈಟ್ ಇದೆಯಾ? ಅದನ್ನು ಸರಿಯಾಗಿ ನಿರ್ವಹಣೆ ಮಾಡ್ತಿಲ್ವಾ, ಹಾಗಾದ್ರೆ ಬಿಬಿಎಂಪಿಯಿಂದ ದಂಡ ಫಿಕ್ಸ್

ಕಳೆದ ವಾರ ಬೆಂಗಳೂರಿನಲ್ಲಿ ಚಿರತೆ ಪತ್ತೆಯಾಗಿದ್ದ ಹಿನ್ನೆಲೆ ಬಿಬಿಎಂಪಿ ಫುಲ್ ಅಲರ್ಟ್ ಆಗಿದ್ದು, ಖಾಲಿ ಸೈಟ್ ದಾರರಿಗೆ ಶಾಕ್ ಕೊಡುವುದಕ್ಕೆ ಮುಂದಾಗಿದೆ.‌ ಯಾವುದೇ ಖಾಲಿ ಸೈಟುಗಳ ನಿರ್ವಹಣೆ ಮಾಡದೇ ಹಾಗೇ ಬಿಟ್ಟರೆ ದಂಡ ಪಾವತಿಸಬೇಕಾಗುತ್ತೆ. ಸೈಟ್ ನಿರ್ವಾಹಣೆ ಮಾಡದೆ ಪೊದೆಗಳ ಬೆಳೆಯಲು ಬಿಟ್ಟರೆ ಎಂತಹ ಸೈಟ್ ಮಾಲೀಕರಿಗೆ ಬಿಬಿಎಂಪಿ ಬಿಸಿ ಮುಟ್ಟಿಸಲಿದೆ.

ನಿಮ್ಮ ಬಳಿ ಸೈಟ್ ಇದೆಯಾ? ಅದನ್ನು ಸರಿಯಾಗಿ ನಿರ್ವಹಣೆ ಮಾಡ್ತಿಲ್ವಾ, ಹಾಗಾದ್ರೆ ಬಿಬಿಎಂಪಿಯಿಂದ ದಂಡ ಫಿಕ್ಸ್
ಬಿಬಿಎಂಪಿ
Poornima Agali Nagaraj
Poornima Agali Nagaraj| Edited By: ಆಯೇಷಾ ಬಾನು|

Updated on: Nov 05, 2023 | 2:27 PM

Share

ಬೆಂಗಳೂರು, ನ.05: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಸೈಟ್​ಗಳನ್ನ (Site) ಖರೀದಿ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಸೈಟ್ ಖರೀದಿ ಮಾಡಿ ಅದನ್ನು ಸರಿಯಾಗಿ ನಿರ್ವಹಣೆ ಮಾಡದೇ ಹಾಗೆಯೇ ಬಿಡುತ್ತಿದ್ದಾರೆ. ಹೀಗಾಗಿ ಗಿಡ- ಗಂಟೆಗಳು ಬೆಳೆದುಕೊಂಡು ಕಾಡಿನಂತೆ ಕಾಣುತ್ತಿವೆ. ಹೀಗಾಗಿ ಹಾವುಗಳು ಸೇರಿಕೊಳ್ಳುತ್ತಿವೆ. ಅಲ್ಲದೇ ಅಕ್ಕಪಕ್ಕ ವಾಸಿಸುವ ಜನರಿಗೂ ಸಮಸ್ಯೆಗಳಾಗುತ್ತಿವೆ. ಇದಲ್ಲದೇ ಮೊನ್ನೆ ಹೆಚ್​ಎಸ್​ಆರ್ ಲೇಔಟ್ ಚಿರತೆ ಬಂದಾಗ ಅದನ್ನ ಹಿಡಿಯೋದಕ್ಕೆ ಅರಣ್ಯ ಅಧಿಕಾರಿಗಳು ರೋಸಿ ಹೋಗಿದ್ರು.‌ ಮತ್ತೆ ಅಂತಹ ಘಟನೆಗಳು ನಡೆಯಬಾರದು ಎನ್ನುವ ಕಾರಣಕ್ಕೆ ಬಿಬಿಎಂಪಿ (BBMP) ಸೈಟ್ ಗಳ ಮಾಲೀಕರಿಗೆ ಶಾಕ್ ಕೊಡುವುದಕ್ಕೆ ಮುಂದಾಗಿದೆ.

ಹೌದು, ಹೆಚ್​ಎಸ್​ಆರ್ ಲೇಔಟ್​ನ ಖಾಲಿ ಜಾಗದಲ್ಲಿ ಚಿರತೆ ಪತ್ತೆಯಾಗಿತ್ತು. ಆದರೆ ಖಾಲಿ ನಿವೇಷನ ಜಾಗದಲ್ಲಿ ಗಿಡ ಗಂಟಿಗಳು ಬೆಳೆದು ಕೊಂಡಿದ್ದು ಚಿರತೆಯನ್ನ ಹಿಡಿಯುದಕ್ಕೆ ಅರಣ್ಯ ಅಧಿಕಾರಿಗಳು ಹರಸಾಹಸ ಪಡಬೇಕಾಯ್ತು.‌ ಅಲ್ಲದೇ ಇತ್ತೀಚಿಗೆ ಬಫರ್ ವಲಯಗಳಲ್ಲಿನ ಹಲವಾರು ಖಾಲಿ ನಿವೇಶನಗಳಲ್ಲಿ ಅಧಿಕೃತ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ.‌ ಹೀಗಾಗಿ ಇವುಗಳಿಗೆ ಬ್ರೇಕ್ ಹಾಕುವ ಜೊತೆಗೆ ಖಾಲಿ ಜಾಗದಲ್ಲಿ ಪೊದೆ ಬೆಳೆಯಲು ಬಿಟ್ರೆ ಇನ್ಮುಂದೆ ದಂಡ ವಿಧಿಸೋಕೆ ಬಿಬಿಎಂಪಿ ಮುಂದಾಗಿದೆ. ಇನ್ಮುಂದೆ ಯಾವುದೇ ಖಾಲಿ ಸೈಟುಗಳ ನಿರ್ವಹಣೆ ಮಾಡದೇ ಹಾಗೇ ಬಿಟ್ಟರೆ ಬಿಬಿಎಂಪಿ ದಂಡ ವಿಧಿಸಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಆತಂಕ; ಮನೆಯ ಬಾಗಿಲು ಬಳಿ ಚಿರತೆ ಕಂಡು ಕಿರುಚಿದ ಬಾಲಕ

ಇನ್ನು, 2019ರಲ್ಲಿ ಖಾಲಿ ಸೈಟ್ ನಿರ್ವಹಣೆ ಮಾಡದೇ ಬಿಡುವ ಮಾಲೀಕರ ಸೈಟ್ ಗಳನ್ನ ಬಿಬಿಎಂಪಿಯೇ ನಿರ್ವಹಣೆ ಮಾಡುತ್ತಿತ್ತು. ಈ ನಿರ್ವಣೆಗೆ ಬಿಬಿಎಂಪಿ ದಂಡವನ್ನ ವಸೂಲಿ ಮಾಡುತ್ತಿತ್ತು. ಆದರೆ ಈ ಕುರಿತಾಗಿ ವಿರೋಧ ವ್ಯಕ್ತವಾಗಿದ್ದು ಇದು ಕೆಎಂಸಿ ಆ್ಯಕ್ಟ್ ನಲ್ಲಿದೇ, ಇಲ್ಲ ಎಂಬ ಬಗ್ಗೆ ಚರ್ಚೆಗಳಾಗುತ್ತಿದ್ದವು. ಇದೀಗಾ ಈ ಆದೇಶವನ್ನ ಮತ್ತೆ ಹೊರಡಿಸುತ್ತಿದ್ದು, ಸೈಟ್ ನಲ್ಲಿನ ಕಸವನ್ನ ಬಿಬಿಎಂಪಿಯೇ ತೆಗೆದು ಶುಕ್ಕ ವಿಧಿಸಲಾಗುತ್ತದೆ. ಈ ಕುರಿತಾಗಿ ನೋಟಿಸ್ ಸಹ ನೀಡಲಾಗುತ್ತಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Poornima Agali Nagaraj
Poornima Agali Nagaraj
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ