AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಕಳಿಪುರಂ ರೈಲ್ವೆ ಹಳಿ ಬಳಿ ಸುರಂಗ ನಿರ್ಮಾಣಕ್ಕೆ ಅನುಮತಿಯಿಲ್ಲದೆ ಜಿಲೆಟಿನ್ ಬಳಸುತ್ತಿರುವ ಬಿಬಿಎಂಪಿ

ಬೆಂಗಳೂರಿನ ಓಕಳಿಪುರಂ ಬಳಿ ಕಾಮಗಾರಿ ನಡೆಯುತ್ತಿದ್ದು 45 ಅಡಿ ಉದ್ದದ ಪೈಪ್ ಅಳವಡಿಕೆಗಾಗಿ ಸುರಂಗ ನಿರ್ಮಾಣ ಮಾಡಲಾಗಿದೆ. ನೆಲದ ಅಡಿಯಿಂದ ಸುರಂಗ ಮಾರ್ಗ ಹಾದುಹೋಗಿದೆ. ಬೆಂಗಳೂರು-ಚೆನ್ನೈ ರೈಲ್ವೆ ಮಾರ್ಗದ ಕೆಳಗೆ ಸುರಂಗ ನಿರ್ಮಾಣ ಮಾಡಲಾಗುತ್ತಿದೆ.

ಓಕಳಿಪುರಂ ರೈಲ್ವೆ ಹಳಿ ಬಳಿ ಸುರಂಗ ನಿರ್ಮಾಣಕ್ಕೆ ಅನುಮತಿಯಿಲ್ಲದೆ ಜಿಲೆಟಿನ್ ಬಳಸುತ್ತಿರುವ ಬಿಬಿಎಂಪಿ
ಓಕಳಿಪುರಂ ಬಳಿ ನಡೆಯುತ್ತಿರುವ ಕಾಮಗಾರಿ
TV9 Web
| Edited By: |

Updated on:Jul 01, 2022 | 4:48 PM

Share

ಬೆಂಗಳೂರು: ಅನುಮತಿ ಇಲ್ಲದೆ ರೈಲ್ವೆ ಹಳಿ(Railway Track) ಕೆಳಗೆ ಸ್ಫೋಟಕ ಜಿಲೆಟಿನ್(Gelatin)  ಬಳಕೆ ಮಾಡಲಾಗಿದ್ದು ಬಿಬಿಎಂಪಿ(BBMP) ಕಾರ್ಯದಿಂದ ಸಾವಿರಾರು ಜನರ ಜೀವಕ್ಕೆ ಕುತ್ತು ಎದುರಾಗಿದೆ. ಬಿಬಿಎಂಪಿ ಕಾರ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರಿನ ಓಕಳಿಪುರಂ ಬಳಿ ಕಾಮಗಾರಿ ನಡೆಯುತ್ತಿದ್ದು 45 ಅಡಿ ಉದ್ದದ ಪೈಪ್ ಅಳವಡಿಕೆಗಾಗಿ ಸುರಂಗ ನಿರ್ಮಾಣ ಮಾಡಲಾಗಿದೆ. ನೆಲದ ಅಡಿಯಿಂದ ಸುರಂಗ ಮಾರ್ಗ ಹಾದುಹೋಗಿದೆ. ಬೆಂಗಳೂರು-ಚೆನ್ನೈ ರೈಲ್ವೆ ಮಾರ್ಗದ ಕೆಳಗೆ ಸುರಂಗ ನಿರ್ಮಾಣ ಮಾಡಲಾಗುತ್ತಿದೆ. ಕಲ್ಲುಗಳನ್ನು ಸ್ಫೋಟಿಸಲು ಬಿಬಿಎಂಪಿ ಜಿಲೆಟಿನ್ ಬಳಸುತ್ತಿದೆ. ರೈಲ್ವೆ ಇಲಾಖೆ ಅನುಮತಿ ಪಡೆಯದೆ BBMP ಸುರಂಗ ನಿರ್ಮಾಣಕ್ಕಾಗಿ ಜಿಲೆಟಿನ್ ಬಳಕೆ ಮಾಡುತ್ತಿದೆ. ಜಿಲೆಟಿನ್ ಬಳಕೆಯಿಂದಾಗಿ ರೈಲ್ವೆ ಹಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಇದರಿಂದ ಜನರ ಜೀವಕ್ಕೆ ಕುತ್ತು ತರುವ ಕೆಲಸ ಮಾಡ್ತಿದೆಯಾ ಬಿಬಿಎಂಪಿ? ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ದಾಟುವಾಗ ಸಂಭವಿಸಿದ ಅಪಘಾತಗಳಲ್ಲಿ ಕಳೆದ 4 ವರ್ಷಗಳಲ್ಲಿ ಪ್ರಾಣ ಕಳೆದುಕೊಂಡಿದ್ದು 500 ಪಾದಚಾರಿಗಳು

ಸ್ಫೋಟಕ ವಸ್ತುಗಳ ಬಳಕೆಗೆ ಅನುಮತಿ ನೀಡಿಲ್ಲ ಇನ್ನು ಘಟನೆ ಸಂಬಂಧ ರೈಲ್ವೆ ಇಲಾಖೆ ಹೆಚ್ಚುವರಿ ಮಂಡಲ ರೈಲ್ವೆ ವ್ಯವಸ್ಥಾಪಕರಾದ ಕುಸುಮಾ ಮಾತನಾಡಿದ್ದು, ಬಿಬಿಎಂಪಿಗೆ ಕಾಮಗಾರಿ ನಡೆಸಲು ಅನುಮತಿ ನೀಡಲಾಗಿದೆ. ಆದರೆ ಸ್ಫೋಟಕ ವಸ್ತುಗಳ ಬಳಕೆಗೆ ಅನುಮತಿ ನೀಡಿಲ್ಲ. ಕೂಡಲೇ ಅಧಿಕಾರಿಗಳನ್ನ ಸ್ಥಳಕ್ಕೆ ಕಳುಹಿಸಲಾಗುತ್ತದೆ ಎಂದರು.

ಬೆಂಗಳೂರಲ್ಲಿ ರಸ್ತೆ ದಾಟುವಾಗ ಸಂಭವಿಸಿದ ಅಪಘಾತಗಳಲ್ಲಿ ಕಳೆದ 4 ವರ್ಷಗಳಲ್ಲಿ ಪ್ರಾಣ ಕಳೆದುಕೊಂಡಿದ್ದು 500 ಪಾದಚಾರಿಗಳು ಬೆಂಗಳೂರಲ್ಲಿ ರಸ್ತೆ ದಾಟುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಒನ್ ವೇ ಆಗಿದ್ದರೂ ಎರಡೂ ಕಡೆ ನೋಡ್ಕೊಂಡು ರಸ್ತೆ ದಾಟಬೇಕು ಎಂಬುದು ಬೆಂಗಳೂರಿನವರಿಗೆ ಗೊತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಅಂದರೆ 2017 ರಿಂದ 2020 ರವರೆಗಿನ ರಸ್ತೆ ಅಪಘಾತಗಳ ವಿಶ್ಲೇಷಣೆ ಪ್ರಕಾರ ಬೆಂಗಳೂರಿನಲ್ಲಿ (Bengaluru) ರಸ್ತೆ ದಾಟಲು ಪ್ರಯತ್ನಿಸುವಾಗ 500 ಪಾದಚಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದೆ. ಸಂಶೋಧನಾ ಸಂಸ್ಥೆಯಾದ ವರ್ಲ್ಡ್ ರಿಸೋರ್ಸಸ್ ಇನ್‌ಸ್ಟಿಟ್ಯೂಟ್ (WRI) ವಿಶ್ಲೇಷಿಸಿದ ಕ್ರ್ಯಾಶ್ ಡೇಟಾ ಪ್ರಕಾರ, ನಾಲ್ಕು ವರ್ಷಗಳಲ್ಲಿ ಒಟ್ಟು 907 ಪಾದಚಾರಿಗಳ (Pedestrian) ಸಾವು ಸಂಭವಿಸಿದೆ. ಅದರಲ್ಲಿ ಶೇ60 ಜನರು ರಸ್ತೆಗಳನ್ನು ದಾಟುವಾಗ ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಹೆಚ್ಚಿನ ರಸ್ತೆಗಳಲ್ಲಿ ಪಾದಚಾರಿ ಮೂಲಸೌಕರ್ಯಗಳ ಕೊರತೆ, ವಿಶೇಷವಾಗಿ ಸುರಕ್ಷಿತ ಕ್ರಾಸಿಂಗ್ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಪ್ರಾಥಮಿಕ ಕಾರಣವೆಂದು ತಜ್ಞರು ಹೇಳಿರುವುದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಫೂಟ್‌ ಓವರ್‌ಬ್ರಿಡ್ಜ್‌ಗಳನ್ನು ನಿರ್ಮಿಸುವ ಬದಲು, ಸುರಕ್ಷಿತ ಅಟ್-ಗ್ರೇಡ್ ಕ್ರಾಸಿಂಗ್‌ಗಳು ಇರಬೇಕು ಎಂದು ಅವರು ಹೇಳುತ್ತಾರೆ. ಡಬ್ಲ್ಯುಆರ್‌ಐ ಎಫ್ಐಆರ್​​​ಗಳನ್ನು ಒಟ್ಟುಗೂಡಿಸಿ ಅಪಘಾತಗಳು ಸಂಭವಿಸಿದ ಕೆಲವು ಸ್ಥಳಗಳನ್ನು ಪರಿಶೀಲಿಸಿತು. ಪಾದಾಚಾರಿ ಸಾವು ಪ್ರಕರಣಗಳಲ್ಲಿ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರೇ ಅತೀ ಹೆಚ್ಚು ಪ್ರಾಣ ಕಳೆದುಕೊಂಡಿರುವುದು.ಅಂದರೆ 185 ಹಿರಿಯ ನಾಗರಿಕರು ಸಾವಿಗೀಡಾಗಿದ್ದಾರೆ. 46 ಮತ್ತು 60 ವಯಸ್ಸಿನ ನಡುವೆ ಇರುವ 128 ಮಂದಿ ಇಂಥಾ ಅಪಘಾತಗಳಲ್ಲಿ ಸಾವಿಗೀಡಾಗಿದ್ದಾರೆ.

Published On - 4:46 pm, Fri, 1 July 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ